ತುಮಕೂರು | ಒಳಮೀಸಲಾತಿ ಪಾದಯಾತ್ರೆ ಸ್ವಾಗತಕ್ಕೆ ಸಿದ್ಧತೆ

Date:

ಒಳಮೀಸಲಾತಿಗಾಗಿ ಒತ್ತಾಯಿಸಿ ದಸಂಸ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾದಿ ಸ್ಥಳ ಹರಿಹರದಿಂದ ಮಾರ್ಚ್ 05 ರಂದು ಹೊರಟಿರುವ ಕ್ರಾಂತಿಕಾರಿ ಪಾದಯಾತ್ರೆ ಮಾರ್ಚ್ 16ರ ಭಾನುವಾರದಂದು ತುಮಕೂರು ನಗರ ಪ್ರವೇಶಿಸಲಿದ್ದು,ಪಾದಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಿ, ಬೀಳ್ಕೋಡುವ ಸಂಬಂಧ ಇಂದು ಅಂಬೇಡ್ಕರ್ ಭವನದಲ್ಲಿ ಮಾದಿಗ ಸಮುದಾಯದ ಮುಖಂಡರ ಪೂರ್ವಭಾವಿ ಸಭೆ ನಡೆಯಿತು.

1001160002

ಸುಮಾರು 30 ವರ್ಷಗಳ ನಿರಂತರ ಹೋರಾಟದ ಫಲವಾಗಿ 2024ರ ಆಗಸ್ಟ್ 01 ರಂದು ಸುಪ್ರಿಂಕೋರ್ಟಿನ 7 ನ್ಯಾಯಾಧೀಶರ ಪೀಠ ಒಳಮೀಸಲಾತಿ ಜಾರಿ ಅಯಾಯ ರಾಜ್ಯ ಸರಕಾರಗಳ ಮಾಡಬಹುದು ಎಂಬ ತೀರ್ಪು ನೀಡಿದೆ. ಎಂಪೇರಿಕಲ್ ಡಾಟಾ ಹೆಸರಿನಲ್ಲಿ ಸರಕಾರಗಳು ವಿಳಂಭ ಧೋರಣೆ ಅನುಸರಿಸುತ್ತಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ಜಾರಿ ಮಾಡುವ ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಎರಡು ವರ್ಷ ಕಳೆದರೂ ಮೀನಾಮೇಷ ಎಣಿಸುತ್ತಿದ್ದು, ಸರಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ ಪ್ರೊ.ಹರಿರಾಮ್ ಮತ್ತು ಭಾಸ್ಕರ್ ಪ್ರಸಾದ್ ನೇತೃತ್ವದ ಸುಮಾರು 40 ಜನರ ತಂಡ ಈ ಕ್ರಾಂತಿಕಾರಿ ಪಾದಯಾತ್ರೆಯನ್ನು ಕೈಗೊಂಡಿದ್ದು, ಪಾದಯಾತ್ರೆ ಮಾ.13 ರಂದು ತುಮಕೂರು ಜಿಲ್ಲೆಗೆ ಆಗಮಿಸಲಿದ್ದು, ಮಾ.16ರಂದು ತುಮಕೂರು ನಗರಕ್ಕೆ ಆಗಮಿಸಲಿದೆ.ಮಾದಿಗ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿರುವ ತುಮಕೂರು ಜಿಲ್ಲೆಯಲ್ಲಿ ಪಾದಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಿ,ಬೀಳ್ಕೊಡುವ ನಿಟ್ಟಿನಲ್ಲಿ ಚರ್ಚೆಗಳು ನಡೆದವು.

ಮಾರ್ಚ್ 15ರ ರಾತ್ರಿ ತುಮಕೂರು ನಗರಕ್ಕೆ ಸಮೀಪದ ಊರುಕೆರೆ ಗ್ರಾಮಕ್ಕೆ ಬಂದು ತಲುಪುವ ಕ್ರಾಂತಿಕಾರಿ ಪಾದಯಾತ್ರೆಯ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡುವ ಜೊತೆಗೆ,ರಾತ್ರಿ ಊಟ ಮತ್ತು ಮಾರ್ಚ್ 16ರ ಬೆಳಗಿನ ತಿಂಡಿ ವ್ಯವಸ್ಥೆ, ಮದ್ಯಾಹ್ನದ ಊಟದ ವ್ಯವಸ್ಥೆ ಮಾಡುವುದು,ಊರುಕೆರೆಯಿಂದ ಹೊರಡುವ ಪಾದಯಾತ್ರೆಯನ್ನು ತಮಟೆ ಸದ್ದಿನೊಂದಿಗೆ ನಗರದ ಶಿರಾಗೇಟ್‌ನ ಕಾಳಿದಾಸ ಸರ್ಕಲ್‌ನಲ್ಲಿ ಸ್ವಾಗತಿಸಿ,ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಸ್ವಾತಂತ್ರ ಚೌಕದ ಮೂಲಕ ಬಿಜಿಎಸ್(ಟೌನ್‌ಹಾಲ್)ವೃತ್ತಕ್ಕೆ ಕರೆತರುವುದು. ಟೌನ್‌ಹಾಲ್ ಮುಂಭಾಗದಲ್ಲಿ ಒಂದು ಬಹಿರಂಗ ಸಭೆ ನಡೆಸಿ, ಊಟದ ನಂತರ ಕೆಲ ಕಾಲ ವಿಶ್ರಾಂತಿ ನಂತರ ಸಿದ್ದಗಂಗಾ ಮಠಕ್ಕೆ ತೆರಳಿ ರಾತ್ರಿ ವಾಸ್ತವ್ಯ ಹೂಡಲಿದೆ.ಮಾರ್ಚ್ 17ರ ಬೆಳಗ್ಗೆ ಸಿದ್ದಗಂಗಾ ಮಠದಿಂದ ಹೊರಡುವ ಕ್ರಾಂತಿಕಾರಿ ಪಾದಯಾತ್ರೆಯನ್ನು ಜಿಲ್ಲೆಯ ಗಡಿಯವರೆಗೆ ತೆರಳಿ ಬಿಳ್ಕೋಡಲು ಸಭೆಯಲ್ಲಿ ತೀರ್ಮಾನ ಕೈಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001160001

ಒಳಮೀಸಲಾತಿ ಸಂಬಂಧ ಈ ಹಿಂದೆಯೂ ದಲಿತ ಮುಖಂಡರ ನೇತೃತ್ವದಲ್ಲಿ ಇಂತಹ ಪಾದಯಾತ್ರೆಗಳು ನಡೆದಾಗ ಜಿಲ್ಲೆಯ ಮಾದಿಗ ಸಮುದಾಯ ಪಾದಯಾತ್ರೆಯಲ್ಲಿ ಬಂದವರಿಗೆ ಒಳ್ಳೆಯ ಅತಿಥ್ಯ ನೀಡಿ ಕಳುಹಿಸಲಾಗಿದೆ. ಈ ಬಾರಿಯೂ ಯಾವುದೇ ಕೊರತೆಯಾಗದ ರೀತಿಯಲ್ಲಿ ಕಾರ್ಯಕ್ರಮ ನಡೆಸಬೇಕು.ಎಲ್ಲರೂ ಪಕ್ಷ ಬೇಧ ಮರೆತು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಒಕ್ಕೊರಲ ನಿರ್ಣಯ ಕೈಗೊಳ್ಳಲಾಯಿತು.

ಸಭೆಯಲ್ಲಿ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸೇರಿದಂತೆ ವಿವಿಧ ಮಾದಿಗ ಪರ ಸಂಘಟನಗಳ ಮುಖಂಡರಾದ ಕೊಟ್ಟ ಶಂಕರ್,ರಂಗಧಾಮಯ್ಯ,ಪಿ.ಎನ್.ರಾಮಯ್ಯ,ಹಿರಿಯರಾದ ಮರಿಚನ್ನಮ್ಮ,ಬಂಡೆ ಕುಮಾರ್, ಡಾ.ರವಿಕುಮಾರ್ ನೀ.ಹ. ರಂಜನ್,ಶಿವಣ್ಣ,ಮೂರ್ತಿ,ಕೆಂಪರಾಜು,ಭಾನುಪ್ರಕಾಶ್,ಜೆಸಿಬಿ ವೆಂಕಟೇಶ್, ಗಣೇಶ್, ಕೇಬಲ ರಘು, ಕಿರಣ್‌ಕುಮಾರ್, ಗೋಪಾಲ್, ನಾಗರಾಜು,ಸಾಗರ್, ಲಕ್ಷ್ಮೀ ಮದೇವಯ್ಯ, ರಾಮಾಂಜಿ ಸೇರಿದಂತೆ ದಸಂಸ ಮುಖಂಡರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...