ತುಮಕೂರು | ಕಾಂತರಾಜ ವರದಿ  ಸ್ವೀಕರಿಸಲು ಒತ್ತಾಯಿಸಿ ಜ.28ಕ್ಕೆ ಶೋಷಿತ ಸಮುದಾಯಗಳ ಬೃಹತ್ ಸಮಾವೇಶ

Date:

ಶೋಷಿತ ಸಮುದಾಯಗಳ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯಲು ಕಾಂತರಾಜ ವರದಿಯನ್ನು ಸರ್ಕಾರ ಕೂಡಲೇ ಸ್ವೀಕರಿಸಿ, ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 28ರಂದು ಚಿತ್ರದುರ್ಗದ ಮಾದಾರ ಚನ್ನಯ್ಯ ಮಠದ ಪಕ್ಕದ ಮೈದಾನದಲ್ಲಿ ಶೋಷಿತ ಸಮುದಾಯಗಳ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶೋಷಿತ ಸಮುದಾಯಗಳ ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದರು.

ತುಮಕೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಮನಿತ ಸಮಾಜ, ತಮ್ಮ ಹಕ್ಕುಗಳನ್ನ ಪಡೆಯಬೇಕಾದರೆ ಹೋರಾಟವೊಂದೇ ಮಾರ್ಗ. ಈ ಹಿನ್ನೆಲೆಯಲ್ಲಿ ಸಂವಿಧಾನದ ಹಕ್ಕುಗಳನ್ನು ರಕ್ಷಿಸುವ ಸಲುವಾಗಿ ಶೋಷಿತ ಸಮುದಾಯಗಳ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಡಿಯಲ್ಲಿ ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ಇಂದು ದೇಶ ಗಂಡಾಂತರವನ್ನು ಎದುರಿಸುತ್ತಿದೆ. ಪ್ರಜಾತಂತ್ರದ ಮೇಲೆ ಧರ್ಮತಂತ್ರ ಸವಾರಿ ಮಾಡುತ್ತಿದ್ದು, ಪ್ರಜಾತಂತ್ರ ಉಳಿದರೆ ಮಾತ್ರ, ಜನರ ಹಕ್ಕುಗಳ ರಕ್ಷಣೆ ಸಾಧ್ಯವಾಗುತ್ತದೆ. ಹಾಗಾಗಿ ಎಲ್ಲಾ ಶೋಷಿತರು ಒಂದೇ ವೇದಿಕೆಯಲ್ಲಿ ಬಂದು ನಮ್ಮ ಹಕ್ಕುಗಳನ್ನು ಪ್ರತಿಪಾದಿಸುವುದರ ಮೂಲಕ ಶೋಷಿತರಿಗೆ ಏಳಿಗೆಗೆ ಅಡ್ಡಗಾಲಾಗಿರುವ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಲು ಈ ಸಮಾವೇಶ ಮಹತ್ವ ಪಡೆದುಕೊಳ್ಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಲಾಢ್ಯರ ಬೆದರಿಕೆಗಳಿಗೆ ಬಲಿಯಾಗದೆ ನ್ಯಾಯವಾದಿ ಕಾಂತರಾಜ ಅವರ ವರದಿಯನ್ನು ಸ್ವೀಕರಿಸಿ, ಸಾರ್ವಜನಿಕ ಚರ್ಚೆಗೆ ಬಿಟ್ಟು, ತದನಂತರ ಜಾರಿಗೆ ತರಬೇಕೆಂಬುದು ಎಲ್ಲಾ ಶೋಷಿತ ಸಮುದಾಯಗಳ ಒತ್ತಾಯವಾಗಿದೆ ಎಂದು ಮಾವಳ್ಳಿ ಶಂಕರ್ ನುಡಿದರು.

ಶೋಷಿತರ ಏಳಿಗೆಗೆ ಅಡ್ಡಗಾಲು ಹಾಕುವವರು ಅಂದೂ ಇದ್ದರು, ಇಂದೂ ಇದ್ದಾರೆ. ಚಿನ್ನಪ್ಪರೆಡ್ಡಿ ವರದಿ, ವೆಂಕಟಸ್ವಾಮಿ ವರದಿ, ರಾಜೇಂದ್ರ ಸಾಚಾರ್ ವರದಿಗಳು ಜಾರಿಗೆ ಬರದಂತೆ ಅಡ್ಡಿ ಮಾಡಿದವರೇ, ಇಂದು ಕಾಂತರಾಜ ವರದಿ ಸ್ವೀಕರಿಸಿದಂತೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸ್ವಾಮೀಜಿಯೊಬ್ಬರು ವರದಿಯನ್ನು ಸ್ವೀಕರಿಸದಂತೆ ನೀಡಿರುವ ಹೇಳಿಕೆ ಸರಿಯಲ್ಲ. ವರದಿಯಲ್ಲಿ ಏನಿದೆ ಎಂದು ತಿಳಿಯದೆ ಈ ರೀತಿಯ ಹೇಳಿಕೆ ನೀಡುವುದು ಅನಾಗರಿಕ ನಡೆ. ಹಾಗಾಗಿ ಮುಖ್ಯಮಂತ್ರಿಗಳು ಒತ್ತಡಕ್ಕೆ ಮಣಿಯಬಾರದು ಎಂದು ಆಗ್ರಹಿಸಿದರು.

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸಂಘಟನಾ ಸಂಚಾಲಕ ಅನಂತನಾಯಕ್ ಮಾತನಾಡಿ, ಶೋಷಿತ ಸಮುದಾಯಗಳು ಒಂದೇ ವೇದಿಕೆಯಲ್ಲಿ ಸೇರಿ, ಸಾಮಾಜಿಕ ನ್ಯಾಯವನ್ನು ಕೇಳುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಿದ್ದು, ಎಲ್ಲಾ ಶೋಷಿತ ಸಮುದಾಯದವರು ಸ್ವಯಂ ಪ್ರೇರಣೆಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಮಚಂದ್ರಪ್ಪ ಮಾತನಾಡಿ, ಕಳೆದ ಎಂಟು ತಿಂಗಳ ಹಿಂದೆ ಶೋಷಿತ ಸಮುದಾಯಗಳು ತಮ್ಮ ನ್ಯಾಯಬದ್ದ ಹಕ್ಕಿಗಾಗಿ ಈ ಒಕ್ಕೂಟವನ್ನು ಸ್ಥಾಪಿಸಿದ್ದು, ಇದು ಮೊದಲ ಸಮಾವೇಶವಾಗಿದೆ. ಕೆಲವರ ಒತ್ತಡಕ್ಕೆ ಮಣಿಯದೆ, ಬಹುಸಂಖ್ಯಾತರ ಬೇಡಿಕೆಯಂತೆ ಕಾಂತರಾಜ ವರದಿ ಸ್ವೀಕರಿಸಬೇಕೆಂಬುದು ನಮ್ಮ ಆಗ್ರಹವಾಗಿದೆ. ಸುಮಾರು 3 ಲಕ್ಷಕ್ಕೂ ಅಧಿಕ ಜನರು ಒಂದೆಡೆ ಸೇರುತ್ತಿದ್ದು, ಎಲ್ಲರೂ ಪಾಲ್ಗೊಂಡು ಶೋಷಿತರ ಶಕ್ತಿ ಪ್ರದರ್ಶಿಸುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಎಸ್.ನಾಗಣ್ಣ, ಕೊಟ್ಟಶಂಕರ್, ಧನಿಯಕುಮಾರ್, ಆಂಜನಪ್ಪ, ಕುಮಾರನಾಯ್ಕ್, ಸುರೇಶ್, ಎಂ.ಬಿ. ಈರಣ್ಣ, ನರಸಿಂಹಯ್ಯ, ಶ್ರೀನಿವಾಸ್, ವೆಂಕಟೇಶ್, ಡಾ. ಪಾಪಣ್ಣ, ಮಡಿವಾಳ ಸಮಾಜದ ರಾಜ್ಯಾಧ್ಯಕ್ಷ ನಂಜಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...