ತುಮಕೂರು | ಕೇಂದ್ರ ಒಬಿಸಿ ಪಟ್ಟಿಗೆ ಕುಂಚಿಟಿಗರನ್ನು ಸೇರಿಸುವ ಶಿಫಾರಸ್ಸು ಜಾರಿಗಾಗಿ ಎಚ್‌ಡಿಡಿಗೆ ಮನವಿ

Date:

ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಕುಂಚಿಟಿಗ ಒಕ್ಕಲಿಗರನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸುವ ಸಂಬಂಧ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಬೇಕೆಂದು ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಅವರಿಗೆ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಮನವಿ ಮಾಡಿದರು.

ಇಂದು ಸಮುದಾಯದ ಮುಖಂಡರೊಂದಿಗೆ ಎಚ್.ಡಿ. ದೇವೇಗೌಡರನ್ನು ಭೇಟಿಯಾದ ಮುರಳೀಧರ ಹಾಲಪ್ಪ, “ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರ ಕಳುಹಿಸಿರುವ ಶಿಫಾರಸ್ಸನ್ನು ಜಾರಿಗೆ ತರುವ ಸಂಬಂಧ ಕೇಂದ್ರ ಸರ್ಕಾರದ ಜೊತೆ ಚರ್ಚಿಸಬೇಕು. ಮಾರ್ಚ್ 08 ರಂದು ಈಗಾಗಲೇ ಪ್ರಧಾನ ಮಂತ್ರಿಗಳ ಭೇಟಿಗೆ ಸಮಯ ನಿಗಧಿ ಪಡಿಸಿರುವ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿ, ಕುಂಚಿಟಿಗ ಒಕ್ಕಲಿಗ ಸಮುದಾಯವನ್ನು ಕೇಂದ್ರ ಒಬಿಸಿ ಜಾತಿ ಪಟ್ಟಿಗೆ ಸೇರಿಸುವಂತೆ ಮನವಿ ಮಾಡಲಾಗುವುದು” ಎಂದರು.

“ಕುಂಚಿಟಿಗ ಒಕ್ಕಲಿಗರನ್ನು ಹೊರತು ಪಡಿಸಿ, ಒಕ್ಕಲಿಗ ಸಮುದಾಯಕ್ಕೆ ಸೇರಿದ ಇತರೆ ಎಲ್ಲಾ ಉಪ ಪಂಗಡಗಳು ರಾಜ್ಯ ಮತ್ತು ಕೇಂದ್ರ ಸರ್ಕಾರದ ಒಬಿಸಿ ಜಾತಿಪಟ್ಟಿಯಲ್ಲಿವೆ.‌ ರಾಜ್ಯದಲ್ಲಿ ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ತುಮಕೂರು, ರಾಮನಗರ, ಮೈಸೂರು ಸೇರಿಂದತೆ ಸುಮಾರು 17 ಜಿಲ್ಲೆಗಳ 37 ತಾಲೂಕುಗಳಲ್ಲಿ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಕುಂಚಿಟಿಗ ಸಮುದಾಯದ ಮುಖ್ಯ ಕಸುಬು ವ್ಯವಸಾಯ ಮತ್ತು ಪಶುಸಂಗೋಪನೆ. ನೆರೆಯ ರಾಜ್ಯಗಳಾದ ಆಂಧ್ರ ಪ್ರದೇಶ, ತಮಿಳುನಾಡಿನಲ್ಲೂ ಕುಂಚಿಟಿಗ ಸಮುದಾಯದ ಜನ ಇದ್ದಾರೆ. ಉಳಿದೆಲ್ಲಾ ರಾಜ್ಯಗಳಲ್ಲಿ ಕುಂಚಿಟಿಗ ಸಮುದಾಯ ಕೇಂದ್ರ ಒಬಿಸಿ ಪಟ್ಟಿಯಲ್ಲಿದ್ದರೆ, ಕರ್ನಾಟಕದ ಕುಂಚಿಟಿಗರನ್ನು ಮಾತ್ರ ಕೇಂದ್ರ ಒಬಿಸಿ ಪಟ್ಟಿಯಿಂದ ಕೈಬಿಡಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 03 04 at 2.59.27 PM

ಈ ಅಸಮತೋಲನವನ್ನು ಸರಿಪಡಿಸುವ ನಿಟ್ಟಿನಲ್ಲಿ ಹಲವಾರು ವರ್ಷಗಳ ಹೋರಾಟ ಪ್ರಯತ್ನಗಳು ಜನಾಂಗದ ಮುಖಂಡರಿಂದಲೂ ಹಾಗೂ ಕುಲಶಾಸ್ತ್ರ ಅಧ್ಯಯನ ವರದಿ ರಾಜ್ಯ ಸರ್ಕಾರದಿಂದಲೂ ನಡೆದಿದೆ. ಕೇಂದ್ರ ಒಬಿಸಿ ಪಟ್ಟಿಯಲ್ಲಿ ಕುಂಚಿಟಿಗ ಸಮುದಾಯ ಸೇರ್ಪಡೆಗೊಂಡರೆ, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಜನಾಂಗಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಕೇಂದ್ರ ಸರ್ಕಾರದ ಎಲ್ಲಾ ಹುದ್ದೆಗಳಲ್ಲಿ ಮೀಸಲಾತಿ ದೊರೆಯಲಿದೆ. ರಾಜ್ಯ ಸರ್ಕಾರದ ಆದೇಶದ ಮೇರೆಗೆ ದೇವರಾಜ ಅರಸು ಸಂಶೋಧನಾ ಕೇಂದ್ರ ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಜಂಟಿಯಾಗಿ, ಮೈಸೂರು ವಿವಿ ಸಹಯೋಗದಲ್ಲಿ ಕುಂಚಿಟಿಗ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ನಡೆಸಿ, ಈಗಾಗಲೇ ರಾಜ್ಯ ಸರ್ಕಾರ ಕುಂಚಿಟಿಗ ಸಮುದಾಯವನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಿ ಕಳುಹಿಸಲಾಗಿದೆ.

ಇದನ್ನೂ ಓದಿ: ತುಮಕೂರು | ದ್ವಿತೀಯ ಪಿ.ಯು.ಸಿ ಪರೀಕ್ಷೆ ಪ್ರಾರಂಭ : ಪಾರದರ್ಶಕತೆ ಕಾಯ್ದುಕೊಳ್ಳಲು ವೆಬ್‌ಕಾಸ್ಟಿಂಗ್

ರಾಜ್ಯ ಸರ್ಕಾರದ ಶಿಫಾರಸ್ಸನ್ನು ಒಪ್ಪಿಕೊಂಡು ಜಾರಿಗೆ ತರುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಹಿರಿಯರು, ಮುತ್ಸದ್ದಿ ರಾಜಕಾರಣಿಯಾದ ಎಚ್.ಡಿ. ದೇವೇಗೌಡರು ಸುದೀರ್ಘ ಚರ್ಚೆ ನಡೆಸಿದ್ದು, ಮಾರ್ಚ್ 8ರ ಶನಿವಾರ ಕುಂಚಿಟಿಗ ಸಮುದಾಯದ ಮುಖಂಡರು ದೆಹಲಿಗೆ ಬರುವಂತೆ ಸಲಹೆ ನೀಡಿದ್ದಾರೆ. ಇದಕ್ಕಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೂ, ಕುಲಶಾಸ್ತ್ರೀಯ ಅಧ್ಯಯವನ್ನು ಪರಾಮರ್ಶಿಸಿ, ಕೇಂದ್ರಕ್ಕೆ ಶಿಫಾರಸ್ಸು ಮಾಡಿದ ರಾಜ್ಯ ಸರ್ಕಾರಕ್ಕೂ ಕೃತಜ್ಞತೆ ಸಲ್ಲಿಸುವುದಾಗಿ ಮುರುಳೀಧರ ಹಾಲಪ್ಪ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...