ತುಮಕೂರು | ಹೊರಗುತ್ತಿಗೆ ಕಾರ್ಮಿಕರಿಗೆ ರಜೆ; ಕೆಎಂಎಫ್ ಅಧಿಕಾರಿಗಳ ವಿರುದ್ಧ ದಿಢೀರ್ ಪ್ರತಿಭಟನೆ

Date:

ಪಶು ಆಹಾರಕ್ಕೆ ಬೇಡಿಕೆ ಇಲ್ಲವೆಂಬ ಕಾರಣ ನೀಡಿ ಹೊರಗುತ್ತಿಗೆ ಆಧಾರದ ಕಾರ್ಮಿಕರಿಗೆ ಬಲವಂತ ರಜೆ ನೀಡಿದ ಕೆಎಂಎಫ್ ಅಧಿಕಾರಿಗಳ ವಿರುದ್ಧ ಸಂತ್ರಸ್ತ ನೂರಾರು ಕಾರ್ಮಿಕರು ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ಕಾರ್ಖಾನೆ ಮುಂಭಾಗ ದಿಢೀರ್ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡು ಆಕ್ರೋಶ ಹೊರ ಹಾಕಿದರು.

“ಸರ್ಕಾರ ಸ್ವಾಮ್ಯದ ಪಶು ಆಹಾರ ಘಟಕದಲ್ಲಿ ಬೇಡಿಕೆ ಕ್ಷೀಣಿಸಿದೆ ಎಂದರೆ ಆಲೋಚಿಸಬೇಕಿದೆ. ಕಳೆದ ನಾಲ್ಕು ತಿಂಗಳಿಂದ ಹೊರಗುತ್ತಿಗೆ ಆಧಾರದ ಕಾರ್ಮಿಕರಿಗೆ ರಜೆ ನೀಡಲಾಗುತ್ತಿದೆ. ಕಾರ್ಖಾನೆಯಲ್ಲಿರುವ ಮೂರು ಘಟಕದ ಪೈಕಿ ಒಂದು ಹಳೆಯ ಘಟಕ ಮುಚ್ಚುವ ಆಲೋಚನೆ ನಡೆದಿದೆ. ಈ ಹಿನ್ನಲೆಯಲ್ಲಿ ಬಲವಂತವಾಗಿ ರಜೆ ನೀಡಲಾಗುತ್ತಿದೆ. ಈ ಕೆಲಸ ನಂಬಿದ 150 ಮಂದಿ ಕಾರ್ಮಿಕ ಕುಟುಂಬಗಳು ಬೀದಿಗೆ ಬೀಳುತ್ತವೆ ಎನ್ನುವುದನ್ನು ಅರಿಯಬೇಕಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕ ಒಕ್ಕೂಟದ ಅಧ್ಯಕ್ಷ ಮಧು ಮಾತನಾಡಿ, “ಇಲ್ಲಿನ ಕನಿಷ್ಟ ವೇತನ ನಂಬಿ ಹತ್ತು ಹಲವು ಆರ್ಥಿಕ ವಹಿವಾಟು ಮಾಡುತ್ತಿದ್ದ ಕಾರ್ಮಿಕರ ಬದುಕಿಗೆ ಬಿದ್ದ ಪೆಟ್ಟು ಯಾರಿಗೂ ಅರ್ಥ ಆಗುತ್ತಿಲ್ಲ. ಅಲ್ಲಿನ ಸಿಬ್ಬಂದಿಗಳು ಕಾರ್ಮಿಕರ ಮೇಲೆ ದೌರ್ಜನ್ಯವೆಸಗುವುದು ಇತ್ತೀಚೆಗೆ ಜಾಸ್ತಿಯಾಗಿದ್ದು, ಈಗಿನ ಜಿ ಎಂ ಗಿರೀಶ್ ನಾಯ್ಕ್ ಅವರು ನಮ್ಮ ಕಷ್ಟ ಅಲಿಸುತ್ತಿಲ್ಲ. ಪಶು ಆಹಾರಕ್ಕೆ ಬೇಡಿಕೆ ಇಲ್ಲವಾಗಿರುವುದಕ್ಕೆ ಸರಿಯಾದ ಕಾರಣ ತಿಳಿಯಬೇಕಿದೆ. ಸೂಕ್ತ ತನಿಖೆ ಮಾಡಿಸಿದರೆ ಅಲ್ಲಿನ ಕೆಲ ಸಿಬ್ಬಂದಿಗಳು, ಅಧಿಕಾರಿಗಳ ಭ್ರಷ್ಟಾಚಾರ ಹೊರ ಬರುತ್ತದೆ. ಆ ಕೆಲಸ ಮಾಡದೆ ಕಾರ್ಮಿಕರನ್ನು ಹೊಣೆ ಮಾಡಿ ಕೆಲಸದಿಂದ ಕಳುಹಿಸುವುದು ಸರಿಯಲ್ಲ. ಬದಲಿಗೆ ಕೇಂದ್ರ ವಲಯದ ಅಧಿಕಾರಿಗಳು ಸ್ಥಳಕ್ಕೆ ಬಂದು ಕಾರ್ಮಿಕರಿಗೆ ತೊಂದರೆ ಕೊಡುವ ಸಿಬ್ಬಂದಿಗಳ ವಿರುದ್ದ ಕ್ರಮ ವಹಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕ ಸತೀಶ್ ಗೌಡ ಮಾತನಾಡಿ, “ಬೇಜವಾಬ್ದಾರಿ ತೋರುವ ಜಿಎಂ ಅವರು ಕಾರ್ಮಿಕರ ಕಷ್ಟ ಆಲಿಸುತ್ತಿಲ್ಲ. ಅಲ್ಲಿರುವ ಅಧಿಕಾರಿಗಳಾದ ಮಹೇಶ್ವರ, ಪುನೀತ್, ಕೃಷ್ಣ ಎಂಬ ಅಧಿಕಾರಿಗಳು ಕಾರ್ಮಿಕರ ಮೇಲೆ ದಬ್ಬಾಳಿಕೆ ಮಾಡುತ್ತಾರೆ. ಹಸುಗಳು ಸಾಕಷ್ಟಿವೆ. ಹಾಲು ಉತ್ಪಾದನೆ ಸಹ ಅಚ್ಚುಕಟ್ಟಾಗಿದೆ. ಆದರೂ ಪಶು ಆಹಾರ ಬೇಡಿಕೆ ಇಲ್ಲವೆಂದರೆ ಯೋಚಿಸಬೇಕು. ಖಾಸಗಿ ಪಶು ಆಹಾರ ಉತ್ಪಾದನೆಗೆ ಬೇಡಿಕೆ ಇದೆ. ಇಲ್ಲಿನ ಘಟಕದ ಅವ್ಯವಹಾರ ಲೋಕಾಯುಕ್ತ ತನಿಖೆಗೆ ಒಳಪಡಿಸಬೇಕಿದೆ. ಘಟಕಕ್ಕೆ ಬರುವ ಕಚ್ಛಾ ವಸ್ತುಗಳು ಗುಣಮಟ್ಟ ಕಳಪೆ ಎಂದು ವಾಪಾಸ್ ಕಳುಹಿಸಿ ಮತ್ತೆ ಹೊರಗಡೆ ಇದೇ ವಸ್ತುವನ್ನು ಮತ್ತೊಂದು ಲಾರಿಯಲ್ಲಿ ತಂದು ಗುಣಮಟ್ಟ ಓಕೆ ಎನ್ನುತ್ತಾರೆ. ಇಲ್ಲಿ ನಡೆಯುವ ಭ್ರಷ್ಟಾಚಾರ ತಿಳಿದೂ ಕೂಡಾ ನಮ್ಮದೇ ಘಟಕದ ಮರ್ಯಾದೆಗೆ ಸುಮ್ಮನಿದ್ದೇವೆ” ಎಂದು ಕಿಡಿಕಾರಿದರು.

“ಬೇಡಿಕೆ ಕಡಿಮೆ ಆಗಿರುವ ಬಗ್ಗೆ ತನಿಖೆ ಮಾಡಿ ಅಲ್ಲಿನ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ, ಎಲ್ಲದಕ್ಕೂ ಕಾರ್ಮಿಕರನ್ನು ಹೊಣೆ ಮಾಡಿ ಹೊಟ್ಟೆಯ ಮೇಲೆ ಹೊಡೆಯಬೇಡಿ” ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ-ಚಿಕ್ಕಮಗಳೂರು ಸೇರಿದಂತೆ 14 ಕ್ಷೇತ್ರಗಳಲ್ಲಿ ಕೆಆರ್‌ಎಸ್‌ ಪಕ್ಷದಿಂದ ನಾಮಪತ್ರ ಸಲ್ಲಿಕೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಪೋಟೋ ಜೊತೆಗೆ ಪ್ರತಿಭಟನೆ ಆರಂಭಿಸಿದ ಹೊರ ಗುತ್ತಿಗೆ ಆಧಾರದ ಕಾರ್ಮಿಕರು ಘೋಷಣೆ ಕೂಗುತ್ತಾ, ಅಧಿಕಾರಿಗಳ ಅಮಾನತು ಮಾಡುವಂತೆ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಸಿ ಆರ್ ಶಂಕರ್ ಕುಮಾರ್ ಮುತ್ತುರಾಜ್, ನಿಶ್ಚಿತ್, ಚಾಲುಕ್ಯ, ಬಾಸುಗೌಡ, ಚೇತನ್, ಮದನ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...