ತುಮಕೂರು | ಕೆಎನ್ ರಾಜಣ್ಣಗೆ ಸಚಿವ ಸ್ಥಾನಕ್ಕಾಗಿ ಹಲವು ಸಂಘಟನೆಗಳ ಒತ್ತಾಯ

Date:

ತುಮಕೂರು ಜಿಲ್ಲೆಯಲ್ಲಿ ಅಲ್ಪಸಂಖ್ಯಾತ, ಹಿಂದುಳಿದ, ದಲಿತರ, ರೈತ ಸಮುದಾಯದ ಕಲ್ಯಾಣಕ್ಕಾಗಿ ಕೆ.ಎನ್ ರಾಜಣ್ಣ ಸಚಿವರಾಗಬೇಕು. ಅವರು ಹಿಂದಿನಿಂದಲೂ ಎಲ್ಲ ಸಂಘ ಸಂಸ್ಥೆಗಳು ಮತ್ತು ಜನಸಮಾನ್ಯರ ಜೊತೆ ಒಳ್ಳೆಯ ಒಡನಾಟ ಇಟ್ಟುಕೊಂಡು ಕೆಲಸ ಮಾಡಿದ್ದಾರೆ. ಅವರಿಗೆ ಕಾಂಗ್ರೆಸ್‌ ಸರ್ಕಾರ ಸಚಿವ ಸ್ಥಾನ ಕೊಡಬೇಕು ಎಂದು ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡ ಕುಂದೂರು ತಿಮ್ಮಣ್ಣ ಒತ್ತಾಯಿಸಿದ್ದಾರೆ.

ತುಮಕೂರಿನಲ್ಲಿ ನಡೆದಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. “ಕೆ.ಎನ್ ರಾಜಣ್ಣ ಅವರನ್ನು ಮಂತ್ರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರನ್ನು ತುಮಕೂರಿನ ನಿಯೋಗ ಭೇಟಿ ಮಾಡಿ, ಮನವಿ ಮಾಡಲಿದೆ. ಅಲ್ಲದೆ, ರಾಜಣ್ಣರನ್ನು ಸಚಿವರನ್ನಾಗಿ ಮಾಡುವುದರಿಂದ ಲೋಕಸಭಾ ಚುನಾಔಣೆಯ ಮೇಲೂ ಪ್ರಭಾವ ಬೀರಲಿದೆ ಎಂಬುದನ್ನು ಅವರ ಗಮನಕ್ಕೆ ತರಲಾಗುತ್ತದೆ” ಎಂದು ಹೇಳಿದ್ದಾರೆ.

ಪ್ರಗತಿಪರ ಮುಖಂಡ ಡಾ. ಬಸವರಾಜು ಮಾತನಾಡಿ, “ಕಾಂಗ್ರೇಸ್‌ ಅಧಿಕಾರಕ್ಕೆ ಬಂದಿದೆ. ಹಾಗೆಯೇ, ನಮ್ಮ ಜಿಲ್ಲೆಯ ಎಲ್ಲರ ನೆಚ್ಚನ ರಾಜಕಾರಣಿ ಕೆ.ಎನ್ ರಾಜಣ್ಣ ಶಾಸಕರಾಗಿ ಆಯ್ಕೆಯಾಗಿದ್ದಾರೆ. ತಳ ಸಮುದಾಯಗಳ ಪರ, ಕಾರ್ಮಿಕರ ಪರ ಹೆಚ್ಚು ಕೆಲಸ ಮಾಡುವ ರಾಜಣ್ಣ ಅವರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜಣ್ಣ ಶಾಸಕರಾಗಿಯಷ್ಟೇ ಕೆಲಸ ಮಾಡಿಲ್ಲ. ಸಹಕಾರ ವಲಯದ ಬ್ಯಾಂಕ್‌ಗಳಲ್ಲಿ ಕೆಲಸ ಮಾಡಿದ್ದಾರೆ. ಹಲವಾರು ಬಡವರ ಪರವಾಗಿ ಮಧುಗಿರಿ ಕ್ಷೇತ್ರದಲ್ಲಿಯೂ ಕೆಲಸ ಮಾಡಿದ್ದಾರೆ. ಹಾಗಾಗಿ, ಅವರನ್ನು ಸಚಿವರನ್ನಾಗಿ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಡಾ.ಅರುಂಧತಿ ಮಾತನಾಡಿ, “ರಾಜಣ್ಣ ಅವರು ಶಾಸಕರಾಗಿ ಮಾಡಿರುವ ಕೆಲಸಗಳೇ ಅಷ್ಟು ಜನಪ್ರಿಯವಾಗಿವೆ. ಇನ್ನು, ಅವರನ್ನು ಸಚಿವರನ್ನಾಗಿ ಮಾಡಿದರೆ, ತುಮಕೂರು ಜಿಲ್ಲೆಗೆ ಕೀರ್ತಿ ಬರುತ್ತದೆ. ಇದರಿಂದ ಅಹಿಂದ ವರ್ಗಗಳಿಗೂ ಶಕ್ತಿ ಬರುತ್ತದೆ” ಎಂದಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ವಿರೂಪಾಕ್ಷ ಡ್ಯಾಗೇರಹಳ್ಳಿ,ರಾಮಚಂದ್ರ, ಚೇಳೂರು ಶಿವನಂಜಪ್ಪ, ಸುಬ್ಬರಾಯಪ್ಪ,ಮುಸ್ತಾಫ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...