ತುಮಕೂರು | ರಾಜಕೀಯ ಪಕ್ಷದ ಗುಲಾಮಗಿರಿ ಬಿಟ್ಟು ಒಳಮೀಸಲಾತಿ ಜಾರಿಗೆ ಹೋರಾಡಿ: ವೈ.ಎಚ್.ಹುಚ್ಚಯ್ಯ

Date:

ರಾಜಕೀಯ ಪಕ್ಷಗಳ ಆದೇಶ ಪಾಲಿಸುತ್ತಾ ಪಕ್ಷದ ಗುಲಾಮಗಿರಿ ಮಾಡುತ್ತಿರುವ ಮಾದಿಗ ಸಮುದಾಯದ ಮುಖಂಡರು ಒಳ ಮೀಸಲಾತಿಗಾಗಿ ಒಂದಾಗಬೇಕಿದೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ ಕರೆ ನೀಡಿದರು.

ತುಮಕೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಒಳ ಮೀಸಲಾತಿ ಚಿಂತನಾ-ಮಂಥನ ಹಾಗೂ ಒಳ ಮೀಸಲಾತಿ ಜಾರಿ ಹೋರಾಟದ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದ ಹಿತಕ್ಕಾಗಿ ರಾಜಕೀಯವನ್ನು ಬದಿಗಿಡಬೇಕು, ಯಾವ ರಾಜಕೀಯ ಪಕ್ಷಗಳು ಸಹ ಒಳ ಮೀಸಲಾತಿ ಜಾರಿ ಆಶ್ವಾಸನೆ ನೀಡುವುದನ್ನು ಬಿಟ್ಟರೆ ಸಮುದಾಯದ ಹಿತಕ್ಕೆ ಬದ್ಧರಾಗಿಲ್ಲ ಎಂದರು.

ಒಳ ಮೀಸಲಾತಿ ಜಾರಿಗೆ ಪಕ್ಷಾತೀತವಾಗಿ ಹೋರಾಟ ಮಾಡಬೇಕಾದ ಅವಶ್ಯಕತೆ ಇದೆ, ಸರ್ಕಾರ ನೀಡಿರುವ ಆಶ್ವಾಸನೆಯಂತೆ ಒಳ ಮೀಸಲಾತಿ ಜಾರಿಗೆ ತರಲು ಸರ್ಕಾರದ ಮೇಲೆ ಒತ್ತಡ ಹಾಕುವ ನಿಟ್ಟಿನಲ್ಲಿ ಮಾದಿಗ ಸಮುದಾಯ ಒಂದಾಗಿ ನಿಲ್ಲಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಪಂ ಮಾಜಿ ಸದಸ್ಯ ಕೆಂಚಮಾರಯ್ಯ ಮಾತನಾಡಿ ಒಳ ಮೀಸಲಾತಿ ಜಾರಿಗೆ ಸರ್ಕಾರ ಬದ್ಧವಾಗಬೇಕಿದೆ, ಪ್ರಣಾಳಿಕೆಯಲ್ಲಿ ಭರವಸೆ ನೀಡಿದ ಮೇಲೆ ಅದನ್ನು ಜಾರಿ ಮಾಡಲೇಬೇಕು, ಮಾದಿಗರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಬದ್ಧತೆ ತೋರಬೇಕು ಎಂದರು.

ಒಳ ಮೀಸಲಾತಿ ಜಾರಿ ಆಗಲು ಹೋರಾಟ ನಡೆಸಬೇಕಿದೆ, ಇದರಲ್ಲಿ ಯಾವುದೇ ಪಕ್ಷ, ವ್ಯಕ್ತಿ ಮುಖ್ಯವಲ್ಲ, ಸಿದ್ಧರಾಮಯ್ಯ ಆಗಿರಲಿ ಇನ್ಯಾರೇ ಆಗಿರಲಿ ಒಳ ಮೀಸಲಾತಿ ಜಾರಿಗೆ ಬದ್ಧವಾಗಬೇಕಿದೆ, ಮಾದಿಗ ಸಮುದಾಯದ ಹಿತ ಕಾಯುವುದಷ್ಟೇ ನಮ್ಮ ಉದ್ದೇಶ ಇದರಲ್ಲಿ ಯಾವುದೇ ಪಕ್ಷವಿಲ್ಲ ಎನ್ನುವುದನ್ನು ಸಮುದಾಯದ ಮುಖಂಡರು ಅರಿಯಬೇಕು ಎಂದರು.

ಹೋರಾಟಗಾರ ಕೊಟ್ಟಶಂಕರ್ ಮಾತನಾಡಿ ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ತರಬೇಕು, ಒಳ ಮೀಸಲಾತಿ ಜಾರಿ ಹೋರಾಟದಲ್ಲಿ ಯಾವುದೇ ಸಂಘಟನೆ ಹೋರಾಟ ಮಾಡಿದರು ಅದಕ್ಕೆ ಸಮುದಾಯದ ಬೆಂಬಲ ನೀಡಬೇಕು ಎಂದರು.

ಪಾವಗಡ ಶ್ರೀರಾಮ್ ಮಾತನಾಡಿ ಜಿಲ್ಲೆಯಲ್ಲಿ ಇಬ್ಬರು ಪ್ರಭಾವಿ ಸಚಿವರಿದ್ದಾರೆ, ಸಚಿವರು ಒಳಮೀಸಲಾತಿಗೆ ಬದ್ಧರಾಗದೇ ಹೋದಲ್ಲಿ ಮಾದಿಗ ಸಮುದಾಯದ ಶಕ್ತಿ ತೋರಿಸಬೇಕಾಗುತ್ತದೆ, ಒಳ ಮೀಸಲಾತಿ ಹೋರಾಟದಲ್ಲಿ ಪಕ್ಷಾತೀತ ಹೋರಾಟ ಅವಶ್ಯಕತೆ ಇದೆ. ಒಳ ಮೀಸಲಾತಿ ವಿರೋಧಿಗಳಿಗೆ ತಕ್ಕ ಪಾಠ ಕಲಿಸಬೇಕಾದ ಅವಶ್ಯಕತೆ ಇದೆ ಎಂದರು.

ಒಳ ಮೀಸಲಾತಿ ಜಾರಿಗೆ ತುಮಕೂರಿನಲ್ಲಿ ಮಾದಿಗ ಸಮುದಾಯದ ಶಕ್ತಿ ತೋರಿಸಬೇಕಿದೆ, ಯಾವುದೇ ರೀತಿಯ ಹೋರಾಟಕ್ಕೂ ಸಮುದಾಯದ ಮುಖಂಡರು ಬದ್ಧರಾಗಬೇಕು, ಗ್ರಾಮ, ಹೋಬಳಿ, ತಾಲ್ಲೂಕು ಮಟ್ಟದಲ್ಲಿ ಸಮುದಾಯವನ್ನು ಸಂಘಟಿಸಬೇಕು, ಜಿಲ್ಲೆಯಲ್ಲಿ ಮಾದಿಗರ ಶಕ್ತಿಯನ್ನು ತೋರಿಸಬೇಕು ಎಂದು ಕರೆ ನೀಡಿದರು.

ಪ್ರಗತಿ ಪರ ಚಿಂತಕ ದೊರೈರಾಜ್ ಮಾತನಾಡಿ, ಮಾದಿಗ ಸಮುದಾಯದ ಅಭಿವೃದ್ಧಿಗೆ ಒಳಮೀಸಲಾತಿ ಜಾರಿ ಅವಶ್ಯಕವಾಗಿದ್ದು, ಕಳೆದ 30 ವರ್ಷಗಳಿಂದಲೂ ಮಾದಿಗ ಸಮುದಾಯ ಹೋರಾಟದಲ್ಲಿ ತೊಡಗಿಸಿಕೊಂಡರು ಸಹ ಸರ್ಕಾರಗಳು ನಮ್ಮ ಬೇಡಿಕೆಗೆ ಗಮನ ಹರಿಸುತ್ತಿಲ್ಲ, ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಮಾದಿಗ ಸಮುದಾಯದ ಏಕೀಕೃತ ಹೋರಾಟ ನಡೆಸುವುದು ಅವಶ್ಯಕವಾಗಿದೆ ಎಂದರು.

ಅ.18 ರಂದು ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸರ್ಕಾರ ನಿರ್ಧಾರ ಕೈಗೊಳ್ಳದೇ ಹೋದರೆ, ರಾಜ್ಯಾದ್ಯಂತ ಒಳಮೀಸಲಾತಿಗೆ ಪಕ್ಷಾತೀತವಾಗಿ ಹೋರಾಟ ಮಾಡಬೇಕಿದೆ, ಒಳ ಮೀಸಲಾತಿ ನಮ್ಮ ಹಕ್ಕು ಎನ್ನುವುದನ್ನು ಸರ್ಕಾರಕ್ಕೆ ಮನವರಿಕೆ ಮಾಡಬೇಕಿದ್ದು, ಈ ನಿಟ್ಟಿನಲ್ಲಿ ಮಾದಿಗ ಸಮುದಾಯ ಸಂಘಟನಾತ್ಮಕ ಹೋರಾಟಕ್ಕೆ ಸಿದ್ಧವಾಗಬೇಕಿದೆ ಎಂದರು.

ಸಭೆಯಲ್ಲಿ ವಕೀಲ ರಂಗಧಾಮಯ್ಯ, ನರಸಿಂಹಯ್ಯ, ಕುಣಿಗಲ್ ಪುರಸಭೆ ಸದಸ್ಯ ಶ್ರೀನಿವಾಸ್, ರಂಗನಾಥ್, ಲಕ್ಷ್ಮೀದೇವಮ್ಮ, ಪಿ.ಎನ್.ರಾಮಯ್ಯ, ಮರಳೂರು ಕೃಷ್ಣಮೂರ್ತಿ, ಹೆತ್ತೇನಹಳ್ಳಿ ಮಂಜುನಾಥ್, ಜಯಮೂರ್ತಿ, ಹೊಸಕೋಟೆ ನಾಗರಾಜು, ಆಟೋಶಿವರಾಜು, ರಮೇಶ್, ಗೋಪಿ ಮೊಸರುಕುಂಟೆ, ಸಾಗರ್, ಗಂಗಾಧರ್, ಮುಕುಂದ, ಟಿ.ಸಿ.ರಾಮಯ್ಯ, ಕೇಬಲ್ ರಘು, ಯೋಗೀಶ್ ಸೋರೆಕುಂಟೆ, ನಿಟ್ಟೂರು ರಂಗಸ್ವಾಮಿ, ರಂಜನ್, ಶ್ರೀನಿವಾಸ್, ನಾಗರಾಜು ಗೂಳಹರಿವೆ ಸೇರಿದಂತೆ ಇತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...