ತುಮಕೂರು | ಕನ್ನಡಿಗರ ಕನಸಿನಲ್ಲೂ ಕೂಡಾ ಕನ್ನಡವೇ ಅನಾವರಣ : ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ

Date:

“ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿ, ಶಾಸ್ತ್ರೀಯ ಸ್ಥಾನಮಾನ ಗಳಿಸಿದ ನಮ್ಮ ಹೆಮ್ಮೆಯ ಕನ್ನಡ ಮಾತೃ ಭಾಷೆಯಾಗಿ ಕನ್ನಡಿಗರ ಸ್ವಪ್ನದಲ್ಲಿ ಸಹ ಕನ್ನಡವೇ ಪ್ರಾಧಾನ್ಯತೆ ಪಡೆದುಕೊಂಡಿದೆ” ಎಂದು ತುಮಕೂರು ಜಿಲ್ಲಾ  ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ತಿಳಿಸಿದರು.

ಗುಬ್ಬಿ ಪಟ್ಟಣಕ್ಕೆ ಆಗಮಿಸಿದ ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಕನ್ನಡ ಜ್ಯೋತಿ ಸುವರ್ಣ ರಥಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, “ನೂರಾರು ಕನ್ನಡ ಸಾಹಿತಿಗಳು, ಕವಿಗಳು ಕನ್ನಡ ಭಾಷೆಯನ್ನು ಹೆಮ್ಮೆಯಿಂದ ಬಣ್ಣಿಸಿದ್ದಾರೆ. ಇಂಥಹ ನಮ್ಮ ನಾಡಿಗೆ ಕರ್ನಾಟಕ ಎಂಬ ನಾಮಕರಣವಾಗಿ 50 ವರ್ಷ ಸಂದ ಹಿನ್ನಲೆಯಲ್ಲಿ ಈ ಕನ್ನಡಜ್ಯೋತಿ ರಾಜ್ಯದಲ್ಲಿ ಸಂಚರಿಸಿದೆ. ಇದಕ್ಕೆ ನಮ್ಮ ನಾಡ ಪ್ರೇಮ ಅನಾವರಣಗೊಳಿಸುವ ಜವಾಬ್ದಾರಿ ಎಲ್ಲರದ್ದಾಗಿದೆ” ಎಂದು ಕರೆ ನೀಡಿದರು.

ಜಾಗೃತರಾಗಿರಲಿ ಅಥವಾ ಮಲಗಿರಲಿ ಎಲ್ಲೆಲ್ಲೂ ಕನ್ನಡವೇ ಕಾಣುತ್ತಿದೆ. ನಮ್ಮ ನಾಡಲ್ಲಿ ಕನ್ನಡವೇ ಸಾರ್ವಭೌಮತ್ವ ಮೆರೆದಿದೆ. ವ್ಯಾವಹಾರಿಕ ಭಾಷೆಯಾಗಿದೆ. ಆಡಳಿತ ಭಾಷೆಯಾಗಿದೆ. ಈಗ ನ್ಯಾಯಾಂಗ ಇಲಾಖೆಯಲ್ಲಿ ಕನ್ನಡ ಮುನ್ನೆಲೆಗೆ ಬಂದಿದೆ. ಮುಂದಿನ ದಿನಗಳಲ್ಲಿ ಕನ್ನಡ ಉದ್ಯೋಗ ಸೃಷ್ಟಿಸುವ ಅನ್ನದ ಭಾಷೆಯಾಗಲಿದೆ ಎಂದ ಅವರು, ಕನ್ನಡ ಕಾರ್ಯಕ್ರಮ ಎಂದ ಕೂಡಲೇ ಮೈನವಿರೇಳಿಸುವ ವ್ಯಕ್ತಿತ್ವ. ನಮಗೆ ಮಾತೃಭಾಷೆ ಕಲಿಸಿದೆ. ಕನ್ನಡ ಬಗ್ಗೆ ಕೀಳರಿಮೆ ಬೆಳೆಸಿಕೊಳ್ಳದೆ ಕನ್ನಡದಲ್ಲೇ ಸಾಧನೆ ಮಾಡುವ ಅವಕಾಶ ಇದೆ. ಇಂದಿನ ಮಕ್ಕಳು ಶಿಕ್ಷಣವನ್ನು ಮಾತೃಭಾಷೆಯಲ್ಲೇ ಮುಗಿಸಿ, ಬೇರೆ ಭಾಷೆ ಅವಶ್ಯಕತೆಗೆ ತಕ್ಕಷ್ಟು ಕಲಿತು ಬದುಕು ಕಟ್ಟಿಕೊಳ್ಳಿ ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಸಾಪ ತುಮಕೂರು

ತಹಶೀಲ್ದಾರ್ ಬಿ.ಆರತಿ ಮಾತನಾಡಿ, ಕುಣಿಗಲ್ ತಾಲೂಕಿನ ಮೂಲಕ ಬಂದ ಕನ್ನಡ ಜ್ಯೋತಿ ರಥವನ್ನು ಸಿ.ಎಸ್.ಪುರ ಗ್ರಾಮದಲ್ಲಿ ಭವ್ಯ ಸ್ವಾಗತ ಕೋರಿ ನಂತರ ಗುಬ್ಬಿ ಪಟ್ಟಣದಲ್ಲಿ ಅದ್ದೂರಿ ಮೆರವಣಿಗೆ ಮಾಡಲಾಗಿದೆ. ಈ ಕನ್ನಡ ಕೆಲಸಕ್ಕೆ ಹಲವು ಸಂಘ ಸಂಸ್ಥೆಗಳು, ಜನ ಪ್ರತಿನಿಧಿಗಳು, ಕನ್ನಡಾಭಿಮಾನಿಗಳು ಸಾಥ್ ನೀಡಿದ್ದಾರೆ. ಮಳೆಯಲ್ಲೂ ರಥಯಾತ್ರೆ ಯಶಸ್ವಿಗೆ ಸಹಕರಿಸಿದ ಎಲ್ಲ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ ಧನ್ಯವಾದ ತಿಳಿಸುವುತ್ತೇನೆ ಎಂದು ಹೇಳಿದರು.

ಗುಬ್ಬಿ ಪಟ್ಟಣದ ಶ್ರೀಚನ್ನಬಸವೇಶ್ವರಸ್ವಾಮಿ ದೇವಾಲಯದಿಂದ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು, ನಾಸಿಕ್ ವಾದ್ಯ ವೃಂದ, ಡಿಜೆ ಸೌಂಡ್ಸ್ ಹಾಗೂ ಶಾಲಾ ಮಕ್ಕಳ ನೃತ್ಯ ತಂಡದೊಂದಿಗೆ ಮೆರವಣಿಗೆ ನಡೆಯಿತು. ಈ ಮಧ್ಯೆ ಮಕ್ಕಳ ನೃತ್ಯ, ಆರೋಗ್ಯ ಇಲಾಖೆಯ ಬೀದಿ ನಾಟಕ ಪ್ರದರ್ಶನ ಆಕರ್ಷಣೀಯವಾಗಿ ಮೂಡಿ ಬಂತು. ಜಡಿ ಮಳೆಯಲ್ಲಿ ಮಕ್ಕಳು ಕುಣಿದು ಕುಪ್ಪಳಿಸಿ ಕನ್ನಡಕ್ಕೆ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ತಾಪಂ ಇಓ ಪರಮೇಶ್ ಕುಮಾರ್, ಬಿಇಓ ಪಾಲಾಕ್ಷಪ್ಪ, ಪಪಂ ಸದಸ್ಯರಾದ ಮಹಮ್ಮದ್ ಸಾದಿಕ್, ಕುಮಾರ್, ಜಿ.ಆರ್.ಶಿವಕುಮಾರ್, ಜಿ.ಎನ್.ಅಣ್ಣಪ್ಪಸ್ವಾಮಿ, ಶಶಿಕುಮಾರ್, ಮುಖಂಡರಾದ ಸಿ.ಆರ್.ಶಿವಕುಮಾರ್, ಜಿ.ಆರ್.ರಮೇಶ್, ಕುಮಾರ್, ಶಿವಪ್ಪ, ಕಸಾಪ ತಾಲ್ಲೂಕು ಅಧ್ಯಕ್ಷ ಯತೀಶ್, ಯಲ್ಲಪ್ಪ, ರೈತಸಂಘದ ಲೋಕೇಶ್, ನಾಗಸಂದ್ರ ವಿಜಯ್ ಕುಮಾರ್ ಸೇರಿದಂತೆ ಕರುನಾಡ ವಿಜಯಸೇನೆ ಪದಾಧಿಕಾರಿಗಳು, ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...