ತುಮಕೂರು | ಎಂ ಎಂ ಕಲ್ಬುರ್ಗಿ ಅವರ ವಿಚಾರ ಎಂದಿಗೂ ಜೀವಂತ : ರಾಯಸಂದ್ರ ರವಿಕುಮಾರ್

Date:

ಎಂ ಎಂ ಕಲ್ಬುರ್ಗಿರವರು 12ನೇ ಶತಮಾನದ ಬಸವಣ್ಣನವರ ವಚನ ಸಾಹಿತ್ಯವನ್ನು ಹುಡುಕಿ ಸತ್ಯಾಂಶವನ್ನು ಜಗತ್ತಿಗೆ ತಿಳಿಸಿದ್ದಕ್ಕೆ ಇದನ್ನು ಸಹಿಸದ ಮೂಲಭೂತವಾದಿಗಳು ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಆದರೆ ವ್ಯಕ್ತಿಯನ್ನು ಕೊಂದಿರಬಹುದೇ ಹೊರೆತು ವಿಚಾರಗಳನ್ನಲ್ಲ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಯುವ ಘಟಕದ ರಾಜ್ಯ ಸಂಚಾಲಕರು ಹಾಗೂ ಭಾರತೀಯ ಶರಣ ಸೇನಾ ತುಮಕೂರು ಘಟಕ ಸಂಚಾಲಕ ರಾಯಸಂದ್ರ ರವಿಕುಮಾರ್ ತಿಳಿಸಿದರು.

ತುಮಕೂರು ನಗರದ ಜಯದೇವ ಸಭಾಂಗಣದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ಭಾರತೀಯ ಶರಣ ಸೇನೆ ವತಿಯಿಂದ ಡಾ. ಎಂ ಎಂ ಕಲ್ಬುರ್ಗಿ ರವರ 9ನೇ ವರ್ಷದ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಸವಣ್ಣನವರ ಹಾಕಿಕೊಟ್ಟ ಹಾದಿಯಲ್ಲಿ ಕಲ್ಬುರ್ಗಿಯವರು ಸಾಗುತ್ತಿದ್ದರು. ಲಿಂಗಾಯತ ಎಂಬುದು ಜಾತಿಯಲ್ಲ ಅದೊಂದು ಧರ್ಮ. ಲಿಂಗಾಯತ ಧರ್ಮ ಸ್ವತಂತ್ರ ಧರ್ಮ, ಸಮಾನತೆಯ ಧರ್ಮ ಎಂದು ಹೇಳಿದರು.

ಶರಣಸೇನಾ ಸಂಚಾಲಕ ಹೆಚ್. ಎಲ್. ಕುಮಾರಸ್ವಾಮಿ ಮಾತನಾಡಿ ಕಲಬುರ್ಗಿ ಅವರು ವಚನಸಾಹಿತ್ಯದ ನೈಜ ಅಂಶಗಳನ್ನು ಜಗತ್ತಿಗೆ ಪರಿಚಯಿಸಿದವರು. ಸಂಶೋಧನೆ ಹಾಗೂ ಐತಿಹಾಸಿಕ ದಾಖಲೆಯ ಸಮೇತ ನೀಡಿದ ವಿಚಾರಧಾರೆಗಳನ್ನು, ಕನ್ನಡ ನೆಲದಲ್ಲಿ ಕಾಯಕ ಜೀವಿಗಳಿಂದ ಹುಟ್ಟಿದ ಏಕೈಕ ಧರ್ಮ ಅದು ಲಿಂಗಾಯತ ಧರ್ಮ ಎಂಬ ವಿಚಾರಗಳನ್ನ ಮುಂದಿನ ಪೀಳಿಗೆಗೆ ತಿಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿರಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಬುರ್ಗಿ ಅವರು ಕನ್ನಡ ಶಾಸನಗಳ ಹಾಗೂ ವಚನ ಸಾಹಿತ್ಯದ ಸಂಶೋಧನೆಗೆ ಶ್ರಮಿಸಿದ ಅಪಾರ ಕೊಡುಗೆಯನ್ನು ವಿವರಿಸಿದರು.

ತುಮಕೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಉಪನ್ಯಾಸಕ ಬಸವಲಿಂಗಯ್ಯ ಮಾತನಾಡಿ ಜೀವನದಲ್ಲಿ ಉತ್ತಮ ಮೌಲ್ಯಗಳನ್ನ ಗಳಿಸಬೇಕಾದರೆ ಬಸವಣ್ಣನವರ ವಿಚಾರಧಾರೆಗಳು ಬಹುಮುಖ್ಯ. ಡಾ. ಎಂ ಎಂ ಕಲ್ಬುರ್ಗಿರವರು ವಚನ ಸಾಹಿತ್ಯದಲ್ಲಿರುವ ಸತ್ಯಾಂಶವನ್ನು ಹೊರತೆಗೆದು ಸಮಾಜಕ್ಕೆ ತಿಳಿಸಿದ್ದಾರೆ. ಇತ್ತೀಚಿಗೆ ಕಾಶ್ಮೀರ ಫೈಲ್ ಹೊರಬಂದಿದೆ. ಆದರೆ ಇದಕ್ಕೂ ಮುಖ್ಯವಾಗಿ ಸಮಾಜಕ್ಕೆ ಸತ್ಯ ತಿಳಿಯಬೇಕಾದರೆ ಬಸವಕಲ್ಯಾಣದ ಫೈಲ್ ಬರಬೇಕಿದೆ ಎಂದರು.

WhatsApp Image 2024 08 31 at 11.13.42 PM

ಕೈಗರಿಕೊದ್ಯಮಿ ಡಿ.ಬಿ. ಶಿವಾನಂದ ಮಾತನಾಡಿ ಎಂ ಎಂ ಕಲ್ಬುರ್ಗಿರವರು ತಮ್ಮ ರಕ್ತದ ಕಣ ಕಣದಲ್ಲೂ ಬಸವತತ್ವ ಮೈಗೂಡಿಸಿಕೊಂಡಿದ್ದರು. ಅವರನ್ನು ಕೊಂದಾಗ ಚಿಮ್ಮಿದ್ದು ರಕ್ತವಲ್ಲ ಬಸವಾದಿ ಶರಣರ ವಿಚಾರಧಾರೆಗಳು ಎಂದು ಹೇಳಿದರು.

ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ನಾಗಭೂಷನ್ ಮಾತನಾಡಿ ನಾನು ಲಿಂಗಾಯತ, ನನ್ನ ಧರ್ಮ ಲಿಂಗಾಯತ ಎಂದು ಎದೆ ತಟ್ಟಿ ಹೇಳಬೇಕು. ವಿಶೇಷವಾಗಿ ಯುವಕರು ಲಿಂಗಾಯತ ಧರ್ಮದ ವಿಚಾರಧಾರೆಗಳನ್ನು ಅಧ್ಯಯನ ಮಾಡಬೇಕು. ಲಿಂಗಾಯತ ಧರ್ಮ ಉಳಿಯಬೇಕೆಂದರೆ ಮುಂದಿನ ದಿನಗಳಲ್ಲಿ ನಡೆಯುವ ಜಾತಿ ಹಾಗೂ ಜನಗಣತಿಯಲ್ಲಿ ಧರ್ಮ ಅಥವಾ ಜಾತಿಯ ಕಲಾಂ ನಲ್ಲಿ ಲಿಂಗಾಯತ ಎಂಬುದಾಗಿ ನಮೂದಿಸಿ ಎಂದು ಹೇಳಿದರು

ಈ ಸಂದರ್ಭದಲ್ಲಿ ರಾಜೇಶ್ವರಿ ಶಿವಾನಂದ, ಸಿದ್ದು ಬಿ.ಎಸ್. ಸೂರನಹಳ್ಳಿ, ಬಸವರಾಜು, ದೇವರಾಜು ಕೆ, ಅಭಿಷೇಕ್ ಹಿರೇಮಠ್, ಗೋಪಾಲಕೃಷ್ಣ, ಮತ್ತಿತರ ಭಾರತೀಯ ಶರಣಸೇನಾ ಸದಸ್ಯರು ಇದ್ದರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...