ತುಮಕೂರು | ಕರ್ನಾಟಕದಲ್ಲಿರುವ ರಾಜ್ಯಪಾಲರು ನಂಬರ್ ಒನ್ ಕಳ್ಳ: ಬೆಮೆಲ್ ಕಾಂತರಾಜು ಆರೋಪ

Date:

ಕರ್ನಾಟಕದಲ್ಲಿರುವ ರಾಜ್ಯಪಾಲರು ನಂಬರ್ ಒನ್ ಕಳ್ಳ. ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಬೇಕಾದ ರಾಜ್ಯಪಾಲರು ತಮ್ಮ ಕಚೇರಿಯನ್ನು ಬಿಜೆಪಿ ಕಚೇರಿಯನ್ನಾಗಿ ಮಾಡಿಕೊಂಡು ಸಂವಿಧಾನಕ್ಕೆ ಕೊಳ್ಳಿ ಇಡುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜು ಆರೋಪಿಸಿದರು.

ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದ ಜೆ ಕೆ ಕಂಫರ್ಟ್‌ನಲ್ಲಿ ಬ್ಲಾಕ್ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಸ್ವಾಭಿಮಾನಿ ಸಾಧನಾ ಸಮಾವೇಶ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

“ಜನರ ಆರ್ಶೀವಾದದಿಂದ 136 ಸ್ಥಾನ ಪಡೆದು ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಸಲುವಾಗಿ ಬಿಜೆಪಿ, ಜೆಡಿಎಸ್ ಪಕ್ಷಗಳು ಸುಳ್ಳು ಆರೋಪಗಳನ್ನು ಮಾಡಿ ಸರ್ಕಾರಕ್ಕೆ, ಸಿದ್ದರಾಮಯ್ಯನವರಿಗೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡುತ್ತಿವೆ. ಬಿಜೆಪಿ, ಜೆಡಿಎಸ್ ನಾಯಕರ ಮೇಲೆ ಸಾಕಷ್ಟು ಆರೋಪಗಳಿದ್ದು, ತನಿಖೆ ನಡೆದಿದ್ದರೂ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿಲ್ಲ. ಆದರೆ ಸಿದ್ದರಾಮಯ್ಯನವರ ಮೇಲೆ ಕೇವಲ ಸುಳ್ಳು ಆರೋಪಗಳು ಬಂದ ಕೂಡಲೇ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ಸಂವಿಧಾನಕ್ಕೆ ಕೊಳ್ಳಿಯಿಡುವ ಕೆಲಸ ಮಾಡಿದ್ದಾರೆ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೊಡ್ಡಬಳ್ಳಾಪುರ ಮಾಜಿ ಶಾಸಕ ವೆಂಕಟರಮಣಯ್ಯ ಮಾತನಾಡಿ, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಪ್ರಾರಂಭದಲ್ಲೇ ಪಂಚ ಗ್ಯಾರಂಟಿಗಳನ್ನು ನೀಡಿ ದೇಶಕ್ಕೆ ಕರ್ನಾಟಕ ಮಾದರಿ ರಾಜ್ಯವೆಂಬ ಹೆಗ್ಗುರುತನ್ನು ಸಾಧಿಸಿದೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ. ಗ್ಯಾರಂಟಿ ನೀಡಲು ಹಣವಿಲ್ಲವೆಂದು ಆರೋಪಿಸಿದ್ದ ಬಿಜೆಪಿ, ಜೆಡಿಎಸ್ ಪಕ್ಷಗಳು ವಿವಿಧ ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಯನ್ನು ನಕಲು ಮಾಡಿವೆ. ಬರೀ ಸುಳ್ಳು ಭರವಸೆಗಳನ್ನು ನೀಡುತ್ತಲೇ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಆದರೆ ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ದೇಶದ ಅಭಿವೃದ್ದಿಯಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರವಾದುದು” ಎಂದರು.

ಮಹಿಳಾ ನಾಯಕಿ ಗೀತಾರಾಜಣ್ಣ ಮಾತನಾಡಿ, “ರಾಜ್ಯ ಸರ್ಕಾರ ನೀಡಿರುವ ಪಂಚ ಗ್ಯಾರಂಟಿಗಳು ಯಾವುದೇ ಜಾತಿ, ಧರ್ಮ, ಪಕ್ಷದ ಭೇದವಿಲ್ಲದೆ ಪ್ರತಿಯೊಂದು ಕುಟುಂಬಕ್ಕೂ ತಲುಪಿವೆ. ಕಾಂಗ್ರೆಸ್ ಪಕ್ಷ ಎಂದೂ ಜಾತಿ ಆಧಾರಿತ ರಾಜಕಾರಣ ಮಾಡಿಲ್ಲ. ಸಂವಿಧಾನದ ಆಶಯಗಳಿಗೆ ಬದ್ಧವಾಗಿ ಎಲ್ಲ ಜಾತಿ, ಧರ್ಮದ ಅಭಿವೃದ್ದಿಗೆ ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಬೇಕೆನ್ನುವ ಉದ್ದೇಶದಿಂದ ಶೀಘ್ರದಲ್ಲೇ ತುಮಕೂರಿನಲ್ಲಿ ಸ್ವಾಭಿಮಾನಿ ಸಾಧನಾ ಸಮಾವೇಶ ನಡೆಯಲಿದ್ದು, ಪಕ್ಷದ ಕಾರ್ಯಕರ್ತರು, ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಭಿವೃದ್ದಿ ಪರ ಸರ್ಕಾರದ ಜೊತೆ ನಾವಿದ್ದೇವೆಂದು ಸಾರಬೇಕಿದೆ” ಎಂದರು.

ಎಐಸಿಸಿ ಸದಸ್ಯ ಸುಬ್ರಮಣಿ ಶ್ರೀಕಂಠೇಗೌಡ ಮಾತನಾಡಿ, “ಜನಪರ, ಅಭಿವೃದ್ಧಿಪರ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆಟ್ಟ ಹೆಸರು ತರುವುದಕ್ಕೋಸ್ಕರ ಬಿಜೆಪಿ, ಜೆಡಿಎಸ್ ಪಕ್ಷಗಳು ಸುಳ್ಳು ಆರೋಪ ಮಾಡುತ್ತಿದ್ದು, ಪಕ್ಷದ ಕಾರ್ಯಕರ್ತರು ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ, ಸಾಧನೆಗಳನ್ನು ಪ್ರತಿ ಮನೆಗೆ ತಲುಪಿಸುವ ಕೆಲಸವನ್ನು ಮಾಡಬೇಕಿದೆ. ಆ ಮೂಲಕ ಬಿಜೆಪಿ, ಜೆಡಿಎಸ್ ಮಾಡುತ್ತಿರುವ ಆರೋಪಗಳು ಸುಳ್ಳೆಂಬ ಅಂಶವನ್ನು ಒತ್ತಿ ಹೇಳಬೇಕಿದೆ” ಎಂದರು.

ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಾಸ್ತಿಗೊಂಡನಹಳ್ಳಿ ದೇವರಾಜ್, ನಾಗರಾಜ್, ಪಕ್ಷದ ವಕ್ತಾರ ಮುರಳೀಧರ ಹಾಲಪ್ಪ, ವೀಕ್ಷಕ ಪಂಚಾಕ್ಷರಯ್ಯ, ಎಸ್‌ಸಿ ಘಟಕದ ಜಿಲ್ಲಾಧ್ಯಕ್ಷ ಲಿಂಗರಾಜ್, ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಅನಿಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಂಬರೀಶ್, ಸೇವಾದಳದ ಅಧ್ಯಕ್ಷ ಕೊಂಡಜ್ಜಿ ಕುಮಾರ್, ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಕಿಸಾನ್ ಘಟಕದ ಅಧ್ಯಕ್ಷರಾದ ಚಂದ್ರಶೇಖರ್, ನಟರಾಜ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ನೂರುಲ್ಲಾ, ಒಬಿಸಿ ಘಟಕದ ಅಧ್ಯಕ್ಷ ಚೇತನ್, ಮುಖಂಡರಾದ ವಾಲೆ ಚಂದ್ರಯ್ಯ, ನಂಜುಂಡಪ್ಪ, ಭೈರಪ್ಪ, ವೇಣುಗೋಪಾಲ್ ಸೇರಿದಂತೆ ನೂರಾರು ಮಂದಿ ಮುಖಂಡರು, ಕಾರ್ಯಕರ್ತರು ಇದ್ದರು.

ವರದಿ : ಗಿರೀಶ್ ಕೆ ಭಟ್, ತುರುವೇಕೆರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...