ತುಮಕೂರು | ಎತ್ತಿನಹೊಳೆಗೆ ಕೃಷ್ಣ, ಪರಮಶಿವಯ್ಯ ಅವರ ಹೆಸರಿಡಿ : ಮಾಜಿ ಸಂಸದ ಜಿ. ಎಸ್. ಬಸವರಾಜು

Date:

ಪಶ್ಚಿಮಾಭಿಮುಖವಾಗಿ ಹರಿಯುವ ನದಿ ನೀರನ್ನು, ಬಯಲು ಪ್ರದೇಶಗಳಿಗೆ ಹರಿಸಬಹುದು ಎಂದು ಮೊಟ್ಟ ಮೊದಲು ಪರಿಚಯಿಸಿದ್ದು ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ಮತ್ತು ಈ ಯೋಜನೆಗೆ ಚಾಲನೆ ನೀಡಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರವರು. ಹಾಗಾಗಿ ಈ ಯೋಜನೆಗೆ ಜಿ.ಎಸ್. ಪರಮಶಿವಯ್ಯ ಹಾಗೂ ಎಸ್.ಎಂ. ಕೃಷ್ಣ ರವರ ಹೆಸರಿಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಂಸದ ಜಿ.ಎಸ್. ಬಸವರಾಜು ಒತ್ತಾಯಿಸಿದರು.

ಆಗಿನ ಜಲಸಂಪನ್ಮೂಲ ಸಚಿವರಾಗಿದ್ದ ಹೆಚ್.ಕೆ.ಪಾಟೀಲ್ ರವರ ಹೆಸರನ್ನು ಸಹ ಈ ಯೋಜನೆಗೆ ಇಡಬೇಕು. ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

1971 ರಲ್ಲಿ ರಾಷ್ಟ್ರಪತಿ ಆಡಳಿತವಿದ್ದಾಗ ಧರ್ಮವೀರ ರವರು ರಾಜ್ಯಪಾಲರಾಗಿದ್ದರು. ಅವರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವರ್ಧನ್ ರವರು ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ನವರನ್ನು ಬೆಂಗಳೂರು ಸರ್ಕಲ್‌ಗೆ ವರ್ಗಾವಣೆ ಮಾಡಿದ್ದರು. ಆಗ ಅವರು ಇನ್ನವೆಸ್ಟಿಗೇಷನ್ ಸರ್ಕಲ್‌ಗೆ ವರ್ಗಾವಣೆ ಮಾಡಿಸಿಕೊಂಡು ಅರಣ್ಯ ಸುತ್ತಿ ಸಿದ್ಧಪಡಿಸಿದ ಸುಮಾರು 53 ವರ್ಷಗಳ ಕನಸು ಇದಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಬಂದ ಅನೇಕ ಚುನಾಯಿತ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಹ ಯೋಜನೆಯ ಯಶಸ್ಸಿಗೆ ನಿರಂತರವಾಗಿ ಶ್ರಮಿಸಿದ್ದಾರೆ. ಅವರನ್ನೆಲ್ಲಾ ಗೌರವಿಸುವ ಕೆಲಸ ಬಹಳ ಉತ್ತಮವಾಗಿದೆ ಎಂದು ಅವರು ಹೇಳಿದರು.

ಪರಮಶಿವಯ್ಯನವರು 140 ಟಿಎಂಸಿ ನೀರಿನ ಯೋಜನೆ ತರಲು ಒತ್ತಾಯಿಸುತ್ತಿದ್ದರು. ಸರ್ಕಾರ ಪ್ರಾಯೋಗಿಕವಾಗಿ 24 ಟಿ.ಎಂ.ಸಿ ಅಡಿ ನೀರಿನ ಎತ್ತಿನಹೊಳೆ ಯೋಜನೆ ರೂಪಿಸಿದಾಗ, ಅವರು ಪ್ರಬಲವಾಗಿ ವಿರೋಧಿಸಿದ್ದರು. ಪೈಪ್ ಬದಲಾಗಿ ಕಾಲುವೆಯನ್ನು ಮಾಡಿಸಲು ಹರಸಾಹಸ ಮಾಡಲಾಯಿತು ಎಂದು ವಿವರಿಸಿದರು.

ಕೆಲವು ಬದಲಾವಣೆ ಮತ್ತು ಅನಗತ್ಯ ಎನಿಸಿದರೂ ಕಾಲುವೆ ನಿರ್ಮಾಣ ಬಹಳ ಪ್ರಮುಖವಾಗಿದೆ. ನಾವು 10000 ಕ್ಯೂಸೆಕ್ಸ್ ಸಾಮರ್ಥ್ಯದ ಕರ್ನಾಟಕ ವಾಟರ್ ಗ್ರಿಡ್ ಕೆನಾಲ್ ರೂಪಿಸಲು ಶ್ರಮಿದ್ದೆವು. ಕೊನೆಗೂ ಪೈಪ್ ಬದಲಾಗಿ ಹಾಸನ ಜಿಲ್ಲೆಯ ಹರವನಹಳ್ಳಿಯಿಂದ ತುಮಕೂರು ಜಿಲ್ಲೆಯ ಬೈರಗೊಂಡ್ಲುವಿನವರೆಗೆ ಸುಮಾರು 260 ಕಿ.ಮೀ. ದೂರದ ಕಾಲುವೆಗೆ, ಸುಮಾರು 3300 ಕ್ಯೂಸೆಕ್ಸ್ ಒಂದೇ ಸಾಮರ್ಥ್ಯದ ಕಾಲುವೆ ನಿರ್ಮಾಣ ಮಾಡಿರುವುದು ವಿಶೇಷ. ಈ ಕಾಲುವೆಗೆ ಜಿ.ಎಸ್.ಪರಮಶಿವಯ್ಯ ಹೆಸರಿಡಲೇಬೇಕು. ಇದು ಅವರ ಪರಿಕಲ್ಪನೆಯ ಕೂಸಾಗಿದೆ ಎಂದರು.

ಈ ಕಾಲುವೆ ಫ್ರಿಬೋರ್ಡ್ ಸೇರಿದಂತೆ ಒಂದು ವರ್ಷದ 365 ದಿವಸವೂ ನೀರು ಹರಿಸಿದರೆ, ಸುಮಾರು 140 ಟಿ.ಎಂ.ಸಿ ಅಡಿ ನೀರನ್ನು ಹರಿಸಬಹುದಾಗಿದೆ. ಸುಮಾರು 2000 ರಿಂದ 2500 ಟಿ.ಎಂ.ಸಿ. ನೀರು ಸಮುದ್ರ ಸೇರಲಿದೆ. ಇದರಲ್ಲಿ ಈ ಕಾಲುವೆ ಮೂಲಕ 140 ಟಿ.ಎಂ.ಸಿ. ನೀರನ್ನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವುದು ಸ್ವಾಗತಾರ್ಹ. ಈ ನಿಟ್ಟಿನಲ್ಲಿ ಚಿಂತನೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆದೇಶದ ಮೇರೆಗೆ ರಾಜ್ಯಾದ್ಯಂತ ಊರಿಗೊಂದು ಕೆರೆ- ಆ ಕೆರೆಗೆ ನದಿ ನೀರು ಯೋಜನೆಯ ಸಮೀಕ್ಷೆ ಶೀಘ್ರವಾಗಿ ಪೂರ್ಣಗೊಳ್ಳಬೇಕಿದೆ. ಇದರಿಂದ ಪರಮಶಿವಯ್ಯನವರ ಅತ್ಮಕ್ಕೆ ಶಾಂತಿ ಸಿಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕುಂದರನಹಳ್ಳಿ ರಮೇಶ್, ಶಿವರುದ್ರಪ್ಪ, ರಕ್ಷಿತ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...