ತುಮಕೂರು | ರಾಜ್ಯಕ್ಕೆ ಕೇಂದ್ರದಿಂದ ಭಾರೀ ಅನ್ಯಾಯ; ಪರಮೇಶ್ವರ್ ಆರೋಪ

Date:

ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಯನ್ನು ಹಾಳುಮಾಡುತ್ತಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಬೇಕಿದೆ ಎಂದು ಗೃಹ ಸಚಿವ ಡಾ ಜಿ.ಪರಮೇಶ್ವರ್ ಕರೆ ನೀಡಿದರು.

ತುಮಕೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, “ವಿಪಕ್ಷಗಳ ಕತ್ತು ಹಿಚುಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಅಲ್ಲದೆ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನದಲ್ಲಿದ್ದು, ಪ್ರತಿ ವರ್ಷ ₹4.50 ಲಕ್ಷ ಕೋಟಿ ಹಣವನ್ನು ಕೇಂದ್ರಕ್ಕೆ ಕಳುಹಿಸುತ್ತಿದೆ. ಆದರೆ ನಮಗೆ ನ್ಯಾಯಯುತವಾಗಿ ಬರಬೇಕಾದ ಪಾಲನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ. ನಮ್ಮ ರಾಜ್ಯ ಬಿಜೆಪಿಯ 26 ಮಂದಿ ಸಂಸದರು ಈ ಬಗ್ಗೆ ಚಕಾರ ಎತ್ತುತ್ತಿಲ್ಲ” ಎಂದು ಕಿಡಿ ಕಾರಿದರು.

“ಕರ್ನಾಟಕಕ್ಕೆ ವಿಶೇಷ ಅನುದಾನದಲ್ಲಿ ₹5,000 ಕೋಟಿ ನೀಡಬಹುದೆಂದು ಪ್ಲಾನಿಂಗ್ ಕಮಿಷನ್(ನೀತಿ ಆಯೋಗ) ವರದಿ ನೀಡಿದ್ದರೂ ಕೇಂದ್ರ ಸರ್ಕಾರ ಪರಿಗಣಿಸಿಲ್ಲ. ಬರಗಾಲದಿಂದ ₹36,000 ಕೋಟಿ ನಷ್ಟವಾಗಿದೆ. ನಾವು ₹18,000 ಕೋಟಿಗಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಈ ಕುರಿತು ಸಚಿವರು ಹಾಗೂ ಮುಖ್ಯಂಮತ್ರಿಗಳು ಪ್ರಧಾನಿ ಮತ್ತು ಗೃಹ ಸಚಿವರನ್ನು ಭೇಟಿ ಮಾಡಲು ಏಳು ಬಾರಿ ಪ್ರಯತ್ನಿಸಿದರೂ ಅವಕಾಶ ನೀಡಲಿಲ್ಲ. ಎಂಟನೇ ಬಾರಿಗೆ ಅವಕಾಶ ನೀಡಿದಾಗ ಮಾತುಕತೆ ನಡೆಸಲಾಯಿತು. ಆದರೆ ಎನ್‌ಡಿಆರ್‌ಎಫ್ ಹಣವನ್ನು ಮಾತ್ರ ಬಿಡುಗಡೆ ಮಾಡಿಲ್ಲ. ಈ ಬಗ್ಗೆ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರವನ್ನೂ ಬರೆಯಲಾಗಿದೆ. ಆದರೆ, ವಿತ್ತ ಸಚಿವರು, ʼಕರ್ನಾಟಕಕ್ಕೆ ನೀಡಬೇಕಾದ ಎಲ್ಲ ಅನುದಾನವನ್ನೂ ನೀಡಿದ್ದೇವೆʼ ಎಂದು ಹೇಳುವ ಮೂಲಕ ಅತಿದೊಡ್ಡ ಸುಳ್ಳನ್ನು ಹೇಳುತ್ತಿದ್ದಾರೆ. ಈ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದಲ್ಲಿ ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ. ನಾವು ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ, ರೈತರ ಹಿತ ರಕ್ಷಣೆಗೆ ನೂತನ ಕಾಯ್ದೆ ಜಾರಿ, ಜಿಎಸ್‌ಟಿ ಮುಕ್ತ ಕೃಷಿ ಕ್ಷೇತ್ರ, ಯುವಕರಿಗೆ ಅಪ್ರೆಂಟಿಸ್ ಟ್ರೈನಿಂಗ್ ನೀಡುವುದರ ಜತೆಗೆ ₹1ಲಕ್ಷ ನೀಡುತ್ತೇವೆ. ಹಾಗೆಯೇ ಪ್ರತಿ ಮಹಿಳೆಗೆ ವಾರ್ಷಿಕವಾಗಿ ₹1ಲಕ್ಷವನ್ನು ಖಾತೆಗೆ ನೇರ ಜಮಾಮಾಡಿಲಿದ್ದೇವೆ. ಅಲ್ಲದೆ ರಾಜ್ಯದಲ್ಲಿ ಮೇಕೆದಾಟು ಯೋಜನೆಯನ್ನು ಮಾಡಿಯೇ ತೀರುತ್ತೇವೆ” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಬರಗಾಲ ನಿರ್ವಹಣೆಗೆ ಅಧಿಕಾರಿಗಳು, ಸಿಬ್ಬಂದಿ ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿ ಸೂಚನೆ

“ಬರಗಾಲ ನಿರ್ವಹಣೆಗೆ ರಾಜ್ಯ ಸರ್ಕಾರವೇ ಹಣ ಹಾಕಿ, ಕುಡಿಯುವ ನೀರು, ಮೇವು ಒದಗಿಸುತ್ತಾ ಬಂದಿದೆ. ಇದರ ನಡುವೆ ಗ್ಯಾರಂಟಿ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಅಭಿವೃದ್ಧಿ ಕಾಮಗಾರಿಗಳನ್ನು ಸ್ಥಗಿತಗೊಳಿಸಿಲ್ಲ. ನಮ್ಮದು ಸ್ಥಿರವಾದ ಸರ್ಕಾರ. ಸಿದ್ದರಾಮಯ್ಯನವರ ನೇತೃತ್ವದಲ್ಲಿ ಬಡತನ ನಿರ್ಮೂಲನೆ, ಯುವಕರಿಗೆ ಉದ್ಯೋಗ, ರೈತರಿಗೆ ಸಹಕಾರ, ಮಹಿಳಾ ಸಬಲೀಕರಣದ ಉದ್ದೇಶವಿಟ್ಟುಕೊಂಡು ಬಜೆಟ್ ನೀಡಿದ್ದೇವೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...