ತುಮಕೂರು | ಯಾವ ಜೀವಿಯನ್ನೂ ದ್ವೇಷಮಾಡುವ ಹಕ್ಕು ಯಾರಿಗೂ ಇಲ್ಲ : ನಿಕೇತ್ ರಾಜ್ ಮೌರ್ಯ

Date:

“ಭೂಮಿಯ ಮೇಲಿನ ಯಾವ ಜೀವಿಯನ್ನೂ ದ್ವೇಷ ಮಾಡುವ ಹಕ್ಕು ಯಾರಿಗೂ ಇಲ್ಲ. ಎಲ್ಲರನ್ನೂ ಸ್ನೇಹ ಹಾಗೂ ಮೈತ್ರಿಭಾವದಿಂದ ಕಾಣಬೇಕು ಎಂದು ಜಗತ್ತಿನ ಧರ್ಮಗ್ರಂಥಗಳು ಸಾರಿವೆ” ಎಂದು ಕೆಪಿಸಿಸಿ ವಕ್ತಾರ ಹಾಗೂ ಅಹಿಂದ ನಾಯಕ ನಿಕೇತ್ ರಾಜ್ ಮೌರ್ಯ ತಿಳಿಸಿದರು.

ತುಮಕೂರು ನಗರದ ಕನ್ನಡ ಭವನದಲ್ಲಿ ಶುಕ್ರವಾರ ಸಂಜೆ ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕದ 2024-25ನೇ ಸಾಲಿನ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು  ಮಾತನಾಡಿದರು.

“ರಹೀಮ ರಾಮನ ಕೈ ಹಿಡಿದು ನಲಿಯುವುದು ಗಾಂಧಿಯ ಕನಸು. ಕುವೆಂಪುವಿನ ರಾಮನಿಗೆ ದ್ವೇಷ ತಿಳಿದಿರಲಿಲ್ಲ. ಇದಕ್ಕೆ ಆದರ್ಶಮಯವಾಗಿ ಸ್ವಾತಂತ್ರ್ಯ ಹೋರಾಟಗಾರ ಅಬ್ದುಲ್ ಗಫೂರ್ ಖಾನ್ ಹಾಗೂ ಮಹಾತ್ಮಗಾಂಧಿ ನಿಲ್ಲುತ್ತಾರೆ. ಯಾವ ಹಿಂದೂ ಮತ್ತು ಮುಸ್ಲಿಮನಲ್ಲಿ ಹಗೆ ಇರುತ್ತದೆಯೋ ಅವರಿಗೆ ಗೀತೆಯಾಗಲೀ, ಕುರಾನ್ ಆಗಲೀ ಅರ್ಥವಾಗಿಲ್ಲ ಎಂದೇ ನಾವು ತಿಳಿಯಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದಲ್ಲಿ ರಾಮ ಕೃಷ್ಣರಾಗಿ ಬದುಕುವುದು ಸಾಧ್ಯವಿದೆ. ಆದರೆ, ಅಕ್ಟರ್ ಆಗಿ ಬದುಕಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ನಮ್ಮಲ್ಲಿನ ಮನುಷ್ಯತ್ವವನ್ನು ದ್ವೇಷದ ಕಾರಣಕ್ಕಾಗಿ ಕಳೆದುಕೊಳ್ಳುತ್ತಿದ್ದೇವೆ. ಪ್ರತಿಯೊಬ್ಬರೂ ಈ ನೆಲವನ್ನು ಪ್ರೀತಿಸಿ ಎಂದು ಹೇಳಿದ ಗಾಂಧಿ, ಇದೇ ನೆಲದಲ್ಲಿ ಹೇ ರಾಮ್ ಎನ್ನುತ್ತಲೇ ಹತ್ಯೆಗೊಳಗಾದರು” ಎಂದು ನಿಕೇತ್ ರಾಜ್ ಮೌರ್ಯ ಹೇಳಿದರು.

ತುಮಕೂರು 1 1

ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕದ ನೂತನ ಅಧ್ಯಕ್ಷ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಸುಹೇಲ್ ಅಹಮದ್ ಮರೂರ್ ಮಾತನಾಡಿ, “ಭಾರತ ಎಂದರೆ ಬಾಂಧವ್ಯದ ರಮಣೀಯ ತವರು. ಭಾರತದ ತತ್ವವೇ ಔದಾರ್ಯ. ಅದನ್ನು ಕ್ರೌರ್ಯವಾಗಿ ಮಾರ್ಪಡಿಸಲು ಫ್ಯಾಸಿಸ್ಟ್ ಶಕ್ತಿಗಳು ಹೋರಾಡುತ್ತಿವೆ” ಎಂದು ಕಳವಳ ವ್ಯಕ್ತಪಡಿಸಿದರು.

“ನಮ್ಮ ಕಣ್ಣ ಮುಂದೆಯೇ ಗೋಡೆ ಕಟ್ಟುವ ರಾಜಕಾರಣ ನಡೆಯುತ್ತಿದೆ. ಅದನ್ನು ತಡೆಯಬೇಕು ಹಾಗೂ ಪ್ರತಿಭಟಿಸಬೇಕು. ಆ ನಿಟ್ಟಿನಲ್ಲಿ ರಾಜಕಾರಣ ಮಾಡಬೇಕು. ರಾಜಕೀಯದ ಹೊರತಾಗಿ ನಾವೇನೋ ಮಾಡುತ್ತೇವೆ ಎಂದರೆ ಸಾಧ್ಯವಿಲ್ಲ. ಸಂವಿಧಾನದ ತತ್ವ ಹಾಗೂ ಪ್ರಜಾಪ್ರಭುತ್ವದ ಆಶಯಗಳು ಆಪಾಯದಲ್ಲಿವೆ. ಅವುಗಳ ರಕ್ಷಣೆಗಾಗಿ ನಾನು ಪೊಲೀಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ಕೊಟ್ಟು ಹೊರಬಂದೆ” ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಸಮಾಜ ಸೇವಕರಾದ ಚಾರ್ಮಾಡಿ ಹಸನಬ್ಬರನ್ನು ಸನ್ಮಾನಿಸಲಾಯಿತು.

ಇದನ್ನು ಓದಿದ್ದೀರಾ? ಬೆಳಗಾವಿ | ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವರೇ ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಸ್ಲಿಂ ಬಾಂಧವ್ಯ ವೇದಿಕೆಯ ಅನೀಸ್ ಪಾಷಾ ಮಾತನಾಡಿದರು. ಈ ಸಂದರ್ಭದಲ್ಲಿ ತುಮಕೂರು ನಗರ ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹ್ಮದ್, ಸಾಮಾಜಿಕ ಹೋರಾಟಗಾರ ಮೆಹರೋಜ್ ಖಾನ್ ಇದ್ದರು.

ವೇದಿಕೆಯಲ್ಲಿ ಮುಸ್ಲಿಂ ಬಾಂಧವ್ಯ ವೇದಿಕೆಯ ಗೌರವಾಧ್ಯಕ್ಷ ಎಸ್ ಬಿ ದಾರಿಮಿ, ಕೋಟಾ ಇಬ್ರಾಹಿಂ ಸಾಹೇಬ್, ಡಾ.ಹಕೀಮ್ ತೀರ್ಥಹಳ್ಳಿ, ಸಾಹಿತಿ ಮುಷ್ತಾಕ್ ಹೆನ್ನಾಬೈಲ್ ಉಪಸ್ಥಿತರಿದ್ದರು.

ತುಮಕೂರು 18

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...