ತುಮಕೂರು | ಡಿ.20ರಂದು ಕೆ ದೊರೈರಾಜ್ ಅವರ ‘ನಮ್ಮ ಹಟ್ಟಿ’ ಕೃತಿ ಬಿಡುಗಡೆ

Date:

ತಮ್ಮ ಜೀವನದುದ್ದಕ್ಕೂ ವ್ಯವಸ್ಥೆಯೊಂದಿಗೆ ಎಂದಿಗೂ ರಾಜಿಯಾಗದೇ, ಶೋಷಿತರ ಸಮಾನತೆಯ ಹಕ್ಕುಗಳಿಗೆ ಅತ್ಯಂತ ಪ್ರಾಮಾಣಿಕ ಧ್ವನಿಯಾದ ನಾಡಿನ ಸಾಕ್ಷಿಪ್ರಜ್ಞೆ ಪ್ರೊ. ಕೆ ದೊರೈರಾಜ್ ಅವರ ಆತ್ಮಕಥೆ ʼನಮ್ಮ ಹಟ್ಟಿʼ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮವನ್ನು ಡಿಸೆಂಬರ್‌ 20ರ ಬೆಳಿಗ್ಗೆ 10-30ಕ್ಕೆ ತುಮಕೂರು ನಗರದ ಅಮಾನಿಕೆರೆ ಸಮೀಪವಿರುವ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮಕ್ಕೆ ನಾಡಿನ ಚಿಂತಕರು, ಪ್ರಜ್ಞಾವಂತರು, ಸಾಹಿತಿಗಳು, ಯುವಜನರು, ದಲಿತ-ರೈತ-ಕಾರ್ಮಿಕ-ಮಹಿಳಾ ಹೋರಾಟಗಾರರು ಹಾಗೂ ವಿದ್ಯಾರ್ಥಿ ಮಿತ್ರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ ನೀಡಲಾಗಿದೆ.

ಪ್ರತಿಪದ ಪ್ರಕಾಶನದಿಂದ ಜನಪರ ಚಿಂತಕ ಕೆ ದೊರೈರಾಜ್ ಅವರ ‘ನಮ್ಮ ಹಟ್ಟಿ’ ಒಂದು ಹಟ್ಟಿಯ ಆತ್ಮಕಥಾನಕ ಕೃತಿ ಬಿಡುಗಡೆ ಸಮಾರಂಭ ನಡೆಯುತ್ತಿದ್ದು, ಹಿರಿಯ ಚೇತನವು ಸವೆಸಿದ ಸಾರ್ಥಕ ಜೀವನದ ಅನುಭವ ಕಥನವು ಅನಾವರಣಗೊಳ್ಳುವ ಸುಂದರ ಕ್ಷಣಗಳಿಗೆ ಸಾಕ್ಷಿಯಾಗೋಣ ಬನ್ನಿ ಎಂದು ಡಿ ಟಿ ವೆಂಕಟೇಶ್ ಅವರು ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಕಥೆಗಾರ ಮತ್ತು ವಿಮರ್ಶಕ ಡಾ. ಜಿ ವಿ ಆನಂದಮೂರ್ತಿ ಒಂದು ಹಟ್ಟಿಯ ಆತ್ಮಕಥನಕವನ್ನು ನಿರೂಪಣೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಸಮತೋಲನಾ ಆಸ್ತಿ ಪ್ರಕರಣ; ಸಹಾಯಕ ಲೆಕ್ಕಾಧಿಕಾರಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲು ದಲಿತ ಸೇನೆ ಆಗ್ರಹ

ಚಿಕ್ಕಮಗಳೂರಿನ ಹಿರಿಯ ಹೋರಾಟಗಾರ ಹಾಗೂ ಚಿಂತಕ ಎಚ್ ಎಂ ರುದ್ರಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೃತಿ ಕುರಿತು ಡಾ. ಎಸ್ ನಟರಾಜ ಬೂದಾಳ್ ಮಾತನಾಡುವರು.

ವೇದಿಕೆಯಲ್ಲಿ ಚಿಂತಕ ಕೆ ದೊರೈರಾಜ್, ನಿವೃತ್ತ ವಿಶೇಷ ಜಿಲ್ಲಾಧಿಕಾರಿ ಎಸ್ ಮೂರ್ತಿ, ಲೇಖಕಿ ಬಾ ಹ ರಮಾಕುಮಾರಿ, ಹಿರಿಯ ಹೋರಾಟಗಾರ ಸಯ್ಯೀದ್ ಮುಜೀಬ್, ರೇಷ್ಮೆ ಇಲಾಖೆಯ ನಿವೃತ್ತ ಉಪ ನಿರ್ದೇಶಕ ವೈ ಕೆ ಬಾಲಕೃಷ್ಣಪ್ಪ, ಲೇಖಕ ಡಾ.ಜಿ ವಿ ಆನಂದಮೂರ್ತಿ ಭಾಗವಹಿಸುವರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...