ತುಮಕೂರು | ಸಾಹಿತ್ಯ ಅಕಾಡೆಮಿಯಿಂದ ಜು.10 ರಂದು ಯುವ ಕವಿಗೋಷ್ಠಿ : ಮಲ್ಲಿಕಾ ಬಸವರಾಜು

Date:

ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಲೇಖಕಿಯರ ಸಂಘ ಜೊತೆಗೂಡಿಸಿ ಬೆಂಗಳೂರು ವಿಭಾಗದ ಯುವ ಕವಿಗೋಷ್ಠಿಯನ್ನು ನಗರದ ಜಿಲ್ಲಾ ಆಸ್ಪತ್ರೆ ಆವರಣದ ಜಿಲ್ಲಾ ಆಸ್ಪತ್ರೆ ಸಭಾಂಗಣದಲ್ಲಿ ಜುಲೈ 10ರಂದು ಬೆಳಗ್ಗೆ 10.30 ಗಂಟೆಗೆ ಏರ್ಪಡಿಸಲಾಗಿದೆ ಎಂದು ಕರ್ನಾಟಕ ಲೇಖಕಿಯರ ಸಂಘದ ತುಮಕೂರು ಜಿಲ್ಲಾಧ್ಯಕ್ಷೆ ಮಲ್ಲಿಕಾ ಬಸವರಾಜು ತಿಳಿಸಿದರು

  ತುಮಕೂರು ನಗರದ ಪತ್ರಿಕಾ ಭವನದಲ್ಲಿ ನಡೆದ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವ ಮನಸ್ಸುಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಯುವ ಕವಿಗೋಷ್ಠಿಯನ್ನು ಆಯೋಜಿಸಿದ್ದು, ಯುವ ಕವಿಗೋಷ್ಠಿಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಎಲ್.ಎನ್.ಮುಕುಂದರಾಜ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಕರ್ನಾಟಕ ಲೇಖಕಿಯರ ಸಂಘದ ತುಮಕೂರು ಜಿಲ್ಲಾ ಶಾಖೆಯ ಅಧ್ಯಕ್ಷರಾದ ಮಲ್ಲಿಕಾ ಬಸವರಾಜು ವಹಿಸುವರು. ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್., ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಅಸ್ಗರ್ ಬೇಗ್, ಸಾಹಿತ್ಯ ಅಕಾಡೆಮಿ ಸದಸ್ಯರಾದ ಪಿ.ಚಂದ್ರಿಕಾ ಹಾಗೂ ಡಾ.ಅಕ್ಕೈ ಪದ್ಮಶಾಲಿ ಉಪಸ್ಥಿತರಿರುವರು .

 ಉದ್ಘಾಟನಾ ಸಮಾರಂಭದ ನಂತರ ನಡೆಯುವ ಯುವ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ತುಮಕೂರಿನ ಸೂರ್ಯಕೀರ್ತಿ ವಹಿಸುವರು.ಆಯ್ದ 22 ಜನ ಯುವ ಕವಿಗಳು ತಮ್ಮ ಸ್ವರಚಿತ ಕವನಗಳನ್ನು ವಾಚಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ‘ಕಾವ್ಯ ಎನ್ನುವುದು ಎಲ್ಲಿದೆ?’ ಕುರಿತು ಕಥೆಗಾರ ಡಾ.ನಟರಾಜ್ ಹುಳಿಯಾರ್ ಉಪನ್ಯಾಸ ನೀಡುವರು ನಂತರ ಸಂವಾದ ನಡೆಯಲಿದೆ.ಸಾಹಿತ್ಯ ಅಕಾಡೆಮಿ ಸದಸ್ಯರಾದ ಡಾ.ಕಾ.ವೆಂ.ಶ್ರೀನಿವಾಸಮೂರ್ತಿ ಹಾಗೂ ಡಾ.ರವಿಕುಮಾರ್ ಬಾಗಿ ಭಾಗವಹಿಸುವರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಸಂಚಾಲಕಿ ಸುಮ ಸತೀಶ್ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಯುವತಲೆ ಮಾರು ಕಳೆದುಹೋಗಿದೆ ಎಂಬ ಆರೋಪದ ನಡುವೆ ಗಂಭೀರವಾಗಿ ಕಾವ್ಯ ಓದುವ, ಬರೆಯುವವರು ಹೆಚ್ಚಿದ್ದಾರೆ. ಅದರಲ್ಲೂ ವಿವಿಧ ವಲಯದ, ವಿವಿಧ ವರ್ಗದ ಯುವಕವಿಗಳು ಕಾವ್ಯ ಕಟ್ಟುವಲ್ಲಿ ಸಶಕ್ತರಾಗಿದ್ದಾರೆ.ಅಂಥವರನ್ನು ಗುರುತಿಸಿ ಅವಕಾಶ ನೀಡುತ್ತಿದೆ ಕರ್ನಾಟಕ ಸಾಹಿತ್ಯ ಅಕಾಡೆಮಿ. ಇಂಥ ಯುವಕವಿಗೋಷ್ಠಿಗಳನ್ನು ಜಿ.ಎಸ್.ಶಿವರುದ್ರಪ್ಪ ಅವರು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದಾಗ ಸಂಘಟಿಸಿದ್ದರು.ಶಿವಮೊಗ್ಗದಲ್ಲಿ ನಡೆದ ಯುವಕವಿಗೋಷ್ಠಿಯಲ್ಲಿ ನಮ್ಮ ಈಗಿನ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಭಾಗವಹಿಸಿದ್ದರು. ‘ಕಾವ್ಯಕ್ಷೇತ್ರದಲ್ಲಿ ಬೆಳೆಯಲು ಬಹುದೊಡ್ಡ ಪ್ರೋತ್ಸಾಹ ನೀಡಿತು’ ಎನ್ನುವುದು ಮುಕುಂದರಾಜ್ ಅವರ ಹೆಮ್ಮೆಯ ಮಾತು. ಅವರ ಅವಧಿಯಲ್ಲಿ ಒಟ್ಟು ನಾಲ್ಕು ವಲಯಮಟ್ಟದ ಯುವಕವಿಗೋಷ್ಠಿಗಳು ನಡೆಯಲಿವೆ.

ಈಗಾಗಲೇ ಮೈಸೂರು ಭಾಗದ ಯುವಕವಿಗೋಷ್ಠಿ ಹಾಸನದಲ್ಲಿ ಹಾಗೂ ಕಲಬುರ್ಗಿ ಭಾಗದ ಯುವಕವಿಗೋಷ್ಠಿ, ಹೊಸಪೇಟೆಯಲ್ಲಿ ಜರುಗಿದೆ. ಇನ್ನೊಂದು ಕವಿಗೋಷ್ಠಿ ಬೆಳಗಾವಿ ವಿಭಾಗ ಮಟ್ಟದ ಯುವಕವಿಗೋಷ್ಠಿ ಬೆಳಗಾವಿಯಲ್ಲಿ ನಡೆಯಲಿದೆ ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಲೇಖಕಿಯರ ಸಂಘದ ತುಮಕೂರು ಜಿಲ್ಲಾ ಶಾಖೆಯ ಅಧ್ಯಕ್ಷೆ ಮಲ್ಲಿಕಾ ಬಸವರಾಜು, ಹಿರಿಯ ಲೇಖಕಿಯರಾದ ಬಾ.ಹ.ರಮಾಕುಮಾರಿ,ಡಾ.ಬಿ.ಸಿ.ಶೈಲಾ ನಾಗರಾಜ್, ಹಾಗೂ ಸಿ.ಎನ್.ಸುಗುಣಾದೇವಿ ಹಾಗೂ ಕವಿಗೋಷ್ಠಿ ನಿರ್ವಾಹಕ ಗಣೇಶ ಅಮೀನಗಡ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...