ತುಮಕೂರು | ಭೂಮಿ ಮಂಜೂರಿಗೆ ಅರ್ಜಿ ಹಾಕಿಸುವ ದಂಧೆ : ಸಾವಿರ ರೂಗೆ ಅರ್ಜಿ ಮಾರಾಟ..!!

Date:

ರೈತರಿಗೆ ಜಮೀನು ಮಂಜೂರು ಮಾಡಿಕೊಡುವಂತೆ ಮುಖ್ಯಮಂತ್ರಿಗಳಿಗೆ ಅರ್ಜಿ ಸಲ್ಲಿಸುವ ಅರ್ಜಿ ನಮೂನೆ ಭರ್ತಿ ಮಾಡಿಕೊಂಡು ತಾಲ್ಲೂಕು ಕಚೇರಿಗೆ ಅರ್ಜಿ ಸಲ್ಲಿಸುವ ಮಧ್ಯವರ್ತಿಯ ದಂಧೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

ಸರ್ಕಾರ ಭೂ ಸುಧಾರಣಾ ಕಾನೂನು ಮರುಸ್ಥಾಪಿಸಲು ಹೆಚ್ಚುವರಿ ಭೂಮಿ ವಶಕ್ಕೆ ಪಡೆದು ಅರ್ಹರಿಗೆ ಮಂಜೂರು ಮಾಡುವ ಆದೇಶ ತಿಳಿದ ಬಳಿಕ ತಾಲ್ಲೂಕಿನ ಗಡಿ ಭಾಗದಲ್ಲಿ ಗೋಮಾಳ ಜಮೀನು ಸರ್ಕಾರ ಮಂಜೂರು ಮಾಡುತ್ತದೆ ಎಂಬ ವದಂತಿ ಹಬ್ಬಿಸಿ ಮುಗ್ಧ ಹಳ್ಳಿ ಜನರಿಂದ ಮುಖ್ಯಮಂತ್ರಿಗಳಿಗೆ ಅರ್ಜಿ ಸಲ್ಲಿಸಲಾಗುತ್ತಿದೆ. ಭೂಮಿ ಸಿಗುತ್ತದೆ ಎಂಬ ಗಾಢವಾದ ನಂಬಿಕೆಗೆ ಸಿಲುಕಿದ ರೈತರಿಗೆ ಅರ್ಜಿ ನಮೂನೆಯನ್ನು ಸಾವಿರ ರೂಗಳಿಗೆ ಮಾರಾಟ ಮಾಡಲಾಗುತ್ತಿದೆ. ಯಾವುದೇ ದಾಖಲೆ ಇಲ್ಲದೆ ಮನಬಂದಂತೆ ಬೇರೆ ಜಿಲ್ಲೆ, ತಾಲ್ಲೂಕಿನ ರೈತರು ಸಹ ಅರ್ಜಿ ನೀಡುತ್ತಿದ್ದಾರೆ ಎಂಬ ಚರ್ಚೆ ತಾಲ್ಲೂಕು ಕಚೇರಿ ಆವರಣದಲ್ಲಿ ಕಂಡು ಬಂತು.

ಕೆಲ ತಿಂಗಳ ಹಿಂದೆ ಚೇಳೂರು ಮತ್ತು ಹಾಗಲವಾಡಿ ಹೋಬಳಿಯ ರೈತರು ಹೋರಾಟ ನಡೆಸಿ ಭೂಮಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಅರ್ಜಿ ಸಲ್ಲಿಸುವ ಚಳವಳಿ ಆರಂಭಿಸಿದ್ದರು. ಈ ಸಮಯದ ಅರ್ಜಿ ನಮೂನೆಯನ್ನು ಬಂಡವಾಳ ಮಾಡಿಕೊಂಡ ಕೆಲ ದಂಧೆಕೋರರು ಹಣ ಪೀಕಲು ಅರ್ಜಿಯನ್ನು ಸಾವಿರ ರೂಗಳಿಗೆ ಮಾರಾಟ ಮಾಡಿ ಅರ್ಜಿ ತುಂಬಿಸಿಕೊಂಡು ತಾಲ್ಲೂಕು ಕಚೇರಿಗೆ ನೀಡಲು ಬಂದಿರುವುದು ಕಂಡ ತಹಸೀಲ್ದಾರ್ ಬಿ.ಆರತಿ ಅವರು ಮುದ್ರಿತ ಅರ್ಜಿ ನಮೂನೆ ಕಂಡು ಒಬ್ಬರೇ ನೂರಾರು ಅರ್ಜಿ ಹೇಗೆ ಸಲ್ಲಿಸುತ್ತೀರಿ ಎಂದು ಅರ್ಜಿ ಹಿಡಿದು ಬಂದಾತನನ್ನು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001182243

ಈಗಾಗಲೇ ನಾಲ್ಕು ಸಾವಿರ ಅರ್ಜಿ ಬಂದಿದ್ದು, ಬಗರ್ ಹುಕುಂ ಸಮಿತಿಗೆ ಬಂದ ಸಾವಿರಾರು ಅರ್ಜಿಗಳನ್ನು ವಜಾ ಗೊಳಿಸಲಾಗಿದೆ. ಅರ್ಹ ರೈತರು, ಅನುಭವದಲ್ಲಿರುವ ರೈತರ ಅರ್ಜಿಗಳೇ ರದ್ದು ಆಗಿದೆ. ಇದೆಲ್ಲಾ ತಿಳಿದು ಸಹ ಸಾವಿರಾರು ಅರ್ಜಿಯನ್ನು ತಂದು ತಾಲ್ಲೂಕು ಕಚೇರಿಗೆ ಸಲ್ಲಿಸುವ ಮಧ್ಯವರ್ತಿಗಳ ಉದ್ದೇಶ ತಿಳಿಯಬೇಕಿದೆ. ಯಾವುದೇ ದಾಖಲೆ ಇಲ್ಲದ ಅರ್ಜಿ ನಮೂನೆ ನೇರ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದು ಹೇಗೆ ವಿಲೇವಾರಿ ಮಾಡಲು ಸಾಧ್ಯ ಎಂಬ ಗೊಂದಲ ಕಚೇರಿಯ ಸಿಬ್ಬಂದಿಯಲ್ಲಿ ಕಾಣುತ್ತಿದೆ. ಅರ್ಜಿಯ ಜೊತೆ ಆಧಾರ್ ಕಾರ್ಡ್, ಪಡಿತರ ಚೀಟಿ, ಬಗರ್ ಸಮಿತಿಗೆ ಸಲ್ಲಿಸಿದ್ದ ಅರ್ಜಿ ನಮೂನೆಗಳು ಹೀಗೆ ಇರುವ ದಾಖಲೆ ಒದಗಿಸಬೇಕಿದೆ. ಫಲಾನುಭವಿಗಳು ಬಂದು ಅವರವರ ಅರ್ಜಿ ಸಲ್ಲಿಸಲಿ ಎಂದು ಸೂಚಿಸಿ ನೂರಾರು ಅರ್ಜಿಯನ್ನು ತಿರಸ್ಕರಿಸಲಾಯಿತು. ತಕ್ಷಣ ಮಧ್ಯವರ್ತಿ ಸ್ಥಳದಿಂದ ಕಾಲ್ಕಿತ್ತ ಘಟನೆ ನಡೆಯಿತು.


“ಮುಖ್ಯಮಂತ್ರಿಗಳಿಗೆ ಅರ್ಜಿ ಸಲ್ಲಿಸುವ ನಮೂನೆಯನ್ನು ಸಾವಿರ ರೂಗಳಿಗೆ ಮಾರಾಟ ಮಾಡುವ ದಂಧೆ ಹೆಚ್ಚಾಗಿದೆ. ಈ ಬಗ್ಗೆ ದೂರು ಬಂದಿದೆ. ಈಗಾಗಲೇ 5 ಸಾವಿರ ಅರ್ಜಿಗಳು ಬಂದಿವೆ. ಅಕ್ರಮ ಸಕ್ರಮ ಅರ್ಹರಿಗೆ ಮಾಡಲು ತಿಳಿಸಿದೆ. ಆದರೆ ಬೇರೆ ತಾಲ್ಲೂಕಿನ ರೈತರ ಅರ್ಜಿ ಸಹ ಇಲ್ಲಿ ಬರುತ್ತಿದೆ. ಇದು ವ್ಯವಸ್ಥಿತವಾಗಿ ಹಣ ಮಾಡಲಾಗುತ್ತಿದೆ. ಮುಗ್ಧ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ದಿಕ್ಕುತಪ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಪೊಲೀಸ್ ದೂರು ನೀಡಲಿದ್ದೇವೆ ಎಂದು ಈದಿನ ಡಾಟ್ ಕಾಮ್ ಗೆ ಗುಬ್ಬಿ ತಹಶೀಲ್ದಾರ್ ಬಿ. ಆರತಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...