ತುಮಕೂರು | ಸರ್ಕಾರಕ್ಕೆ ಕಾಂತರಾಜ ವರದಿ ಸ್ವೀಕರಿಸುವಂತೆ ಹಂದಿಜೋಗಿ ಸಂಘದ ಒತ್ತಾಯ

Date:

ಕಾಂತರಾಜ ವರದಿಯನ್ನು ಜಾರಿಗೆ ತಂದು ಕೆಳವರ್ಗದ ಶೋಷಿತ ಜಾತಿಗಳಿಗೆ ಸರ್ಕಾರ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು ಎಂದು ಅಖಿಲ ಕರ್ನಾಟಕ ಹಂದಿಜೋಗಿ ಸಂಘದ ಪದಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಗರದ ಐಎಂಎ ಹಾಲ್‌ನಲ್ಲಿ ಅಖಿಲ ಕರ್ನಾಟಕ ಹಂದಿಜೋಗಿ ಸಂಘದ ಜಿಲ್ಲಾ ಶಾಖೆಯ ಪದಾಧಿಕಾರಿಗಳ ಆಯ್ಕೆ ಸಮಾರಂಭದಲ್ಲಿ ತುಮಕೂರು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಎಚ್.ವಿ. ರಂಗಸ್ವಾಮಿ ಮಾತನಾಡಿ, ಕಾಂತರಾಜ ವರದಿ ಜಾರಿಗೆ ಬಂದಿದ್ದರೆ ಹಿಂದುಳಿದ ಮತ್ತು ಪರಿಶಿಷ್ಟ ಜಾತಿಯಲ್ಲಿ ಸರ್ಕಾರದ ಸೌಲಭ್ಯಗಳನ್ನೂ ಪಡೆಯಲು ಸಾಧ್ಯವಾಗದ ಮೈಕ್ರೋಸ್ಕೋಪಿಕ್ ಜಾತಿಗಳಿಗೆ ತುಂಬಾ ಅನುಕೂಲವಾಗುತ್ತಿತ್ತು.

ಕೆಲ ಮೇಲ್ಜಾತಿಗಳು ಕಾಂತರಾಜ ವರದಿಯನ್ನು ವಿರೋಧಿಸುತ್ತಿದ್ದು, ಕಾಂತರಾಜು ವರದಿಯನ್ನು ಯಾರೋ ಮರದ ಕೆಳಗೆ ಕುಳಿತು ವರದಿ ತಯಾರಿ ಮಾಡಿದ್ದಾರೆ ಎಂದು ಮೇಲ್ವರ್ಗದವರು ಮಾತನಾಡುತ್ತಿರುವುದು ಶೋಷಿತ ಜಾತಿಗಳು ಅವರ ಪಲ್ಲಕ್ಕಿ ಹೊರಲಷ್ಟೇ ಸೀಮಿತವಾಗಿರಬೇಕು ಎಂಬಂತಿದೆ, ಈ ಜಾತಿಗಳು ಮುಂದುವರಿಯುವುದು ಮೇಲ್ವರ್ಗಗಳಿಗೆ ಬೇಕಿಲ್ಲ, ಹೊಟ್ಟೆತುಂಬಿದವರಿಗೆ ಹಸಿದವನ ಹಸಿವು ತಿಳಿಯುವುದಿಲ್ಲ. ಮೇಲ್ವರ್ಗದವರು ಬಲಾಢ್ಯರಾಗಿರುವುದರಿಂದ ಕಾಂತರಾಜು ವರದಿಯನ್ನು ವಿರೋಧಿಸುತ್ತಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂತರಾಜ ವರದಿಯನ್ನು ಜಾರಿಗೆ ತರುವುದಷ್ಟೇ ಅಲ್ಲ, ಆ ವರದಿಯನ್ನು ಒಪ್ಪಿಕೊಳ್ಳಬೇಕು, ವರದಿ ಇನ್ನೂ ಮಂಡನೆಯೇ ಆಗಿಲ್ಲ ಕಡತದಲ್ಲೇ ಇದೆ, ಆ ವರದಿಯಲ್ಲಿ ಯಾವಯಾವ ಜಾತಿ ಎಷ್ಟಿದೆ, ಏನು ಕುಲಕಸುಬು ಮಾಡುತ್ತಿದ್ದಾರೆ, ವಾಹನ, ಜಮೀನು, ಆರ್ಥಿಕ, ಸಾಮಾಜಿಕ ಮಟ್ಟ ಸೇರಿದಂತೆ 54 ಅಂಶಗಳನ್ನು ಅಧ್ಯಯನ ಮಾಡಿದ್ದಾರೆ ಆ ಹಿನ್ನಲೆಯಲ್ಲಿ ಕಾಂತರಾಜು ವರದಿ ಜಾರಿಗೆ ಸರ್ಕಾರಕ್ಕೆ ಹಂದಿಜೋಗಿ ಸಂಘವು ಒತ್ತಾಯಿಸಬೇಕಿದೆ ಎಂದರು.

ಪ್ರಜಾಪ್ರಭುತ್ವದಲ್ಲಿ ಸಂಖ್ಯೆಯೇ ಎಲ್ಲಾ ಸೌಲಭ್ಯ ಪಡೆಯಲು ಸಹಕಾರಿಯಾಗಿರುವುದರಿಂದ ಶೋಷಿತ ಸಣ್ಣ ಜಾತಿಗಳು ಹೊಡೆದು ಹೋಗಿರುವ ಜಾತಿಗಳಾಗಿದ್ದು, ಈ ಎಲ್ಲಾ ಜಾತಿಗಳು ಒಗ್ಗೂಡಿ ಸಂಖ್ಯೆಯನ್ನು ಹೆಚ್ಚಿಸಿಕೊಂಡು ಸರ್ಕಾರಕ್ಕೆ ನಮ್ಮ ಪಾಲು ನೀಡುವಂತೆ ಕೇಳಬೇಕು, ಒಂದಾಗದಿದ್ದರೆ ನೀರಿನಲ್ಲಿ ಮುಳುಗಿದಂತೆ, ಸರ್ಕಾರಕ್ಕೆ ನಾವು ಲಕ್ಷಇದ್ದೇವೆ, ಎರಡು ಲಕ್ಷಇದ್ದೇವೆಎಂದು ಸಣ್ಣ ಜಾತಿಗಳು ಎಷ್ಟೇ ಹೇಳಿದರೂ ಅದುಗಣನೆಗೆ ಬರುವುದಿಲ್ಲ, ಆದ್ದರಿಂದ ಸಣ್ಣ-ಪುಟ್ಟ ಜಾತಿಗಳು ಒಗ್ಗಟ್ಟಾಗಬೇಕಿದೆ ಎಂದು ಹೇಳಿದರು.

ಒಗ್ಗಟ್ಟಾಗಿ ನಮ್ಮ ಹಕ್ಕುಗಳಿಗೆ, ಸೌಲಭ್ಯಗಳಿಗೆ ಹೋರಾಟವನ್ನು ಮಾಡಬೇಕಿದೆ, ನಾವು ಒಟ್ಟಾಗಲು ಸಾಧ್ಯವಾಗುತ್ತಿಲ್ಲ, ಏಕೆಂದರೆ ಕೆಳಜಾತಿಗಳಲ್ಲಿ ಏಡಿಕಾಯಿಯಂತೆ ಹಿಂದಕ್ಕೆಳೆಯುವ ಪ್ರವೃತ್ತಿಯಿಂದ ಮತ್ತೆ ಮತ್ತೆ ಹಿಂದಕ್ಕೆ ಹೋಗುತ್ತಿದ್ದು, ಮತ್ತಷ್ಟು ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದರು.

ಮೇಲ್ಜಾತಿಯವರು ಮಠ-ಮಾನ್ಯಗಳನ್ನು ಕಟ್ಟಿಕೊಂಡು ಸಾಮಾಜಿಕವಾಗಿ, ಆರ್ಥಿಕವಾಗಿ ಮುಂದುವರೆದಿದ್ದಾರೆ, ಕೆಳ ಜಾತಿಯ ಶೋಷಿತ ಜಾತಿಗಳಿಗೆ ಇಂತಹ ಅವಕಾಶ ಇಲ್ಲದಿರುವುದರಿಂದ ಇನ್ನೂ ಮೇಲ್ವರ್ಗದವರ ಪಲ್ಲಕ್ಕಿ ಹೊರುವ ಸ್ಥಿತಿ ಇದೆ, ಆದ್ದರಿಂದ ಕಂದಾಚಾರ, ಮೂಡನಂಬಿಕೆಗಳನ್ನು ಬದಿಗೊತ್ತಿ ಹಂದಿಜೋಗಿ, ಹೆಳವ, ಕೊರಮ, ಕೊರಚ, ಬುಡಬುಡಿಕೆ, ಶಿಳ್ಳೆಕ್ಯಾತ, ಇನ್ನೂ ಮುಂತಾದ ಮೈಕ್ರೋಸ್ಕೋಪಿಕ್ ಜಾತಿಗಳು ಒಗ್ಗಾಟ್ಟಾಗಿ ತಮ್ಮ ಸೌಲಭ್ಯಗಳಿಗಾಗಿ ಹೋರಾಟ ನಡೆಸುವ ಅನಿವಾರ್ಯ ಈಗ ಬಂದಿದೆ ಎಂದು ಹೇಳಿದರು.

ಹಂದಿಜೋಗಿ ಜನಾಂಗದ ಅವಕಾಶಗಳನ್ನು ಇತರೆ ಜಾತಿಗಳು ಪಡೆದುಕೊಳ್ಳುತ್ತಿರುವ ಬಗ್ಗೆ ಸರ್ಕಾರಕ್ಕೆ ಮನದಟ್ಟು ಮಾಡಿತಪ್ಪಿಸಬೇಕಾಗಿದೆ. ಹಂದಿಜೋಗಿ ಜನಾಂಗದ ಜಾತಿ ಪ್ರಮಾಣಪತ್ರ ಮತ್ತು ಸವಲತ್ತುಗಳನ್ನು ಹೆಳವ, ಹಂಡಿಜೋಗಿ ಎಂಬುವವರು ಪಡೆದು ನಿಜವಾದ ಹಂದಿಜೋಗಿ ಜನಾಂಗಕ್ಕೆ ಸೌಲಭ್ಯಗಳು ಸಿಗದಂತಾಗಿವೆ, ಮೇಲ್ಜಾತಿಯವರು ಪಡೆದಿದ್ದರೆ ಅದನ್ನು ಪ್ರಬಲವಾಗಿ ವಿರೋಧಿಸಬಹುದಿತ್ತು, ಆದರೆ ಹಂದಿಜೋಗಿ ಜಾತಿಯಂತೆಯೇ ಶೋಷಣೆಗೆ ಒಳಪಟ್ಟಿರುವ ಈ ಜಾತಿಗಳು ಅನುಕೂಲ ಪಡೆಯುತ್ತಿರುವುದನ್ನು ತಡೆಯಲು ಕಾಂತರಾಜು ವರದಿ ಪರಿಣಾಮಕಾರಿಯಾಗಲಿದೆ ಎಂದು ಹೇಳಿದರು.

ಸಭೆಯಲ್ಲಿಅಲೆಮಾರಿ-ಅರೆಅಲೆಮಾರಿ ಸಂಘದರಾಜ್ಯಾಧ್ಯಕ್ಷ ಎಂ.ವಿ.ವೆಂಕಟರಮಣಯ್ಯ, ಅಗರೆಗೋವಿಂದರಾಜು ಮಾತನಾಡಿದರು. ಇದೇ ಸಂದರ್ಭದಲ್ಲಿತುಮಕೂರುಜಿಲ್ಲೆಗೆ ಹಂದಿಜೋಗಿ ಸಂಘಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಅಖಿಲ ಕರ್ನಾಟಕ ಹಂದಿಜೋಗಿ ಸಂಘದ ರಾಜ್ಯಾಧ್ಯಕ್ಷ  ರಾಜೇಂದ್ರಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಡ್ಯರಾಜು, ಉಪಾಧ್ಯಕ್ಷರುಗಳಾದ ಪಿಳ್ಳಣ್ಣ, ಸಿ.ಗೋವಿಂದರಾಜು, ತಿಪಟೂರುರಂಗಸ್ವಾಮಿ, ಖಜಾಂಚಿ ಮಡಿವಾಳ ವೆಂಕಟರಾಮು, ಹುಳಿಯಾರು ಮುಕುಂದ, ಗೋವಿಂದ ಹುಳಿಯಾರು, ಅಲೆಮಾರಿರಾಜಪ್ಪ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...