ತುಮಕೂರು | ಕಾವ್ಯ, ಪುಸ್ತಕಗಳು ಜಾತಿ ಮತವಿಲ್ಲದೆ ಜಾತ್ಯತೀತವಾಗಬೇಕು : ರಘುನಂದನ

Date:

ಕವಿತೆ ಅರ್ಥವಾಗಬೇಕೆಂದರೆ ಅದರೊಂದಿಗೆ ಸಂಸಾರ ನಡೆಸಬೇಕು; ಅದರ ತೀವ್ರ ಒಡನಾಟವಿರಬೇಕು. ಆಗ ಮಾತ್ರ ಕವಿತೆ ದಕ್ಕುತ್ತದೆ ಎಂದು ಕವಿ, ನಾಟಕಕಾರ ರಘುನಂದನ ಹೇಳಿದರು.

ತುಮಕೂರು ವಿಶ್ವದ್ಯಾನಿಲಯದ ಕುವೆಂಪು ಅಧ್ಯಯನ ಪೀಠ ಮಂಗಳವಾರ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕವಿತೆ ಅಲೌಕಿಕವಾದದ್ದು; ಅದು ಬೇರೊಂದು ಲೋಕವನ್ನೇ ಕಟ್ಟಿಕೊಡುತ್ತದೆ. ನಾವು ಕವಿತೆಯನ್ನು ಮನರಂಜನೆಗೋಸ್ಕರ ಮಾತ್ರ ಓದುತ್ತಿದ್ದೇವೆ. ಆದರೆ ಕವಿತೆ ಮನದ ಕಾಯಿಲೆಗೆ ಕಷಾಯ, ಅದೊಂದು ಔಷಧಿ ಎಂಬುದನ್ನು ನಾವು ತಿಳಿದಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾವೆಲ್ಲರೂ ಈ ಲೋಕದಲ್ಲಿ ಇದ್ದೇವೆ ಎಂಬುದಕ್ಕಿಂತ ನಾವು ಲೋಕದ ಭಾಗವಾಗಿದ್ದೇವೆ; ನಮ್ಮ ಇರುವಿಕೆ, ಲೋಕದಲ್ಲಿ ನಾವಿದ್ದೇವೆ ಎಂಬ ಅರಿವೇ ಮುಖ್ಯ. ನಾವೆಲ್ಲರೂ ಒಂದೇ ಪ್ರಪಂಚದಲ್ಲಿದ್ದೇವೆ, ಹಾಗಾಗಿ ಒಳಗಿನದು, ಹೊರಗಿನದು ಎಂಬ ಭೇದ ಬೇಡ. ನಾವೆಲ್ಲರೂ ಒಂದೇ ಎಂಬ ಸಮನ್ವಯ ಭಾವವೇ ಶ್ರೇಷ್ಠ ಎಂದರು.

1000972817

ಕಾವ್ಯ, ಪುಸ್ತಕಗಳು ಜಾತಿ ಮತವಿಲ್ಲದೆ ಜಾತ್ಯತೀತವಾಗಬೇಕು. ಪುಸ್ತಕಗಳನ್ನು ಓದುವಾಗ ಯಾವ ಸಿದ್ಧಾಂತವಿಟ್ಟುಕೊಳ್ಳದೆ ಓದಬೇಕು. ಆಗ ಮಾತ್ರ ಅದರ ಸಾರ ಅರ್ಥವಾಗುತ್ತದೆ. ನಾವು ಯಾರೂ ಶಾಶ್ವತವಲ್ಲ. ಒಂದು ಸಾವು ಮತ್ತೊಂದು ಹುಟ್ಟಿಗೆ ಕಾರಣವಾಗುತ್ತದೆ. ಆನಂದ, ದುಃಖವೆಲ್ಲವೂ ಕ್ಷಣಿಕವಷ್ಟೇ ಎಂದರು.

ಯಾವ ನದಿಯೂ ಶ್ರೇಷ್ಠವಲ್ಲ, ಯಾವುದೂ ಕನಿಷ್ಠವಲ್ಲ. ಹನಿ ಹನಿಯೂ ಶ್ರೇಷ್ಟವೆ. ಯಾರೂ ಶ್ರೇಷ್ಠರಲ್ಲ, ಯಾರೂ ಕನಿಷ್ಠರಲ್ಲ, ವಿಶ್ವಮಾನವ ಕುವೆಂಪು ಹೇಳುವ ಹಾಗೆ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರೂ ಅಲ್ಲ ಎಂಬ ವಿಶ್ವಮಾನವ ಸಂದೇಶ ಒಪ್ಪಿಕೊಳ್ಳಬೇಕು ಎಂದರು.

ಕುವೆಂಪು ಅಧ್ಯಯನ ಪೀಠದ ಸಂಯೋಜಕಿ ಡಾ. ಗೀತಾ ವಸಂತ, ಕಲಾವಿದ ತೋವಿನಕೆರೆ ಹನುಮಂತೇಗೌಡ, ಕಥೆಗಾರ ಮಿರ್ಜಾ ಬಷೀರ್, ಪತ್ರಕರ್ತ ಉಗಮ ಶ್ರೀನಿವಾಸ್, ರಂಗ ನಿರ್ದೇಶಕ ನಟರಾಜ್ ಹೊನ್ನವಳ್ಳಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...