ತುಮಕೂರು | ಬುದ್ಧರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡಾಗ ನಮ್ಮ ಜೀವನ ಸಾರ್ಥಕ : ಗೃಹ ಸಚಿವ ಡಾ. ಜಿ. ಪರಮೇಶ್ವರ್

Date:

 ಭಗವಾನ್ ಬುದ್ಧರ ತತ್ವ ಸಿದ್ಧಾಂತಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಜೀವನವು ಸಾರ್ಥಕವಾಗುತ್ತದೆ ಎಂದು ರಾಜ್ಯದ ಗೃಹ ಸಚಿವ ಹಾಗೂ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಜಿ ಪರಮೇಶ್ವರ್ ತಿಳಿಸಿದರು. 

ತುಮಕೂರು ನಗರದ ಹೊರವಲಯದಲ್ಲಿರುವ ಸಿದ್ಧಾರ್ಥ ನಗರದಲ್ಲಿ ಶ್ರಿ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯವತಿಯಿAದ ಆಯೋಜಿಸಿದ್ಧಂತಹ ಬುದ್ಧ ಪೌರ್ಣಮಿಯ ಕಾರ್ಯಕ್ರಮದಲ್ಲಿ ಬುದ್ಧನ ವಿಗ್ರಹಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಮಾತನಾಡಿದ ಅವರು,  ಭಗವಾನ್ ಬುದ್ಧರು ಮನುಷ್ಯ ಕುಲಕ್ಕೆ ನೀಡಿದ ವಿಚಾರಗಳು, ತತ್ವ ಸಿದ್ಧಾಂತಗಳು ಸಾವಿರಾರು ವರ್ಷಗಳು ಕಳೆದರೂ ಇನ್ನೂ ಜೀವಂತವಾಗಿದೆ ಹಾಗೂ ಮುಂದೆಯೂ ಇರುತ್ತದೆ ಎಂದರೆ ಅವರ ವಿಚಾರಗಳು ಎಷ್ಟು ಮಹತ್ವದ್ದು ಎಂದು ಯೋಚಿಸಬೇಕು. ಮನುಷ್ಯ ಪ್ರತಿನಿತ್ಯ ಅನುಭವಿಸುವ ದುಃಖ ದುಮ್ಮಾನಗಳಿಗೆ, ಕಷ್ಟಗಳಿಗೆ ಮುಕ್ತಿದೊರೆಯುವ ಮಾರ್ಗವನ್ನು ಮಾನವ ಕುಲಕ್ಕೆ ತೋರಿಸಿಕೊಟ್ಟವರು ಭಗವಾನ್ ಬುದ್ಧರು. ಭಗವಾನ್ ಬುದ್ಧ ಹಾಗೂ ಅವರ ವಿಚಾರಗಳು ಯಾವಕಾಲಕ್ಕೂ ಪ್ರಸ್ತುತವೆನಿಸುತ್ತದೆ. ಇಂತಹ ವಿಚಾರಗಳನ್ನು ತತ್ವ ಸಿದ್ಧಾಂತಗಳನ್ನು ಸಾಕಷ್ಟು ರಾಷ್ಟçಗಳು ಅಳವಡಿಸಿಕೊಂಡು ಮುಂದುವರೆಯುತ್ತಿದೆ ಎಂದು ಹೇಳಿದರು

.ಸಿಬಿಐ ನ್ಯಾಯಲಯದ ನ್ಯಾಯಾಧೀಶರಾದ ಎಚ್ ಎ ಮೋಹನ್ ಮಾತನಾಡಿ ಮಾನವ ಕುಲಕ್ಕೆ ಶಾಂತಿಯನ್ನು ಭೋದಿಸಿದ ಮಾನವನ ಕಷ್ಟ ದುಃಖಗಳಿಗೆ ಸೂಕ್ತ ಮಾರ್ಗವನ್ನು ಸೂಚಿಸಿದವರು ಮಹಾನ್ ಚೇತನ ಗೌತಮ ಬುದ್ಧ. ಇವರ ತತ್ವಗಳನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಹೇ ವಿವಿಯ ಉಪಕುಲಪತಿಗಳಾದ ಡಾ. ಕೆ.ಬಿ. ಲಿಂಗೇಗೌಡ ಮಾತನಾಡಿ ಭಗವಾನ್ ಬುದ್ಧರ ತತ್ವ ಸಿದ್ಧಾಂತಗಳನ್ನು ಅಂಬೇಡ್ಕರ್ ಅವರ ವಿಚಾರಗಳನ್ನು ಮೈಗೂಡಿಸಿಕೊಂಡಿದ್ದವರು ಡಾ.ಎಚ್.ಎಂ. ಗಂಗಾಧರಯ್ಯನವರು, ಹಾಗಾಗಿಯೇ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಸಾಕಷ್ಟು ಬಡ ವಿದ್ಯಾರ್ಥಿಗಳಿಗೆ ವಿದ್ಯಾದಾನವನ್ನು ಮಾಡಿದ್ದಾರೆ. ಇವರ ಹಾದಿಯಲ್ಲೇ ಡಾ. ಜಿ ಪರಮೇಶ್ವರ ರವರೂ ಕೂಡ ನಡೆಯುತ್ತಿದ್ದಾರೆ. ಈ ಸಂಸ್ಥೆ ಇನ್ನು ಎತ್ತರಕ್ಕೆ ಬೆಳೆಯಲಿ ಇದಕ್ಕೆ ನಮ್ಮೆಲ್ಲರ ಬೆಂಬಲ ಇದೆ ಎಂದು ಆಶಯ ವ್ಯಕ್ತಪಡಿಸಿದರು. 

ಇನ್ನು ಈ ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ನಂಜುಂಡಪ್ಪ, ಬೀದರ್ ಬೌದ್ಧ ವಿಹಾರದ ಭಿಕ್ಷಷು ಪೂಜ್ಯ ಬಂತೇಜಿರವರು, ಸಾಹೇ ವಿವಿಯ ಕುಲಸಚಿವರಾದ ಡಾ. ಅಶೋಕ್ ಮೆಹತ, ಪರಿಕ್ಷಾಂಗ ನಿಯಂತ್ರಕ ಡಾ. ಗುರುಶಂಕರ್, ಶ್ರೀ ಸಿದ್ಧಾರ್ಥ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಪ್ರವೀಣ್ ಕುಡುವ, ಕುಲಪತಿಗಳ ಆಪ್ತ ಸಲಹೆಗಾರರಾದ ಡಾ. ವಿವೇಕ್ ವೀರಯ್ಯ, ವೈದ್ಯಕೀಯ ಅಧೀಕ್ಷಕರಾದ ಡಾ. ವೆಂಕಟೇಶ್, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಎಸ್ ರವಿಪ್ರಕಾಶ್ ಹಾಗೂ ಸಂಸ್ಥೆಯ ವಿವಿಧ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...