ತುಮಕೂರು | ಸಾಹಿತ್ಯ ಸಮ್ಮೇಳನಗಳು ಆಡಂಬರಕ್ಕಿಂತ ಅರ್ಥಪೂರ್ಣವಾದಾಗ ಜನರನ್ನು ತಲುಪಲು ಸಾಧ್ಯ : ಬರಗೂರು

Date:

ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಮಹಿಳೆ, ದಲಿತ, ರೈತ, ಕಾರ್ಮಿಕ ಚಳವಳಿಗಳ ಬಗ್ಗೆ ಚರ್ಚಿಸುವ ಬದಲು, ಸಾಹಿತ್ಯಕೇಂದ್ರಿತವಾಗಿ ದಲಿತರು, ಪ್ರಗತಿಪರರು, ರೈತರು, ಮಹಿಳೆಯರು, ಕಾರ್ಮಿಕರ ವಿಷಯಗಳನ್ನು ಚರ್ಚಿಸುವ ಮೂಲಕ ಕನ್ನಡದ ವಿವೇಕವನ್ನು ವಿಸ್ತರಿಸುವ ಕೆಲಸವಾಗಬೇಕೆಂದು ಸಾಹಿತಿ ಬರಗೂರು ರಾಮಚಂದ್ರಪ್ಪ ತಿಳಿಸಿದರು.

ತುಮಕೂರು ನಗರದ ಅಮಾನಿಕೆರೆಯಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮಗ್ರವಾದದು. ಕನ್ನಡ ಸಾಹಿತ್ಯದ ವಿವೇಕ ಬಹಳ ವಿಸ್ತಾರವಾದದು. ಮಾನವೀಯತೆ ಬದಲು ಮತೀಯತೆ ಆವರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಪಂಪನಿಂದ ಇಂದಿನ ದಲಿತ, ಬಂಡಾಯ ಸಾಹಿತ್ಯದವರೆಗೆ ಕನ್ನಡ ಬಹು ದೊಡ್ಡ ವಿವೇಕವನ್ನು ಸಮಾಜಕ್ಕೆ ನೀಡಿದೆ. ಅದನ್ನು ಜನಸಾಮಾನ್ಯರ ಮಧ್ಯೆ ತೆಗೆದುಕೊಂಡು ಹೋಗುವ ಕೆಲಸ ಇಂತಹ ಸಮ್ಮೇಳನಗಳ ಮೂಲಕ ಆಗಬೇಕಾಗಿದೆ ಎಂದು ತಿಳಿಸಿದರು.

1000714185

ಕನ್ನಡ ಭಾಷೆ ಧಾರ್ಮಿಕ, ರಾಜಕೀಯ, ಸಾಹಿತ್ಯಿಕ, ಸಾಮಾಜಿಕ, ಆರ್ಥಿಕ ವಿವೇಕಗಳನ್ನು ಕಲ್ಪಿಸಿರುವ ಭಾಷೆಯಾಗಿದೆ. ಕನ್ನಡ ಸಾಹಿತ್ಯದ ವಿವೇಕ ಬಹಳ ಪ್ರಾಚೀನವಾಗಿದ್ದು, ಪಂಪ-ರನ್ನರ ಕಾಲದಿಂದಲೂ ಹಲವು ವಿಷಯಗಳ ಕುರಿತು ಚರ್ಚಿಸಿಕೊಂಡು ಬರಲಾಗುತ್ತಿದೆ. ಕನ್ನಡ ಸಾಹಿತ್ಯವು ಜನಪದ, ಸಂಸ್ಕೃತಿ ಸೇರಿದಂತೆ ಸ್ಥಳೀಯ, ಪ್ರಾದೇಶೀಕ, ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ವಿಚಾರಗಳನ್ನು ಒಳಗೊಂಡಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನಸಾಮಾನ್ಯರ ಬಗ್ಗೆ ಗೌರವ ಇದ್ದಾಗ ಮಾತ್ರ ಸಾಹಿತ್ಯ ಉತ್ಕೃಷ್ಟವಾಗಿರುತ್ತದೆ. ಬರೆಯದವರ ಬಗ್ಗೆ ಬರೆಯುವವರು ಗೌರವ ಹೊಂದಿದಾಗ ಮಾತ್ರ ಸಾಹಿತ್ಯ ಬರೆಯುವವರ ಗೌರವ ಹೆಚ್ಚಾಗುತ್ತದೆ ಎಂದು ಹೇಳಿದರು.

1000714199

ಕನ್ನಡ ಸಾಹಿತ್ಯದಲ್ಲಿ 10ನೇ ಶತಮಾನದಿಂದ 21ನೇ ಶತಮಾನದವರೆಗೆ ಜಾತಿ ನಿರಾಕರಣೆ ಮಾಡುತ್ತಲೇ ಸಾಹಿತ್ಯವನ್ನು ವಿಸ್ತರಿಸುವ ಕೆಲಸ ಮಾಡಲಾಗುತ್ತಿದ್ದರೂ ಸಹ ಜಾತೀಯತೆ ಮತ್ತಷ್ಟು ಕಠಿಣ ಸ್ವರೂಪವನ್ನು ಪಡೆದುಕೊಳ್ಳುತ್ತಿರುವ ಬೆಳವಣಿಗೆಗಳು ಆತಂಕಕಾರಿಯಾಗಿವೆ. ಇಂದಿನ ರಾಜಕೀಯ ಪರಿಸ್ಥಿತಿ ಕುಮಾರವ್ಯಾಸರ “ಅರಸು ಮೊರೆವ ಹುಲಿ” ಎಂಬ ಹೇಳಿಕೆಯಂತೆ ಬಡವರ ಭಿನ್ನಪ್ಪವ ಕೇಳುವವರೇ ಇಲ್ಲದಂತಾಗಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...