ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಗ್ರಹವಾಗಿದ್ದ ಕಂದಾಯ ಹಣವನ್ನು ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನಾದೂರು ಗ್ರಾಮ ಪಂಚಾಯತಿಯ ಪಿಡಿಒ ಲಕ್ಷ್ಮೀಬಾಯಿ ಅವರನ್ನು ಅಮಾನತು ಮಾಡಲಾಗಿದೆ.
2024-25ನೇ ಆರ್ಥಿಕ ವರ್ಷದಲ್ಲಿ ಏಪ್ರಿಲ್ನಿಂದ ಡಿಸೆಂಬರ್ ಅಂತ್ಯದವರೆಗೆ ಸಂಗ್ರಹಿಸಲಾಗಿದ್ದ ಕಂದಾಯ ಹಣದಲ್ಲಿ ಸರ್ಕಾರಕ್ಕೆ 2.97 ಲಕ್ಷ ರೂ. ಕಡಿಮೆ ಹಣವನ್ನು ಜಮಾ ಮಾಡಲಾಗಿದೆ. ಆ ಹಣವನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.
ಅಲ್ಲದೆ, ಪಂಚಾಯತಿ ವ್ಯಾಪ್ತಿಯ ಹಾಲೇನಹಳ್ಳಿ ಗ್ರಾಮದಲ್ಲಿ ಬಡಾವಣೆ ಅಭಿವೃದ್ಧಿಗೆ ಯಾವುದೇ ಪ್ರಾಧಿಕಾರದ ನಕ್ಷೆ ಅನುಮೋದನೆ ಪಡೆಯದೆಯೇ ಜಮೀನಿನ ಭೂ ಪರಿವರ್ತನೆ ಮಾಡಿದ್ದಾರೆ. ಆ ಭೂಮಿಯಲ್ಲಿ ನಿವೇಶಗಳನ್ನಾಗಿ ಮಾಡಿ, ಖಾತೆ ಮಾಡಿಕೊಟ್ಟಿದ್ದಾರೆ ಎಂದು ಆರೋಪವೂ ಕೇಳಿಬಂದಿದೆ.
ಈ ವರದಿ ಓದಿದ್ದೀರಾ?: ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ – ಉನ್ನತ ಶಿಕ್ಷಣದ ಅಧೋಗತಿ
ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳ ನಿರ್ಣಯಗಳನ್ನು ನಡವಳಿಯಲ್ಲಿ ನಮೂದಿಸದೆ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಎಲ್ಲ ಆರೋಪಗಳ ಕಾರಣಗಳಿಂದಾಗಿ ಪಿಡಿಒ ಲಕ್ಷ್ಮೀಬಾಯಿ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ ಪ್ರಭು ಆದೇಶಿಸಿದ್ದಾರೆ. ತನಿಖೆಗೆ ಸೂಚಿಸಿದ್ದಾರೆ.




