ತುಮಕೂರು | ಹಸುಗೂಸು, ಬಾಣಂತಿಯರನ್ನು ಮನೆಗೆ ಸೇರಿಸಿದ ನ್ಯಾಯಾಧೀಶೆ

Date:

ಗೊಲ್ಲರ ಹಟ್ಟಿಗಳಲ್ಲಿ ಬಾಣಂತಿ ಹಾಗೂ ಹಸುಗೂಸನ್ನು ಊರ ಹೊರಗಿನ ಗುಡಿಸಿಲಿನಲ್ಲಿರಿಸಿ, ಶಿಶು ಸಾವನ್ನಪ್ಪಿದ್ದ ಘಟನೆಯ ಬಳಿಕವೂ, ಮೌಢ್ಯಾಚರಣೆ ಮುಂದುವರೆದಿದೆ. ಇಂದಿಗೂ ತಮಕೂರು ಜಿಲ್ಲೆಯಲ್ಲಿ ಗೊಲ್ಲ ಸಮುದಾಯವು ಬಾಣಂತಿ ಮತ್ತು ಶಿಶುಗಳನ್ನು ಊರ ಹೊರಗಿನ ಗುಡಿಸಲಿನಲ್ಲಿ ಇರಿಸಲಾಗುತ್ತಿದೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ತುಮಕೂರು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶೆ, ಗೊಲ್ಲರಹಟ್ಟಿಗಳಿಗೆ ಪದೇ-ಪದೇ ಭೇಟಿ ನೀಡಿ, ಅಲ್ಲಿನ ಜನರನ್ನು ಅರಿವು ಮೂಡಿಸುತ್ತಿದ್ದಾರೆ. ಬಾಣಂತಿಯನ್ನು ಮನೆಗೆ ಸೇರಿಸುತ್ತಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಗೌರಿಪುರ, ಬಿದರೆ, ನಲ್ಲೂರು ಭಾಗದ ಗೊಲ್ಲರಹಟ್ಟಿಗಳಿಗೆ ನ್ಯಾಯಾಧೀಶರ ನೇತೃತ್ವದ ತಂಡ ಭೇಟಿ ನೀಡಿದ್ದು, ಗೌರಿಪುರದಲ್ಲಿ ಊರ ಹೊರಗಿನ ಗುಡಿಸಲಿನಲ್ಲಿದ್ದ ಒಂದು ತಿಂಗಳ ಹಾಗೂ ಒಂದೂವರೆ ತಿಂಗಳ ಹಸುಗೂಸು ಹಾಗೂ ಬಾಣಂತಿಯರನ್ನು ಮನೆಗೆ ಕಳುಹಿಸಿದ್ದಾರೆ. ನಲ್ಲೂರು ಹಟ್ಟಿಯಲ್ಲಿ ಒಂದು ತಿಂಗಳ ಹಾಗೂ ಒಂದೂವರೆ ತಿಂಗಳ ಇಬ್ಬರು ಬಾಣಂತಿಯರ ಪೋಷಕರ ಮನವೊಲಿಸಿ ಆರೋಗ್ಯ ತಪಾಸಣೆ ನಡೆಸಿ ಮನೆಗೆ ಕಳುಹಿಸಿದ್ದಾರೆ.

“ಆಧುನಿಕ ಕಾಲದಲ್ಲಿಯೂ ಜನರು ಮೂಢನಂಬಿಕೆಯನ್ನು ಪಾಲಿಸುತ್ತಿರುವುದು ದುರದೃಷ್ಟಕರ. ಬಾಣಂತಿ, ಮಕ್ಕಳಿಗೆ ಉತ್ತಮ ಆರೈಕೆಯ ಅಗತ್ಯವಿದೆ. ಯಾವುದೇ ಕಾರಣಕ್ಕೂ ಅವರನ್ನು ಊರ ಹೊರಗೆ ಬಿಡಬಾರದು. ಅಂತಹ ಯಾವುದೇ ಪ್ರಕರಣ ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ತಾಲೂಕಿನ ಯಾವುದೇ ಭಾಗದಲ್ಲಿ ಇಂತಹ ಪ್ರಕರಣ ಕಂಡುಬಂದಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ ಮಾಹಿತಿ ನೀಡಬೇಕು” ಎಂದು ನ್ಯಾಯಾಧೀಶೆ ಉಂಡಿ ಮಂಜುಳ ಶಿವಪ್ಪ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗೊಲ್ಲರಹಟ್ಟಿಯ ವಿದ್ಯಾವಂತರೂ ಮೂಢನಂಬಿಕೆಗೆ ಬಲಿಯಾಗಿರುವುದು ವಿಪರ್ಯಾಸ. ಇಂತಹ ಪದ್ಧತಿಗಳನ್ನು ತ್ಯಜಿಸಿ ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು. ಸಂಪ್ರದಾಯವನ್ನು ಆಚರಿಸಿ, ಆದರೆ ಮೂಢನಂಬಿಕೆಗೆ ಒಳಗಾಗಿ ಹಸುಗೂಸುಗಳನ್ನು ಬಲಿ ಕೊಡಬೇಡಿ” ಎಂದು ತಹಶೀಲ್ದಾರ್ ಬಿ ಆರತಿ ಜಾಗೃತಿ ಮೂಡಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ನ್ಯಾ. ಉಂಡಿ ಮಂಜುಳಾ ಶಿವಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ; ಬಾಣಂತಿ ಬಿಡುವ ಗುಡಿಸಲು ನಾಶ

“ಹೆರಿಗೆಯ ನಂತರ ಮಗು, ಬಾಣಂತಿಗೆ ಹೆಚ್ಚಿನ ಆರೈಕೆಯ ಅಗತ್ಯವಿದೆ. ಚಳಿ, ಮಳೆಗೆ ಲೆಕ್ಕಿಸದೆ ಗುಡಿಸಲಿನಲ್ಲಿ ಬಿಡುವುದು ತರವಲ್ಲ. ಇದು ಅಮಾನವೀಯ ಕೃತ್ಯ. ಸ್ಥಳೀಯರು ಜಾಗೃತಿಗೊಂಡು ಮಗು ಮತ್ತು ಬಾಣಂತಿಗೆ ಉತ್ತಮ ಆರೈಕೆ ಮಾಡುವುದರ ಜತೆಗೆ ಆಗಾಗ ಆರೋಗ್ಯ ತಪಾಸಣೆ ಮಾಡಿಸುತ್ತಿರಬೇಕು” ಎಂದು ತಾಲೂಕು ಆರೋಗ್ಯಾಧಿಕಾರಿ ಡಾ ಬಿಂದು ಮಾಧವ್ ಸಲಹೆ ನೀಡಿದರು.

ಈ ವೇಳೆ ತಾಲೂಕು ಪಂಚಾಯಿತಿ ಇಒ ಪರಮೇಶ್ ಕುಮಾರ್, ದೇವಿಕಾರಾಣಿ, ನಾಗರಾಜು, ಪವಿತ್ರ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...