ತುಮಕೂರು | ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಮಿತಿ ಮೀರಿದೆ : ಜ್ಞಾನಸಿಂಧುಸ್ವಾಮಿ

Date:

ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮತ್ತು ಜನರ ಸಮಸ್ಯೆಗಳಿಗೆ ಪರಿಹಾರ ನೀಡಬೇಕಿದ್ದ ಅಧಿಕಾರಿಗಳು ಭ್ರಷ್ಟಾಚಾರದ ಹಾದಿ ಹಿಡಿದಿದ್ದು, ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಮಿತಿ ಮೀರಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಉಪಾಧ್ಯಕ್ಷ ಜ್ಞಾನಸಿಂಧುಸ್ವಾಮಿ ಆರೋಪಿಸಿದರು.

ತುಮಕೂರು ನಗರದ ತಹಸೀಲ್ದಾರ್ ಕಚೇರಿಯಲ್ಲಿ ಅಂತರ ರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನದ ಅಂಗವಾಗಿ ತಹಸೀಲ್ದಾರ್‌ಗೆ ತಾಲ್ಲೂಕು ಕಚೇರಿಯನ್ನು ಲಂಚ ಮತ್ತು ಭ್ರಷ್ಟಾಚಾರ ಮುಕ್ತ ಮಾಡುವಂತೆ ಹಾಗೂ ಆಡಳಿತದಲ್ಲಿ ಪಾರದರ್ಶಕತೆ ತರುವಂತೆ ಆಗ್ರಹ ಪತ್ರ ಸಲ್ಲಿಸಿ ಮಾತನಾಡಿದ ಅವರು, ತಾಲೂಕು ಕೇಂದ್ರಕ್ಕೆ ಹಲವು ಸಮಸ್ಯೆಗಳನ್ನು ಹೊತ್ತುಕೊಂಡು ಬರುವ ಜನಸಾಮಾನ್ಯರ ಕೆಲಸ ಮಾಡಿಕೊಡುತ್ತಿಲ್ಲ. ದಿನನಿತ್ಯ ಕಚೇರಿಗೆ ಅಲೆದರೂ ಬಡವರ ಕೆಲಸಗಳು ಆಗುತ್ತಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಮಧ್ಯವರ್ತಿಗಳು ಜನಸಾಮಾನ್ಯರಿಂದ ಹಣ ಪಡೆದು ಕೆಲಸ ಮಾಡಿ ಕೊಡುತ್ತಿದ್ದಾರೆ. ನೇರವಾಗಿ ಕಚೇರಿಗೆ ಭೇಟಿ ನೀಡಿ ಕೆಲಸ ಮಾಡಿಕೊಡಲು ಮನವಿ ಸಲ್ಲಿಸಿದರೆ ಯಾವುದೇ ಕೆಲಸಗಳು ಆಗುವುದಿಲ್ಲ. ಆದರೆ, ಮಧ್ಯವರ್ತಿಗಳು ಕೈ ಹಾಕಿದ ಕೆಲಸಗಳು ಕಚೇರಿಗಳಲ್ಲಿ ಕೆಲವೇ ನಿಮಿಷಗಳಲ್ಲಿ ಮಾಡಿಕೊಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. 

1000766244

ಇತ್ತೀಚೆಗೆ ಜಮೀನಿನ ದಾಖಲೆ ಮತ್ತು ಸರ್ಕಾರದ ಯೋಜನೆಗಳಡಿ ಲಾಭ ಪಡೆಯಲು ಪಲಾನುಭವಿಯೊಬ್ಬರು ಅರ್ಜಿ ಸಲ್ಲಿಸಿದರೆ, ದಾಖಲೆ ಸರಿಯಾಗಿಲ್ಲ, ಹೊಂದಾಣಿಕೆಯಾಗುತ್ತಿಲ್ಲ ಎಂಬ ನಾನಾ ಕಾರಣ ನೀಡಿ ತಿಂಗಳಾನುಗಟ್ಟಲೆ ಕಚೇರಿಗೆ ಅಲೆಯುವಂತೆ ಮಾಡಿ ಕೊನೆಗೆ ಕೆಲಸವನ್ನೇ ಮಾಡಿ ಕೊಟ್ಟಿಲ್ಲ. ಸರ್ಕಾರ ಜನರ ಶ್ರೆಯೋಭಿವೃದ್ಧಿಗಾಗಿ ಜಾರಿಗೊಳಿಸುವ ಹಲವು ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ತಲುಪಿಸಬೇಕಾದ ಅಧಿಕಾರಿಗಳೇ ಜನರ ದಿಕ್ಕು ತಪ್ಪಿಸುತ್ತಿದ್ದು, ನಾನಾ ಸಬೂಬು ಹೇಳು ಸಾಗ ಹಾಕುತ್ತಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವವಾಗುತ್ತಿದೆ, ಈ ಬಗ್ಗೆ ಕೆಆರ್‌ಎಸ್ ಪಕ್ಷ ಹಲವು ವರ್ಷಗಳಿಂದ ನಿರಂತರವಾಗಿ ಪ್ರತಿಭಟನೆ, ಹಿರಿಯ ಅಧಿಕಾರಿಗಳಿಗೆ ಪತ್ರಗಳನ್ನು ನೀಡಿ , ಏಕಾಏಕಿ ಕಚೇರಿಗೆ ನುಗ್ಗಿ ತಪ್ಪಿತಸ್ಥರನ್ನು ಹಿಡಿದರೂ ಅಂಥವರಿಗೆ ಸೂಕ್ತ ಶಿಕ್ಷೆಯಾಗುತ್ತಿಲ್ಲ. ಸರ್ಕಾರದಿಂದ ಯೋಜನೆಯಡಿ ಪಲಾನುಭವಿಯಾಗಬೇಕಾದರೂ ಅಧಿಕಾರಿಗಳಿಗೆ ಇಂತಿಷ್ಟು ಲಂಚ ಕೊಟ್ಟೇ ಪಲಾನುಭವಿಯಾಗಬೇಕಾದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ದೂರಿದರು.

1000766243

ಕಚೇರಿಯಲ್ಲಿ ಯಾವುದಾದರು ದಾಖಲೆ ಕುರಿತು ಮಾಹಿತಿ ಮತ್ತು ಸೌಲಭ್ಯ ಪಡೆಯಲು ಹೋದರೆ ತಹಸೀಲ್ದಾರ್ ಆದೇಶ ಮಾಡಿದ್ದರೂ ಸಹ ಕೆಳ ಹಂತದ ನೌಕರರು ಮಾಹಿತಿ ಕೊಡಲು ಹಿಂದೇಟು ಹಾಕುತ್ತಿದ್ದಾರೆ. ಇನ್ನು ಕೆಲವು ಬಾರಿ ರೆಕಾರ್ಡ್ ರೂಮ್‌ನಲ್ಲಿ ದಾಖಲೆ ಸರಿ ಇದ್ದರೂ ಸಹ ಅದನ್ನು ಅಧಿಕಾರಿಗಳ ಮಟ್ಟಕ್ಕೆ ಕೊಟ್ಟಿರುವುದಿಲ್ಲ. ದಾಖಲೆ ಮತ್ತೀತರೆ ಅರ್ಜಿ ಇಲ್ಲೇ ಇಟ್ಟುಕೊಂಡು ಪಲಾನುಭವಿಗಳಿಗೆ ಅಧಿಕಾರಿಗಳು ಸಹಿ ಹಾಕಬೇಕು, ಓಕೆ ಮಾಡಬೇಕು ಎಂದೇಲ್ಲ ಹೇಳಿ ಜನರಿಗೆ ಸ್ವಲ್ಪ ದಿನ ಯಾಮಾರಿಸಿ ನಂತರ ಅದಕ್ಕೆ ಸಬೂಬು ಕಟ್ಟಿ ತಿರಸ್ಕಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಜ್ಞಾನಸಿಂಧುಸ್ವಾಮಿ ತಿಳಿಸಿದರು.

ಇದೇ ಸಂಧರ್ಭದಲ್ಲಿ ಕೆ ಆರ್ ಎಸ್ ಪಕ್ಷದ ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳಾದ ರಘುನಂದನ್ , ಚನ್ನಯ್ಯ ,ಬೈರೇಶ್ ಮುಂತಾದವರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...