ತುಮಕೂರು | ಲೋಕಸಭಾ ಚುನಾವಣೆಗೆ ಜೆಡಿಎಸ್‌ ಟಿಕೆಟ್‌ ಬೇಡಿಕೆಯಿಟ್ಟ ಕೆ.ಟಿ ಶಾಂತಕುಮಾರ್

Date:

ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಶೇ.34ರಷ್ಟು ಮತಗಳನ್ನು ಪಡೆದಿತ್ತು. ಈ ಬಾರಿಯೂ ಜೆಡಿಎಸ್ ಪಕ್ಷದಿಂದ ಸ್ಥಳೀಯ, ನೇಮ್ ಅಂಡ್ ಫೇಮ್ ಹೊಂದಿರುವ ನನಗೆ ಟಿಕೇಟ್ ನೀಡಿದರೆ ಜಿಲ್ಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲುವು ಖಚಿತ ಎಂದು ಜೆಡಿಎಸ್ ಮುಖಂಡ ಕೆ.ಟಿ ಶಾಂತಕುಮಾರ್ ಹೇಳಿದ್ದಾರೆ.

ತುಮಕೂರಿನ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಳೆದ ಲೋಕಸಭಾ ಚುನಾವಣೆ ಸಮಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ದೇವೇಗೌಡರು ಸ್ಪರ್ಧಿಸಿದ್ದಾಗ ಶೇ.34ರಷ್ಟು ಮತದಾರರು ಜೆಡಿಎಸ್ ಪಕ್ಷವನ್ನು ಬೆಂಬಲಿಸಿರುವುದು ನಿಜಕ್ಕೂ ಸಂತೋಷ ಪಡುವ ವಿಚಾರ. ಜಿಲ್ಲೆ ಜೆಡಿಎಸ್ ಪಕ್ಷದ ಭದ್ರಕೋಟೆ. ಹಾಗಾಗಿ, ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಪಕ್ಷದಲ್ಲಿಯೇ ಉಳಿಸಿಕೊಳ್ಳುವಂತೆ ರಾಜ್ಯಾಧ್ಯಕ್ಷರಾದ ಎಚ್.ಡಿ. ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದ್ದೇನೆ” ಎಂದು ಶಾಂತಕುಮಾರ್ ತಿಳಿಸಿದರು.

ತುಮಕೂರು ಜಿಲ್ಲೆಯಲ್ಲಿ ಒಕ್ಕಲಿಗ ಮತದಾರರ ಸಂಖ್ಯೆ ಹೆಚ್ಚಿದೆ. ಹಾಗಾಗಿ ಕಳೆದ ಬಾರಿ ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ. ದೇವೇಗೌಡರ ವಿರುದ್ಧ ಅಪಪ್ರಚಾರ ನಡೆಸಿದರೂ ಅವರಿಗೆ ಜನರು ಶೇ.47ರಷ್ಟು ಮತಗಳನ್ನು ನೀಡಿದ್ದರು. ಅದರಲ್ಲಿ ಶೇ.34ರಷ್ಟು ಮತಗಳು ಜೆಡಿಎಸ್ ಪಕ್ಷದ ಮತದಾರರಿಂದ ಬಂದಿದೆ ಎಂದರೆ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಉಜ್ವಲ ಭವಿಷ್ಯವಿದೆ. ಈಗಲೂ ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ನಲ್ಲಿಯೇ ಉಳಿಸಿಕೊಂಡು. ಮತ್ತೊಮ್ಮೆ ದೇವೇಗೌಡ ರಾಗಲಿ, ಎಚ್.ಡಿ. ಕುಮಾರಸ್ವಾಮಿಯವರಾಗಲಿ ಸ್ಪರ್ಧೆ ಮಾಡಿದರೆ, ಇಲ್ಲವೇ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೇಟ್ ನೀಡಿದರೆ ಗೆಲುವು ನಿಶ್ಚಿತ.ಅದನ್ನು ಬಿಟ್ಟು ಜಿಲ್ಲೆಯಿಂದ ಹೊರಗಿನವರಿಗೆ ಟಿಕೇಟ್ ನೀಡಿದರೆ, ಜನತೆ ಸ್ಥಳೀಯರ ಕೈ ಹಿಡಿಯುವುದು ಸಹಜ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ಸರ್ಕಾರದ ಗ್ಯಾರಂಟಿ ಯೋಜನೆಗಳ ಭರಾಟೆಯಲ್ಲಿ ಅಭಿವೃದ್ದಿಯನ್ನು ಮರೆತಿದೆ. ಇದರ ಪರಿಣಾಮ ಲೋಕಸಭಾ ಚುನಾವಣೆಯಲ್ಲಿ ಜನತೆ ಮೋದಿಯ ಕಡೆ ನೋಡುತ್ತಿದ್ದಾರೆ. ಇದರ ಜೊತೆಗೆ ಜೆಡಿಎಸ್ ಸಹ ಕೈಜೋಡಿಸಿದೆ. ಮೋದಿ ಹವಾ ಜೊತೆಗೆ, ಜೆಡಿಎಸ್‌ನ ಶಕ್ತಿ ಒಗ್ಗೂಡಿದರೆ ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲಬಹುದು. ಹಾಗೆಯೇ ಜಿಲ್ಲೆಯಲ್ಲಿ ಮೈತ್ರಿ ಅಭ್ಯರ್ಥಿಗೆ ಗೆಲುವು ನಿಶ್ಚಿತ. ಕಳೆದ ಐದು ವರ್ಷಗಳಿಂದ ಜಿಲ್ಲೆಯ ಜನತೆಯ ಪರವಾಗಿ ನಿರಂತರವಾಗಿ ಜನರ ಮಧ್ಯೆ ಇದ್ದುಕೊಂಡು ಹೋರಾಟ ನಡೆಸುತ್ತಾ ಬಂದಿದ್ದೇನೆ. ಹಾಗಾಗಿ ನನಗೆ ಟಿಕೇಟ್ ನೀಡಿದರೆ ಯುವಜನರು ಒಗ್ಗೂಡಿ ನನ್ನ ಗೆಲುವಿಗೆ ಶ್ರಮಿಸುತ್ತಾರೆ ಎಂಬ ನಂಬಿಕೆ ನಮ್ಮದು ಎಂದು ಕೆ.ಟಿ. ಶಾಂತಕುಮಾರ್ ತಿಳಿಸಿದರು.

ಮಾಜಿ ಸಚಿವ ವಿ.ಸೋಮಣ್ಣ ಎಷ್ಟೇ ಸೇವೆ ಮಾಡಿದ್ದರೂ, ಹೊರಗಿನವರು ಎಂಬ ಕಾರಣಕ್ಕೆ ಜನತೆ ಅವರಿಗೆ ಮತ ನೀಡುವುದು ಕಡಿಮೆ. ಅಲ್ಲದೆ ಜಿಲ್ಲೆಗೆ ಅವರ ಕೊಡುಗೆ ಏನು ಎಂಬುದನ್ನು ನೋಡಲಿದ್ದಾರೆ. ಜನರೇ ಮಾತನಾಡಿಕೊಳ್ಳುವಂತೆ ಜಿಲ್ಲೆಗೆ ಸೋಮಣ್ಣ ಅವರ ಕೊಡುಗೆ ಶೂನ್ಯ. ಹಾಲಿ ಸಂಸದರು ನಿವೃತ್ತಿಯಾಗುತ್ತಿದ್ದಾರೆ. ಹಾಗಾಗಿ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡುವುದು ಸೂಕ್ತ. ಈ ನಿಟ್ಟಿನಲ್ಲಿ ರಾಜ್ಯನಾಯಕರಾದ ಎಚ್.ಡಿ. ಕುಮಾರಸ್ವಾಮಿ ಅವರು ಮತ್ತೊಮ್ಮೆ ತುಮಕೂರು ಲೋಕಸಭಾ ಕ್ಷೇತ್ರದ ಬಗ್ಗೆ ಕೂಲಂಕುಷ ಪರಿಶೀಲನೆ ನಡೆಸಿ, ಜೆಡಿಎಸ್ ಪಕ್ಷದಲ್ಲಿಯೇ ಉಳಿಸಿಕೊಂಡರೆ ಗೆಲುವು ನಮ್ಮದಾಗಲಿದೆ ಎಂದು ಕೆ.ಟಿ.ಶಾಂತಕುಮಾರ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...