ತುಮಕೂರು | 400ಕ್ಕೂ ಹೆಚ್ಚು ಅಡಕೆ ಗಿಡ ಕಡಿದ ದುಷ್ಕರ್ಮಿಗಳು; ಕಣ್ಣೀರಿಟ್ಟ ರೈತ

Date:

ದುಷ್ಕರ್ಮಿಗಳು ಫಸಲಿಗೆ ಬರುವ ಅಡಕೆ ಸಸಿಗಳನ್ನು ಕಡಿದು ಕ್ರೌರ್ಯ ಮೆರೆಯುವ ಘಟನೆಗಳೂ ನಡೆಯುತ್ತಲೇ ಇವೆ. ಅಂತೆಯೇ ದುಷ್ಕರ್ಮಿಗಳು 400ಕ್ಕೂ ಹೆಚ್ಚು ಅಡಕೆ ಗಿಡಗಳನ್ನು ಕಡಿದು ಹಾಕಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಯರದಕಟ್ಟೆಯಲ್ಲಿ ನಡೆದಿದೆ.

ಗಿಣ್ಣಪ್ಪನಹಟ್ಟಿ ಗ್ರಾಮದ ಹನುಮಂತಯ್ಯ ಅವರಿಗೆ ಸೇರಿದ ಅಡಕೆ ಗಿಡಗಳಿಗೆ ಹಾನಿಯಾಗಿದ್ದು, ಎರಡು ವರ್ಷದ ಹಿಂದೆ 1,100ಕ್ಕೂ ಹೆಚ್ಚು ಅಡಕೆ ಗಿಡಗಳನ್ನು ನೆಟ್ಟು, ಮಗುವಿನಂತೆ ಪೋಷಿಸುತ್ತಾ ಬಂದಿದ್ದರು. ಅದರಲ್ಲೀಗ 400ಕ್ಕೂ ಹೆಚ್ಚು ಅಡಿಕೆ ಸಸಿಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ. ಈ ಕುರಿತು ಶಿರಾ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವೇರಿ ಜಿಲ್ಲೆಯಲ್ಲಿಯೂ ಆಳೆತ್ತರಕ್ಕೆ ಬಂದಿದ್ದ ಅಡಕೆ ಮರಗಳು ಇನ್ನೇನು ಫಸಲು ನೀಡಬೇಕು ಎನ್ನುವಷ್ಟರಲ್ಲಿ ಕಿಡಿಗೇಡಿಗಳು ನೂರಾರು ಅಡಕೆ ಮರಗಳನ್ನು ಕಡಿದು ದುಷ್ಕೃತ್ಯ ಮೆರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕುಸುನೂರು ಗ್ರಾಮದ ಅಡಿವೆಪ್ಪ ಆಲದಕಟ್ಟಿ ಎಂಬ ರೈತರೊಬ್ಬರು ತಮ್ಮ ಜಮೀನಿನಲ್ಲಿ ಅಡಿಕೆ ಗಿಡಗಳನ್ನು ಬೆಳೆಸಿದ್ದರು. ಕಳೆದ ದೀಪಾವಳಿಯಂದು ಹಬ್ಬ ಆಚರಿಸುವುದರಲ್ಲಿ ಕುಟುಂಬದವರು ಮಗ್ನರಾಗಿದ್ದರು. ಇದೇ ಸಮಯಕ್ಕೆ ಕಾದಿದ್ದ ಕಿಡಿಗೇಡಿಗಳು ತೋಟಕ್ಕೆ ನುಗ್ಗಿ ಅಡಕೆ ಗಿಡಗಳನ್ನು ಕತ್ತರಿಸಿ ಹಾಕಿದ್ದರು. ಈ ಕುರಿತು ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ತಹಶೀಲ್ದಾರ್ ಅಜಿತ್ ಕುಮಾರ್ ರೈ ವರ್ಗಾವಣೆ ಹಿಂಪಡೆಯುವಂತೆ ಒತ್ತಾಯ

ಫಸಲಿಗೆ ಬಂದಿದ್ದ 500 ಕ್ಕೂ ಹೆಚ್ಚು ಅಡಿಕೆ ಮರಗಳ ನಾಶ

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅಜ್ಜೇನಹಳ್ಳಿಯಲ್ಲಿ ಫಸಲಿಗೆ ಬಂದಿದ್ದ 500 ಕ್ಕೂ ಹೆಚ್ಚು ಅಡಕೆ ಮರಗಳನ್ನು ಕಡಿದು ಹಾಕಿದ್ದರು. ಬೆಳಗ್ಗೆ ಅಡಕೆ ಮರಗಳಿಗೆ ನೀರು ಹಾಯಿಸಲು ಹೋದಾಗ ಕೃತ್ಯ ಬೆಳಕಿಗೆ ಬಂದಿತ್ತು. ಹಳೇಬೀಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಸ್ಥಳಕ್ಕೆ ಬೇಲೂರು ತಹಶೀಲ್ದಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...