ತುಮಕೂರು | ಕೆ. ಎನ್ ರಾಜಣ್ಣ ಬಡವರ ಮನುಷ್ಯ : ಬರಗೂರು ರಾಮಚಂದ್ರಪ್ಪ

Date:

  ರಾಜಣ್ಣ ಬಡವರ ಮನುಷ್ಯ. ಬಡವರಿಗಾಗಿ ದುಡಿದ ವ್ಯಕ್ತಿತ್ವ ಅವರದ್ದು‌. ಹಾಗಾಗಿ ಇಷ್ಟು ಜನ ಸೇರಿದ್ದಾರೆ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು

ಸಹಕಾರ ಸಚಿವ ಕೆ. ಎನ್. ರಾಜಣ್ಣ ಅವರ 75 ನೇ ವರ್ಷದ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ತುಮಕೂರು ನಗರದ ಜೂನಿಯರ್ ಕಾಲೇಜು ಮೖದಾನದಲ್ಲಿ ಆಯೋಜಿಸಿದ್ದ ರಾಜಣ್ಣ @75 ಅಮೃತ ಮಹೋತ್ಸವ ಮತ್ತು ಅಭಿನಂದನಾ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 

ಕೆ.ಎಸ್. ನಿಸಾರ್ ಅಹಮದ್ ನಿಮ್ಮೊಳಗಿದ್ದು, ನಿಮ್ಮಂತಾಗದೆ ಎಂಬ ಕವಿತೆಯಿದೆಲ್ಲ ಅದು ರಾಜಣ್ಣ ಅವರ ವ್ಯಕ್ತಿತ್ವ. ಏಕಶಿಲಾ ಬೆಟ್ಟ ಎಷ್ಟು ಗಟ್ಟಿಯೋ ರಾಜಣ್ಣ ಅವರ ವ್ಯಕ್ತಿತ್ವವೂ ಅಷ್ಟೇ ಗಟ್ಟಿಯಾಗಿದೆ. ಯಾರದರೂ ಎದುರುಬಿದ್ದರೆ ಎದುರು ಬೀಳ್ತಾರೆ. ಪ್ರೀತಿಯಿಂದ್ದರೆ, ಪ್ರೀತಿಯಿಂದ ಕಾಣುತ್ತಾರೆ. ಏಕಾಂಗಿಯಾಗಿ ಹೋರಾಟ ಮಾಡುವ ನಾಯಕ. ರಾಜಣ್ಣ ಜಾತ್ಯಾತೀತ ಸೇವಾ ನಾಯಕ. ಮೀಸಲಾತಿ ಕ್ಷೇತ್ರದಲ್ಲಿ ನನಗೆ ಟಿಕೆಟ್ ಬೇಡ. ಸಾಮಾನ್ಯ ಕ್ಷೇತ್ರದಲ್ಲಿ ಟಿಕೆಟ್ ಕೊಡಿ ಎಂದಿದ್ದರು. ಮೀಸಲಾತಿ ಬಿಟ್ಟು ಸಾಮಾನ್ಯ ಕ್ಷೇತ್ರಸಲ್ಲಿ ಗೆದ್ದದ್ದು ಇದು ಕರ್ನಾಟಕದ ಇತಿಹಾಸದಲ್ಲೇ ವಿರಳ. ದೇವರಾಜು ಅರಸು ಅವರ ಪ್ರೇರಣೆಯಿಂದ ರಾಜಕಾರಣಕ್ಕೆ ಬಂದಿದ್ದಾರೆ. ಸಹಕಾರ ಸಾರ್ವಭೌಮ ಎಂಬ ಬಿರುದನ್ನು ಕಟ್ಟಿಕೊಟ್ಟಿದ್ದಾರೆ. ಅಭಿನಂದನಾ ಗ್ರಂಥದಲ್ಲಿ ಸಹಕಾರ ಸಾರ್ವಭೌಮನ ಸಾರವನ್ನು ಕಟ್ಟಿಕೊಟ್ಟಿದೆ. ರಾಜಣ್ಣ ಅಂದರೆ ಏನು ?  ಎನ್ನುವುದನ್ನು ಅರ್ಥಯಿಸಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಣ್ಣ ಕೂಗು ವೀರ ಅಲ್ಲ. ಕೆಲಸಗಾರ‌. ಅವರು ಮಾಡಿದ ಸೇವಾ ಕಾರ್ಯಕ್ಕೆ  ಜನರು ಮೆಚ್ಚಿದ್ದಾರೆ. ಸರ್ಕಾರಿ ಶಾಲೆಗಳು ಸಂಭ್ರಮದಲ್ಲಿ ನಲಿಯುವಂತೆ ಮಾಡಬೇಕು. ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲದಂತೆ ಅಭಿವೃದ್ಧಿಪಡಿಸಬೇಕು ಎಂದು ರಾಜಣ್ಣ ಅವರಿಗೆ ಬರಗೂರು ರಾಮಚಂದ್ರಪ್ಪ ಮನವಿ ಮಾಡಿದರು.

ರಾಷ್ಟ್ರದ ರಾಜಕಾರಣವನ್ನು ಸೈದ್ಧಾಂತಿಕ ಹಾಗೂ ಸಮಯ ಸಾಧಕ ರಾಜಕಾರಣ ಎಂದು ವಿಂಗಡಿಸಬಹುದು. ಆದರೆ, ರಾಜಣ್ಣ ಅವರದ್ದು ಸಮಯೋಚಿತ ರಾಜಕಾರಣ. ಯಾರನ್ನಾದರೂ ಗೆಲ್ಲಿಸಿ ಅಂದರೆ ಗೆಲ್ಲಿಸುತ್ತಾರೆ. ಅದು ಅವರ ವ್ಯಕ್ಯಿತ್ವ ಎಂದರು.

ತುಮಕೂರು ಸಾಂಸ್ಕೃತಿಕ, ಶೈಕ್ಷಣಿಕವಾಗಿ ಸಮೃದ್ಧವಾಗಿ ನಲಿಯುತ್ತಿರುವ ಜಿಲ್ಲೆಯಾಗಿದ್ದು ಶಿಕ್ಷಣದ ಹೆಬ್ಬಾಗಿಲಾದೆ. ಅಭಿವೃದ್ದಿ ಅಂದರೆ ಬಂಡವಾಳಿಗರನ್ನು ಕರೆಸುವುದು ಅಷ್ಟೇ ಅಲ್ಲ. ಬಂಡವಾಳ ಭಗವಂತನಾಗಿ ಬರುವುದು ಬೇಡ, ಭಕ್ತನಾಗಿ ಬರಲಿ.ಶೖಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ತುಮಕೂರಿನ ಆಸ್ಮಿತೆ ಉಳಿಸಲು ಇಬ್ಬರು ಸಚಿವರು ಸಂಕಲ್ಪ ಮಾಡಬೇಕು ಎಂದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...