ತುಮಕೂರು | ಸಾಹಿತಿ ಪಿವಿಎನ್‌ಗೆ ಸಿಗಬೇಕಾದ ಗೌರವ ಸಿಗಲಿಲ್ಲ: ಡಾ. ಡಿ ಎನ್ ಯೋಗೀಶ್ವರಪ್ಪ

Date:

ಕನ್ನಡ ಸಾಹಿತ್ಯ, ಸಂಶೋಧನೆ ಹಾಗೂ ವಚನ ಪರಂಪರೆಗೆ ಅಪಾರ ಸೇವೆ ಸಲ್ಲಿಸಿದ ಪ್ರಧಾನ್ ವೆಂಕಪ್ಪ ನಾರಾಯಣರವರಿಗೆ (ಪಿವಿಎನ್) ಸಿಗಬೇಕಾದ ಮಾನ್ಯತೆ, ಗೌರವ, ಹಾಗೂ ಸನ್ಮಾನಗಳು ಲಭಿಸಲಿಲ್ಲ. ಎಂದು ಇತಿಹಾಸ ಸಂಶೋಧಕ ಡಾ. ಡಿ ಎನ್ ಯೋಗೀಶ್ವರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ ಲೇಖಕಿಯರ ಸಂಘ (ಜಿಲ್ಲಾ ಶಾಖೆ, ತುಮಕೂರು) ಹಾಗೂ ಯಲ್ಲಾಪುರದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ನಡೆದ ‘ಚಕೋರ ಸಾಹಿತ್ಯ ಉಪನ್ಯಾಸ ಮಾಲಿಕೆ’ಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ‘ಡಾ.ಪಿ.ವಿ.ನಾರಾಯಣ ನಡೆದು ಬಂದ ದಾರಿ’ ವಿಷಯವಾಗಿ ಉಪನ್ಯಾಸ ನೀಡಿದರು.

“ಕೊರಟಗೆರೆ ತಾಲೂಕಿನ ಅಕ್ಕಿರಾಂಪುರದಲ್ಲಿ ಜನಿಸಿದ ಪಿವಿಎನ್, ಹೈದರಾಲಿ ಕಾಲದ ಪ್ರಧಾನ್ ವೆಂಕಪ್ಪಯ್ಯರ ವಂಶಸ್ಥರಾಗಿದ್ದು, ವಚನ ಸಾಹಿತ್ಯದ ನಿಟ್ಟಿನಲ್ಲಿ ‘ವಚನ ಸಾಹಿತ್ಯ – ಒಂದು ಸಾಂಸ್ಕೃತಿಕ ಅಧ್ಯಯನ’ ಎಂಬ ಮಹತ್ವದ ಸಂಶೋಧನೆ ಕೈಗೊಂಡಿದ್ದರು. ವಿಮರ್ಶೆ, ಪ್ರವಾಸ ಕಥನ, ಸಂಪಾದನೆ, ಸೃಜನಶೀಲತೆ ಹಾಗೂ ಅನುವಾದ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿರುವ ಅವರು, 50ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಇವರಲ್ಲಿ ಹೆಚ್ಚಿನವು ವಚನ ಸಾಹಿತ್ಯಕ್ಕೆ ಸಂಬಂಧಪಟ್ಟುವಾಗಿವೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವರು ರಚಿಸಿದ ಒಂಬತ್ತು ಕಾದಂಬರಿಗಳ ಪೈಕಿ ʼಧರ್ಮಕಾರಣʼ ಶ್ರೇಷ್ಠ ಕಾದಂಬರಿ ಎನ್ನಿಸಿ, ಆದರೆ ನಿಷೇಧಕ್ಕೊಳಗಾಗಿದ್ದ ಕಾರಣ ಅದು ಹೆಚ್ಚು ಚರ್ಚೆಗೆ ಒಳಪಟ್ಟಿತ್ತು. ಅದರ ಹಿಂದೆ ನಂಬಿಕೆಗೆ ಧಕ್ಕೆಯಾಗುವ ತತ್ವದ ಪ್ರಶ್ನೆಗಳು ಇದ್ದವು. ನಂಬಿಕೆಯು ಇತಿಹಾಸವಾಗಲಾರದು. ನಂಬಿಕೆಗೆ ಧಕ್ಕೆಯಾಗುವ ವಿಚಾರ ಬಂದಾಗ ಸಂಶೋಧನೆ ಸಾಯುತ್ತದೆ” ಎಂದರು.

“ಬೆಂಗಳೂರು ವಿಜಯಾ ಕಾಲೇಜಿನಲ್ಲಿ 32 ವರ್ಷ ಸೇವೆ ಸಲ್ಲಿಸಿದ್ದ ಪಿವಿಎನ್ ಕನ್ನಡ ಶಕ್ತಿ ಕೇಂದ್ರದ ಸಕ್ರಿಯ ಸಂಚಾಲಕರಾಗಿದ್ದು, ಕನ್ನಡ ಪರ ಹೋರಾಟಗಳಲ್ಲಿ ತೊಡಗಿಸಿಕೊಂಡವರು. ಬಿ.ಎಂ.ಶ್ರೀ ಪ್ರತಿಷ್ಠಾನದ ಅಧ್ಯಕ್ಷರಾಗಿ ನುಡಿಸೇವೆಗೆ ದಿಕ್ಕು ನೀಡಿದವರು. ನಾಲ್ಕು ನಿಘಂಟುಗಳ ರಚನೆಯ ಮೂಲಕ ಕನ್ನಡ ಭಾಷೆಗೆ ಸಂಗ್ರಹದ ಶಕ್ತಿಕೇಂದ್ರವನ್ನೇ ಕಟ್ಟಿದವರು” ಎಂದು ಪ್ರಶಂಸಿಸಿದರು.

ಇದನ್ನೂ ಓದಿ: ತುಮಕೂರು | ಅಕ್ರಮ ಭೂ ಪರಿವರ್ತನೆ ಆರೋಪ : ಜಿಲ್ಲಾಧಿಕಾರಿಗೆ ನಾಗರಿಕ ಸನ್ಮಾನದ ವಿನೂತನ ಪ್ರತಿಭಟನೆಗೆ ಪೊಲೀಸರ ಅಡ್ಡಿ ; ಬಂಧನ

ಕನ್ನಡ ಸಾಹಿತ್ಯ ಅಕಾಡೆಮಿಯ ಸದಸ್ಯೆ ಸುಮಾ ಸತೀಶ್ ಮಾತನಾಡಿ, “ಪಿವಿಎನ್ ಅವರು ತಮ್ಮ ಇಳಿವಯಸ್ಸಿನಲ್ಲೂ ಹೊಸ ತಂತ್ರಜ್ಞಾನ ಬಳಸಲು ಹಿಂದೆಮುಂದೆ ನೋಡದೆ, ಕಂಪ್ಯೂಟರ್ ಬಳಸಿ ಸ್ವಯಂ ಟೈಪಿಂಗ್ ಮೂಲಕ ಬರವಣಿಗೆ ಮುಂದುವರೆಸಿದವರು. ಅವರ ಸಮರ್ಪಣಾ ಶಕ್ತಿ ಅಗಾಧವಾಗಿತ್ತು” ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಎಂ. ಶಂಕರಪ್ಪ, ಚಕೋರ ಕಾರ್ಯಕ್ರಮದ ತುಮಕೂರು ಜಿಲ್ಲಾ ಸಂಚಾಲಕ ಡಾ. ನಾಗಭೂಷಣ ಬಗ್ಗನಡು, ಲೇಖಕಿಯರ ಸಂಘದ ಅಧ್ಯಕ್ಷೆ ಮಲ್ಲಿಕಾ ಬಸವರಾಜು, ಉಪನ್ಯಾಸಕಿ ಮೇ.ನಾ. ತರಂಗಿಣಿ ಹಾಗೂ ವಿದ್ಯಾರ್ಥಿಗಳು ಇದ್ದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...