ತುಮಕೂರು | ಮನರೇಗಾ ದಿನಾಚರಣೆ ಸಂಭ್ರಮ; ಕಾಮಗಾರಿ ಸ್ಥಳದಲ್ಲಿ ಕೂಲಿ ಕಾರ್ಮಿಕರಿಗೆ ಸನ್ಮಾನ

Date:

ತುಮಕೂರು ಜಿಲ್ಲೆಯಾದ್ಯಂತ ಶುಕ್ರವಾರ ಮಹಾತ್ಮ ಗಾಂಧಿ ಮನರೇಗಾ ದಿನಾಚರಣೆಯನ್ನು ಕಾಮಗಾರಿ ಸ್ಥಳಗಳಲ್ಲಿ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರ ಮೂಲಕ ಆಚರಿಸಿದರು.

ಕೂಲಿ ಕಾರ್ಮಿಕರ ಜೊತೆ ತುಮಕೂರು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಸೇರಿದಂತೆ ಮನರೇಗಾ ಸಿಬ್ಬಂದಿ ಕೇಕ್ ಕತ್ತರಿಸುವುದರ ಮೂಲಕ ಸಂಭ್ರಮಿಸಿದರು.

ಕೂಲಿ ಕಾರ್ಮಿಕರಿಗೆ ಸನ್ಮಾನ: ಮನರೇಗಾ ಯೋಜಯಡಿ 100 ದಿನಗಳು ಪೂರೈಸಿದ ಕೂಲಿಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಯ ಸ್ಥಳದಲ್ಲಿ ಮನರೇಗಾ ದಿನವನ್ನು ಆಚರಿಸಲಾಗಿದ್ದು, ಕೆಲವು ಕಡೆ ಕೂಲಿ ಕಾರ್ಮಿಕರಿಗೆ ಟೀ ಶರ್ಟ್ ಮತ್ತು ಟೋಪಿಗಳನ್ನು ವಿತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಸಿ ನೆಡುವ ಕಾರ್ಯಕ್ರಮ: ಗುಬ್ಬಿ, ತುಮಕೂರು, ಕೊರಟಗೆರೆ, ಶಿರಾ ತಾಲೂಕು ಸೇರಿದಂತೆ ವಿವಿಧ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಮನರೇಗಾ ದಿನದ ಅಂಗವಾಗಿ ಸಸಿ ನೆಟ್ಟು ಸಂಭ್ರಮಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಕೊಡಗು | ಬಾಳುಗೋಡಿನ ಜನರ ಗೋಳಿಗೆ ಸ್ಪಂದಿಸಿದ ಮಾನವ ಹಕ್ಕುಗಳ ಆಯೋಗ; ದಶಕಗಳ ನಂತರ ಕುಡಿಯುವ ನೀರು

ತುಮಕೂರು ಜಿಲ್ಲಾ ಪಂಚಾಯತಿ ಸಿಇಒ ಪ್ರಭು ಜಿ ಮಾತನಾಡಿ, “ಮನರೇಗಾ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಲು, ಕೂಲಿ ಕಾರ್ಮಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಪ್ರತಿ ವರ್ಷ ಫೆಬ್ರುವರಿ 2ರಂದು ಮನರೇಗಾ ದಿನವನ್ನು ಆಚರಿಸಲಾಗುತ್ತದೆ. ಯೋಜನೆಯಡಿ ಒಂದು ಆರ್ಥಿಕ ವರ್ಷದಲ್ಲಿ ಅಕುಶಲ ಕೂಲಿ ಕಾರ್ಮಿಕರಿಗೆ 100 ದಿನಗಳ ಉದ್ಯೋಗ ನೀಡಿಲಾಗುತ್ತದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು. ನಿಮ್ಮ ಜಮೀನುಗಳಲ್ಲಿ ನೀವೇ ಕೆಲಸ ಮಾಡುವುದರಿಂದ ಮನರೇಗಾ ಯೋಜನೆಯಡಿ ಪ್ರತಿ ದಿನಕ್ಕೆ ₹316 ಕೂಲಿ ದೊರೆಯುತ್ತದೆ. ಯೋಜನೆಯಡಿಯಲ್ಲಿ ಗ್ರಾಮೀಣ ಭಾಗದ ಲಕ್ಷಾಂತರ ಕುಟುಂಬಗಳು ಕೆಲಸ ಮಾಡಿಕೊಂಡು ಬದುಕುತ್ತಿವೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...