ತುಮಕೂರು | ಹೊರಗುತ್ತಿಗೆ ಮಹಿಳಾ ನೌಕರರಿಗೆ ಹೆರಿಗೆ ಭತ್ಯೆ : ಡಾ.ನಾಗಲಕ್ಷ್ಮೀ ಚೌಧರಿ

Date:

 ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಮಹಿಳಾ ನೌಕರರಿಗೆ ಖಾಯಂ ನೌಕರರಂತೆಯೇ ಹೆರಿಗೆ ರಜೆ, ಹೆರಿಗೆ ಭತ್ಯೆ ಸೌಲಭ್ಯ ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ಕಾರ್ಯರೂಪಕ್ಕೆ ತರಲು ಪ್ರಯತ್ನಿಸುತ್ತೇನೆಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ  ಚೌಧರಿ ಭರವಸೆ ನೀಡಿದರು.

 ತುಮಕೂರು ನಗರದ ಜಿಲ್ಲಾ ಬಾಲಭವನದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಮಟ್ಟದ ವಾರ್ಷಿಕ ಮಹೋತ್ಸವ, ಜಿಲ್ಲಾ ಸಮಿತಿಯ ಅಭಿನಂದನಾ ಸಮಾರಂಭ ಹಾಗೂ ರಾಜ್ಯ ಮಟ್ಟದ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರ ಒಗ್ಗಟ್ಟು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,

ಸರ್ಕಾರದ ಖಾಯಂ ಮಹಿಳಾ ನೌಕರರಿಗೆ ನೀಡುವಂತೆಯೇ ಹೊರಗುತ್ತಿಗೆ ಮಹಿಳಾ ನೌಕರರಿಗೂ ಹೆರಿಗೆ ಭತ್ಯೆ, ಹೆರಿಗೆ ರಜೆ ಸೌಲಭ್ಯ ಕಲ್ಪಿಸಬೇಕು. ಹೊರಗುತ್ತಿಗೆಯಡಿ ಕಾರ್ಯ ನಿರ್ವಹಿಸುವ ಬಹುಪಾಲು ನೌಕರರು ಆರ್ಥಿಕವಾಗಿ ಹಿಂದುಳಿದಿರುವುದರಿಂದ ನೌಕರಿ ಅವರಿಗೆ ಅನಿವಾರ್ಯವಾಗಿರುತ್ತದೆ. ಹೆರಿಗೆ ಸಮಯದಲ್ಲಿ ಹೊರಗುತ್ತಿಗೆ ಮಹಿಳಾ ನೌಕರರು ಆರ್ಥಿಕ ಸಂಕಷ್ಟಕ್ಕೆ ಸಿಲುಕದಂತೆ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಭತ್ಯೆ, ರಜಾ ಸೌಲಭ್ಯವನ್ನು ನೀಡುವಂತೆ ಈಗಾಗಲೇ ಆರೋಗ್ಯ ಸಚಿವರ ಗಮನಕ್ಕೆ ತಂದಿದ್ದೇನೆ. ಮುಖ್ಯಮಂತ್ರಿಗಳಿಗೂ ಮನವಿ ಮಾಡಲಾಗುವುದೆಂದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001255935

 ಹೊರಗುತ್ತಿಗೆ ನೌಕರರು ಜೀತ ಪದ್ಧತಿಯಂತೆ ದುಡಿಯಬೇಕಾಗಿಲ್ಲ. ಸಮಾನ ಕೆಲಸಕ್ಕೆ ಸಮಾನ ವೇತನ ಪಡೆಯಲು ಸಂಪೂರ್ಣ ಅರ್ಹರಿರುತ್ತಾರೆ. ರಾಜ್ಯದ 23 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಆಸ್ಪತ್ರೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೊರಗುತ್ತಿಗೆ ನೌಕರರಿಗೆ ಕನಿಷ್ಟ ವೇತನ ಪಾವತಿಯಾಗುತ್ತಿಲ್ಲ. ಸಕಾಲದಲ್ಲಿ ಸಂಬಳ ಕೈಗೆ ಸಿಗುತ್ತಿಲ್ಲವೆಂದು ದೂರುಗಳು ಕೇಳಿ ಬಂದಿವೆ. ಸಕಾಲದಲ್ಲಿ ಕನಿಷ್ಠ ವೇತನ ಪಾವತಿ ಮಾಡದ ನೇಮಕಾತಿ ಏಜೆನ್ಸಿಗಳನ್ನು ಬ್ಲಾಕ್ ಲಿಸ್ಟ್ಗೆ ಸೇರಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. 

 ಗುತ್ತಿಗೆ ನೌಕರರು ತಮಗೆ ಸಿಗಬೇಕಾದ ಸೌಲಭ್ಯಗಳನ್ನು ಪಡೆಯಲು ಕಾನೂನು ಮೂಲಕ ಹೋರಾಡಿದಾಗ ಮಾತ್ರ ಗೆಲುವು ದೊರೆಯುತ್ತದೆ. ಈ ನಿಟ್ಟಿನಲ್ಲಿ ಹೊರಗುತ್ತಿಗೆ ನೌಕರರು ಸಂಘಟನೆ ಮೂಲಕ ಹೋರಾಡಬೇಕೆಂದು ಸಲಹೆ ನೀಡಿದರು. 

1001255936

 ಅರ್ಹತೆ ಇರುವುದನ್ನು ಪಡೆಯಲು ಒಗ್ಗಟ್ಟಿನ ದನಿ ಎತ್ತಲೇಬೇಕು. ಎಲ್ಲಿಯವರೆಗೂ ದನಿ ಎತ್ತುವುದಿಲ್ಲವೋ ಅಲ್ಲಿಯವರೆಗೂ ಸೌಲಭ್ಯಗಳು ನಮ್ಮ ಕೈ ಸೇರುವುದಿಲ್ಲ. ಹೊರಗುತ್ತಿಗೆ ನೌಕರರಿಗೆ ಸಕಾಲದಲ್ಲಿ ಕನಿಷ್ಠ ವೇತನ ಪಾವತಿ ಮಾಡುವುದು ಸಂಬಂಧಿಸಿದ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ. ಖಾಯಂ ನೌಕರರಿಗಿಂತ ಹೆಚ್ಚು ಕೆಲಸ ಮಾಡುವ ಹೊರ ಗುತ್ತಿಗೆ ನೌಕರರಿಗೆ ವೇತನ ಪಾವತಿಯಲ್ಲಿ ತಾರತಮ್ಯ ಕಂಡು ಬಂದರೆ ಆಯೋಗ ಸುಮ್ಮನೆ ಕೈಕಟ್ಟಿ ಕೂರುವುದಿಲ್ಲ ಎಂದು ತಿಳಿಸಿದರು. 

 ನೇಮಕಾತಿ ಏಜೆನ್ಸಿಗಳು ಗುತ್ತಿಗೆ ನೌಕರರಿಗೆ ಕಡ್ಡಾಯವಾಗಿ ಮಾಹೆಯಾನ ಕನಿಷ್ಠ 14,000 ರೂ.ಗಳ ವೇತನವನ್ನು ಪಾವತಿಸಬೇಕು. ಇಲ್ಲದಿದ್ದರೆ ಸಂಬAಧಿಸಿದ ಏಜೆನ್ಸಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರಲ್ಲದೆ, ಬರುವ ದಿನಗಳಲ್ಲಿ ಗುತ್ತಿಗೆ ನೌಕರರಿಗೆ ನೇರ ವೇತನ ಪಾವತಿ ಮಾಡಲು ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು. 

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರ ಸಂಘದ ರಾಜ್ಯಾಧ್ಯಕ್ಷ ಅಕ್ಷಯ್ ಡಿ.ಎಂ ಗೌಡ, ತುಮಕೂರು ಜಿಲ್ಲಾ ಘಟಕ ಮತ್ತು ರಾಜ್ಯ ಸಮಿತಿ ನಿರ್ದೇಶಕ ಬಿ. ಸಿದ್ದಪ್ಪ, ರಾಜ್ಯ ಸಮಿತಿ ಪದಾಧಿಕಾರಿಗಳು, ಕಿರಣ್ ಕಾರ್ತಿಕ್, ರಾಜ್ಯ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರು ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...