ತುಮಕೂರು | ಕೆ ಬಿ ಸಿದ್ದಯ್ಯ ಅವರ ಕಾವ್ಯ ಸೆಕ್ಯುಲರ್ ಕಾವ್ಯ: ಅಗ್ರಹಾರ ಕೃಷ್ಣಮೂರ್ತಿ

Date:

ಕಾವ್ಯ‌ ಆಧ್ಯಾತ್ಮಿಕ ಮತ್ತು ರಾಜಕೀಯವಾಗಿರಬೇಕೆಂಬುದು ಕೆ ಬಿ ಸಿದ್ದಯ್ಯ ಅವರ ನಿಲುವಾಗಿತ್ತು. ಹಾಗಾಗಿ ಅವರ ಕಾವ್ಯ ಸೆಕ್ಯುಲರ್ ಕಾವ್ಯ ಎಂದು ಹಿರಿಯ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.

ತುಮಕೂರು ನಗರದ ಕನ್ನಡ ಭವನದಲ್ಲಿ ಚಲನ ಪ್ರಕಾಶನ ಸಹಕಾರಿ ಮತ್ತು ಕೆ ಬಿ ಗೆಳೆಯರ ಬಳಗದ ವತಿಯಿಂದ ಕೆ ಬಿ ಸಿದ್ದಯ್ಯ ಅವರ ‘ತೊಗಲ ಮಂಟಪ’ ಖಂಡಕಾವ್ಯ ಜನಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಕೆ ಬಿ ಸಿದ್ದಯ್ಯ ಅವರು ಕೆ ಬಿ ಕಾವ್ಯಕ್ಕೆ ವಿಮರ್ಶಕರು ನ್ಯಾಯ ಒದಗಿಸಿಲ್ಲ. ರವಿಕುಮಾರ್ ನೀಹ ವಿಮರ್ಶೆಯಲ್ಲಿ ಸಿದ್ದಯ್ಯ ಅವರ ಕಾವ್ಯಕ್ಕೆ ನ್ಯಾಯ ಒದಗಿಸಿದ್ದಾರೆ. ಕೆ ಬಿ ಸಿದ್ದಯ್ಯ ಕಾವ್ಯ ರಚನೆಯ ಆರಂಭದಲ್ಲೇ ಭಿನ್ನ ಮಾರ್ಗ ಆಯ್ಕೆ ಮಾಡಿಕೊಂಡಿದ್ದರು. ಅನುಭವ ನೆಲೆಯಲ್ಲಿ ಹುಡುಕಾಟ ನಡೆಸುವ ಮೂಲಕ ಕುಲಮೂಲ ಭಾಷೆ ಬಳಸಿದ್ದಾರೆ. ಕೆ ಬಿ ಕಾವ್ಯ ಹಲವರನ್ನು ಪ್ರಭಾವಿಸಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಂಗಕರ್ಮಿ ಕೋಟಾಗನಹಳ್ಳಿ ರಾಮಯ್ಯ ಮಾತನಾಡಿ, “ಕೆ ಬಿ ಸಿದ್ದಯ್ಯ ಕಾವ್ಯದ ಮಣೆಗಾರ. ವಿಮರ್ಶೆ ಮತ್ತು ಸ್ಥಾನಮಾನಗಳನ್ನು ಮೀರುವ ಶಕ್ತಿ ಕೆ ಬಿ ಕಾವ್ಯಕ್ಕಿದೆ” ಎಂದರು.

ಐಜಿಪಿ ರವಿಕಾಂತೇಗೌಡ ಮಾತನಾಡಿ, “ಕೆ ಬಿ ಅವರ ಕಾವ್ಯವನ್ನು ಅರ್ಥ ಮಾಡಿಕೊಳ್ಳುವಂತಹ ಸಿದ್ದತೆ ಕನ್ನಡದ ಕಾವ್ಯ ವಿಮರ್ಶಕರಿಗೆ ಪ್ರಾಪ್ತವಾಗಿಲ್ಲ. ಕಾವ್ಯ ಮತ್ತು ಕವಿಯ ಜತೆ ವಿಮರ್ಶೆ ನಡೆಯಬೇಕು. ಕೆ ಬಿ ಸಿದ್ದಯ್ಯ ಲೋಕ ನೀತಿಗೆ ವಿರುದ್ಧವಾಗಿ ಯೋಚಿಸಿದವರು” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕಾರ್ಮಿಕ ವಿರೋಧಿ ನೀತಿ: ವಾಡಿ ಎಸಿಸಿ ಕಾರ್ಖಾನೆ ಗುತ್ತಿಗೆ ಕಾರ್ಮಿಕರಿಂದ ಪ್ರತಿಭಟನೆ

ಕಾರ್ಯಕ್ರಮದಲ್ಲಿ ಕರ್ನಾಟಕದ ದೆಹಲಿ ಪ್ರತಿನಿಧಿ ಟಿ ಬಿ ಜಯಚಂದ್ರ, ಹಂಪಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಬಿ ಎಂ ಪುಟ್ಟಯ್ಯ, ಕವಯತ್ರಿ ಸವಿತಾ ನಾಗಭೂಷಣ್, ಹಿರಿಯ ಹೋರಾಟಗಾರ ಕೋಟಗಾನಹಳ್ಳಿ ರಾಮಯ್ಯ, ಚರಕ ಆಸ್ಪತ್ರೆಯ ಡಾ ಬಸವರಾಜು, ಗಂಗರಾಜಮ್ಮ ಕೆ ಬಿ ಸಿದ್ದಯ್ಯ, ಕೊಟ್ಟಶಂಕರ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...