ತುಮಕೂರು | ಮೈಕ್ರೋ ಫೈನಾನ್ಸ್ ಕಿರುಕುಳ; ಲೈಸೆನ್ಸ್ ರದ್ದುಗೊಳಿಸುವಂತೆ ದಸಂಸ ಆಗ್ರಹ

Date:

ದೀನ ದಲಿತರಿಗೆ ಆರ್ಥಿಕ ನೆರವು ನೀಡುತ್ತೇವೆಂದು ಗ್ರಾಮೀಣ ಭಾಗದಲ್ಲಿ ಗುಂಪು ರಚಿಸಿ ಸಾಲ ನೀಡುವ ಮೈಕ್ರೋ ಫೈನಾನ್ಸ್ ಕಂಪೆನಿಗಳು ಮಹಿಳೆಯರಲ್ಲಿ ಘರ್ಷಣೆ ಹುಟ್ಟಿಸಿದ್ದಾರೆ. ಹಾಗಾಗಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಅವರ ಲೈಸೆನ್ಸ್ ರದ್ದುಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಗುಬ್ಬಿ ತಾಲೂಕು ಸಂಚಾಲಕ ಚೇಳೂರು ಶಿವನಂಜಪ್ಪ ಒತ್ತಾಯಿಸಿದರು.

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದರು.

“ಸಾಲ ತೀರುವಳಿಗೆ ಅವಕಾಶ ನೀಡದೆ ಗುಂಪಿನ ಇತರೆ ಸದಸ್ಯರ ಮೂಲಕ ಬೈಗುಳ, ನಿಂದನೆ ಮಾಡಿಸಿ ಅಪಮಾನ ಮಾಡುತ್ತಾರೆ. ಈ ಹಿನ್ನಲೆ ಆತ್ಮಹತ್ಯೆಗೆ ಶರಣಾದ ಮೂರು ಪ್ರಕರಣ ನಿದರ್ಶನವಾಗಿದೆ. ಈ ಕಾರಣಕ್ಕೆ ಮೈಕ್ರೋ ಫೈನಾನ್ಸ್ ಪರವಾನಗಿ ರದ್ದು ಮಾಡಬೇಕು. ಆತ್ಮಹತ್ಯೆಗೆ ಕಾರಣವಾದ ಫೈನಾನ್ಸ್ ಮೇಲೆ ಪ್ರಕರಣ ದಾಖಲಿಸಿ ಮೃತ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೈಕ್ರೋ ಫೈನಾನ್ಸ್ ಸಾಲ ಮರುಪಾವತಿ ಮಾಡಲಾಗದೆ ಆಗಿರುವ ಅವಮಾನಕ್ಕೆ ತಿಪಟೂರು ತಾಲ್ಲೂಕಿನ ಭಾಗ್ಯಮ್ಮ, ಶರಣಯ್ಯ, ನಾರಾಯಣಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ದರ್ಪ ದೌರ್ಜನ್ಯ ಖಂಡಿಸಿ ಜುಲೈ 1 ರಂದು ತಿಪಟೂರು ನಗರದಲ್ಲಿ ದಸಂಸ ವಿಭಾಗೀಯ ಸಮಿತಿಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಗುಬ್ಬಿ ತಾಲೂಕಿನ ಎಲ್ಲ ದಲಿತ ಮುಖಂಡರೂ ಕೂಡ ಆಗಮಿಸಬೇಕು” ಎಂದು ಕರೆ ನೀಡಿದರು.

ದಸಂಸ ತಾಲೂಕು ಸಂಘಟನಾ ಸಂಚಾಲಕ ಲಕ್ಕೇನಹಳ್ಳಿ ನರಸೀಯಪ್ಪ ಮಾತನಾಡಿ, “ಹತ್ತು ಜನ ಮಹಿಳೆಯರ ಗುಂಪು ರಚಿಸಿ ಸಾಲ ವಸೂಲಿಗೆ ಇಡೀ ಗ್ರಾಮದಲ್ಲಿ ಮಹಿಳೆಯರ ನಡುವೆ ಜಗಳಕ್ಕೆ ಅಸಮಾಧಾನಕ್ಕೆ ಕಾರಣವಾಗಿರುವ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಸಾಲ ವಸೂಲಿಗೆ ಗುಂಪಿನ ಸದಸ್ಯರಲ್ಲೇ ವೈಮನಸ್ಯ ಹುಟ್ಟಿಸಿದ್ದಾರೆ. ಸಾಲದ ಸ್ವಲ್ಪ ಹಣ ಬಾಕಿ ಇದ್ದರೂ ಚಕ್ರ ಬಡ್ಡಿ ವಸೂಲಿ ಮಾಡುವ ಕಂಪೆನಿಯು ನೀಡುವ ಕಿರುಕುಳಕ್ಕೆ ಆತ್ಮಹತ್ಯೆ ಪ್ರಕರಣ ನಡೆದಿದೆ. ಇಂತಹ ಫೈನಾನ್ಸ್ ಪರವಾನಗಿ ರದ್ದು ಮಾಡಿ ಕಿರುಕುಳ ನೀಡಿದ ಸಿಬ್ಬಂದಿ ಮೇಲೆ ಪೊಲೀಸ್ ಪ್ರಕರಣ ದಾಖಲಿಸಿ ಮೃತ ಕುಟುಂಬಕ್ಕೆ ಪರಿಹಾರ ನೀಡಬೇಕು” ಎಂದು ಆಗ್ರಹಿಸಿದರು.

ದಸಂಸ ಮಹಿಳಾ ಘಟಕದ ತಾಲೂಕು ಸಂಚಾಲಕಿ ಶಿವಮ್ಮ ಮಾತನಾಡಿ, “ಮಹಿಳೆಯರನ್ನು ಸಾರ್ವಜನಿಕವಾಗಿ ಅಶ್ಲೀಲವಾಗಿ ನಿಂದಿಸಲು ಪ್ರಚೋದನೆ ನೀಡುವ ಫೈನಾನ್ಸ್ ಕಂಪೆನಿಗಳು ಮಾನಸಿಕ ಕಿರುಕುಳಕ್ಕೆ ಕಾರಣವಾಗಿ, ಮಹಿಳೆಯರ ಆತ್ಮಹತ್ಯೆಗೆ ಕಾರಣವಾಗಿದ್ದಾರೆ. ಇಂತಹ ಕಂಪೆನಿಯ ವಿರುದ್ಧ ತಿಪಟೂರಿನಲ್ಲಿ ನಡೆಯುವ ಬೃಹತ್ ಪ್ರತಿಭಟನೆ ದಸಂಸ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಅವರ ನೇತೃತ್ವದಲ್ಲಿ ನಡೆಯಲಿದೆ. ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ಸಂಸ್ಥಾಪಕ ಸದಸ್ಯ ಕೆ ದೊರೈರಾಜು, ರೈತ ಸಂಘದ ಚನ್ನಬಸವಣ್ಣ, ರುದ್ರಮ್ಮ ಶಿವಮೊಗ್ಗ, ಎ ಗೋವಿಂದರಾಜು ಸೇರಿದಂತೆ ಇತರರು ಭಾಗವಹಿಸಿ ಪ್ರತಿಭಟನೆ ಯಶಸ್ವಿಗೊಳಿಸಲಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ದೇವದಾರಿಯಲ್ಲಿ ಗಣಿಗಾರಿಕೆ ನಿಷೇಧಕ್ಕೆ ಆಗ್ರಹ; ಎಚ್‌ಡಿಕೆಗೆ ರಕ್ತದಲ್ಲಿ ಪತ್ರ ಬರೆದ ಹೋರಾಟಗಾರ

ಈ ಸಂದರ್ಭದಲ್ಲಿ ಸಮಿತಿಯ ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ಸೌಭಾಗ್ಯಮ್ಮ, ಟಿ ಜಿ ಸಚಿನ್, ಫಣೀಂದ್ರ ಮುನಿ, ರಾಜಣ್ಣ, ಮಧು, ಚೇತನ್, ಗಿರೀಶ್, ದೊಡ್ಡಮ್ಮ, ಕಲ್ಪನಾ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...