ತುಮಕೂರು | ನ. 22 ರಿಂದ ಮನ-ಮನೆಗೂ ಸಂವಿಧಾನ ಜಾಥಾ ಕಾರ್ಯಕ್ರಮ : ಕೆ.ದೊರೈರಾಜ್

Date:

ಪ್ರಗತಿಪರ ಸಂಘಟನೆಗಳ ಒಕ್ಕೂಟ, ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಂವಿಧಾನ ಸ್ನೇಹಿ ಬಳಗ ಬೆಂಗಳೂರು ಜಂಟಿಯಾಗಿ ನವೆಂಬರ್ 22 ರಿಂದ 26ರವರೆಗೆ ಮನ-ಮನೆಗೂ ಸಂವಿಧಾನ ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಹಿರಿಯ ಹೋರಾಟಗಾರ ಕೆ.ದೊರೈರಾಜ್ ತಿಳಿಸಿದರು

ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಸಂವಿಧಾನ ಜಾರಿಯಾಗಿ 76ವರ್ಷ ಕಳೆದಿದ್ದು ಹಲವಾರು ಸಾಮಾಜಿಕ ಪರಿವರ್ತನೆಗೊಳ್ಳಲು ಕಾರಣವಾಗಿದೆಯಾದರು ಪೂರ್ಣ ಮಟ್ಟದಲ್ಲಿ ಸಮಾಜ ಬದಲಾವಣೆ ಕಂಡಿಲ್ಲ, ಇತ್ತೀಚಿನ ದಿನಗಳಲ್ಲಿ ಸಂವಿಧಾನ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ಓದಿಸುತ್ತಿದ್ದರೂ ಅದರ ಸಂಪೂರ್ಣ ಆಶಯಗಳನ್ನು ನಾಗರೀಕರು ತಿಳಿದುಕೊಳ್ಳುವಲ್ಲಿ ವಿಫಲರಾಗಿದ್ದು,  ಇದರ ಭಾಗವಾಗಿ ಸಾರ್ವಜನಿಕರು, ವಿದ್ಯಾರ್ಥಿ ಯುವಜನರು, ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನ- ಮನೆಗೂ ಸಂವಿಧಾನದ ಮೌಲ್ಯಗಳನ್ನು ತಿಳಿಸುವ ಈ ಜಾಥ ವಿನೂತನವಾಗಿದೆ ಎಂದು ತಿಳಿಸಿದರು

 ನವೆಂಬರ್ 26, 1949 ರಂದು ಭಾರತದ ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿತು, ಇದನ್ನು ಸಂವಿಧಾನ ದಿನ ಎಂದು ಆಚರಿಸಲಾಗುತ್ತದೆ. ನಮ್ಮ ಸಂವಿಧಾನ ಅಂಗೀಕರಿಸಿ 76 ವರ್ಷಗಳ ಸಂಭ್ರಮದಲ್ಲಿದ್ದೇವೆ, ಸಂವಿಧಾನದ ಆಶ್ರಯದಲ್ಲಿ ನಮ್ಮ ದೇಶ ಬಹಳಷ್ಟು ಪ್ರಗತಿ ಕಂಡಿದೆ 1947ಕ್ಕೆ ಹೋಲಿಸಿದರೆ ಶಿಕ್ಷಣ ಪಡೆದವರ ಸಂಖ್ಯೆ ಹೆಚ್ಚಾಗಿದೆ, ಸಮಾಜದಲ್ಲಿ ಮಹಿಳೆಯರ ಸ್ಥಾನಮಾನ ಮತ್ತು ಅವಕಾಶಗಳು ಹೆಚ್ಚಾಗಿದೆ, ಜಾತಿಯ ಹಿಡಿತ ಸ್ವಲ್ಪ ಕಡಿಮೆಯಾಗಿದೆ, ಸಾರ್ವಜನಿಕ ಶಿಕ್ಷಣ ಹಾಗೂ ಆರೋಗ್ಯ ವ್ಯವಸ್ಥೆ ಮುಂಚೆಗಿಂತ ವಿಸ್ತೃತಗೊಂಡಿದೆ. ಆದರೆ ನಾವು ಇನ್ನು ಸಹ ಸಮ ಸಮಾಜ ನಿರ್ಮಿಸಲು ಸಾಧ್ಯವಾಗಿಲ್ಲ, ಎಲ್ಲರಿಗೂ ಘನತೆಯ ಬದುಕನ್ನು ಖಾತ್ರಿಪಡಿಸಲು, ಅಸ್ಪೃಶ್ಯತೆ ತೊಲಗಿಸಲು ಸಾಧ್ಯವಾಗಿಲ್ಲ, ಅಸಮಾನತೆ ಹೆಚ್ಚುತ್ತಿದೆ, ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ದಾಳಿಗಳು ಹೆಚ್ಚಾಗಿವೆ, ಸಾರ್ವಜನಿಕ ಶಿಕ್ಷಣ ಹಾಗೂ ಆರೋಗ್ಯ ವ್ಯವಸ್ಥೆಯ ಗುಣಮಟ್ಟ ಹೆಚ್ಚು ಮಾಡುವ ಬದಲು ಸರ್ಕಾರಗಳು ಅದನ್ನು ಖಾಸಗೀಕರಿಸುತ್ತಿದ್ದಾರೆ, ಸಂವಿಧಾನದ ಆಶಯಗಳಾದ ಸ್ಥಾನಮಾನದ ಸಮಾನತೆಯ ಹಾಗೂ ಅವಕಾಶಗಳ ಸಮಾನತೆ, ಘನತೆ, ಸಾಮಾಜಿಕ ನ್ಯಾಯ ಹಾಗೂ ಸ್ವಾತಂತ್ರ್ಯ ಮರಿಚಿಕೆಯಾಗಿ ಉಳಿಯುವುದೇ ಎಂಬ ಆತಂಕವಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂವಿಧಾನ ಸ್ನೇಹಿ ಬಳಗದ ಪೂರ್ಣ ರವಿಶಂಕರ್ ಮತ್ತು ಅಶ್ವಿನಿ ಬೋಧ್ ಮಾತನಾಡಿ ಸಂವಿಧಾನದ ಪೀಠಿಕೆಯ ಭರವಸೆಗಳನ್ನು ಈಡೇರಿಸಬೇಕೆಂದರೆ ನಮ್ಮ ಸಂವಿಧಾನದ ಮೌಲ್ಯಗಳು ಪ್ರತಿ ಮನೆಯಲ್ಲೂ ಮನಸ್ಸಿನಲ್ಲೂ ಬೇರೂರಬೇಕು. ಶೋಷಿತರು ದಮನಿತರು ತಮ್ಮ ಹಕ್ಕಿನ ಬಗ್ಗೆ ತಿಳಿಯಬೇಕು. ಪ್ರತಿರೋಧದ ಹಕ್ಕು ಉಳಿಯಬೇಕು ಈ ನಿಟ್ಟಿನಲ್ಲಿ ಸಂವಿಧಾನದ ಮೌಲ್ಯಗಳನ್ನು ಪ್ರತಿ ಬೀದಿ, ಮನೆ ಹಾಗೂ ಮನಸ್ಸಿಗೆ ತಲುಪಿಸಲು ಪ್ರಗತಿಪರ ಸಂಘಟನೆಗಳ ಒಕ್ಕೂಟ-ತುಮಕೂರು, ಸ್ಲಂ ಜನಾಂದೋಲನ ಕರ್ನಾಟಕ ಹಾಗೂ ಸಂವಿಧಾನ ಸ್ನೇಹಿ ಬಳಗ ಬೆಂಗಳೂರು ಜಂಟಿಯಾಗಿ 5 ದಿವಸಗಳ ಸಂವಿಧಾನ ಜಾಥಾವನ್ನು ತುಮಕೂರಿನಲ್ಲಿ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು

 ಮನ-ಮನೆಗೂ ಸಂವಿಧಾನ ಕಾರ್ಯಕ್ರಮವು ನವೆಂಬರ್ 22 ರಂದು ಸಾಮಾಜಿಕ ನ್ಯಾಯಕ್ಕಾಗಿ ಪ್ರತಿಧ್ವನಿಸುವ ವಿವಿಧ ಕ್ಷೇತ್ರದ ಗಣ್ಯರಿಂದ ನಗರದ ಬಾಪೂಜಿ ವಿದ್ಯಾಸಂಸ್ಥೆಯ ಕಲಾಕಾಲೇಜಿನಲ್ಲಿ ಉದ್ಘಾಟನೆ ಮೂಲಕ ಚಾಲನೆಗೊಂಡು 26ಕ್ಕೇ ಸಮಾರೋಪಗೊಳ್ಳಲಿದೆ, ನವೆಂಬರ್ 23 ರಂದು ನಗರದ ವಿವಿಧ ಸ್ಲಂಗಳಲ್ಲಿ ಹಾಗೂ ಸಂಜೆ 5. ಗಂಟೆಗೆ ಅಮಾನಿಕೆರೆ ನೂತನ ಸಂವಿಧಾನ ಪೀಠಿಕೆ ಮುಂದೆ ಸಾರ್ವಜನಿಕರೊಂದಿಗೆ ಸಂವಿಧಾನ ಕುರಿತು ಕಾರ್ಯರಕ್ರಮ ನಡೆಯಲಿದೆ. ನವೆಂಬರ್ 24 ಮತ್ತು 25 ರಂದು ತುಮಕೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ವಿದ್ಯಾರ್ಥಿಗಳೊಂದಿಗೆ ಹಾಗೂ ಗ್ಲೋಬಲ್ ಶಾಹೀನ್ ಮಹಿಳಾ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮಗಳು ನಡೆಯಲಿದೆ, ನವೆಂಬರ್ 26 ರಂದು ತುಮಕೂರು ನಗರದ ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ ಕರ್ನಾಟಕದ ಹಲವು ಭಾಷೆಗಳಲ್ಲಿ ಸಂವಿಧಾನ ಪೀಠಿಕೆಯ ವಿಡಿಯೋ ಬಿಡುಗಡೆ ಹಾಗೂ ಜಂಗಮ ಕಲೆಕ್ಟೀವ್ ಪ್ರಸ್ತುತ ಪಡಿಸುವ ‘ಬಾಬ್ ಮಾರ್ಲೆ ಫ್ರಮ್ ಕೋಡಿಹಳ್ಳಿ’ ರವರ ನಾಟಕ ಪ್ರದರ್ಶನ ನಡೆಯಲಿದೆ ಎಂದು ಮಾಹಿತಿನೀಡಿದರು 

ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಎನ್.ಕೆ ಸುಬ್ರಮಣ್ಯ ಮತ್ತು ಎ.ನರಸಿಂಹಮೂರ್ತಿ ಮಾತನಾಡಿ ಸಂವಿಧಾನದ ಆತ್ಮ-ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಂಧುತ್ವ-ಇವುಗಳನ್ನು ಜನಸಾಮಾನ್ಯರಿಗೆ ತಲುಪಿಸುವುದೇ ಕಾರ್ಯಕ್ರಮದ ಉದ್ದೇಶವಾಗಿದೆ. ಈ ಕಾರ್ಯಕ್ರಮಗಳನ್ನು ಮಾಧ್ಯಮ ಸ್ನೇಹಿತರು ತಮ್ಮ ಸುದ್ದಿಗಳಲ್ಲಿ ಬಿತ್ತರಿಸುವ ಮೂಲಕ ಸಂವಿಧಾನದ ಮೌಲ್ಯಗಳನ್ನು ಎಲ್ಲೆಡೆ ಕೊಂಡೊಯ್ಯಲು ಸಹಕರಿಸಬೇಕೆಂದು ಮನವಿ ಮಾಡುತ್ತೇವೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಸಾವಿತ್ರಿ ಬಾಯಿಪುಲೆ ಸಂಘಟನೆಯ ಅನುಪಮಾ ತುಮಕೂರು ಸ್ಲಂ ಸಮಿತಿಯ ಶಂಕ್ರಯ್ಯ, ಅರುಣ್. ತಿರುಮಲಯ್ಯ, ಕೃಷ್ಣಮೂರ್ತಿ, ರಾಜು, ಎಪಿಸಿಆರ್ ಸಂಯೋಜಕರಾದ ತಾಜುದ್ದೀನ್. ಮಾದಿಗ ಪ್ರಚಾರ ಸಮಿತಿಯ ಮನೋಜ್ ಕುಮಾರ್ ಮುಂತಾದವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...