ತುಮಕೂರು | ಆತ್ಮಕಥೆ ಆತ್ಮರತಿಯಾಗಬಾರದು : ಹಿರಿಯ ಸಾಹಿತಿ ಪ್ರೊ. ಎಸ್. ಜಿ. ಸಿದ್ದರಾಮಯ್ಯ

Date:

“ನಮ್ಮನ್ನು ನಾವು ಜಗತ್ತಿಗೆ ತೆರೆದಿಡುವ ನೈತಿಕ ಕ್ರಮವೇ ಆತ್ಮಕಥೆಯಾದ್ದರಿಂದ, ಆತ್ಮವಿಮರ್ಶೆಯ ಮುಖೇನ ಆತ್ಮಕಥೆಯನ್ನು ರಚಿಸಬೇಕೇ ಹೊರತು ಆತ್ಮರತಿಯಾಗಬಾರದು” ಎಂದು ಕನ್ನಡದ ಹಿರಿಯ ಸಾಹಿತಿ ಪ್ರೊ. ಎಸ್. ಜಿ. ಸಿದ್ದರಾಮಯ್ಯ ಹೇಳಿದರು.

ತುಮಕೂರು ವಿವಿಯ ಡಿವಿಜಿ ಕನ್ನಡ ಅಧ್ಯಯನ ಕೇಂದ್ರವು ಮಂಗಳವಾರ ಆಯೋಜಿಸಿದ್ದ ಪ್ರೊ. ಎಸ್. ಜಿ. ಸಿದ್ದರಾಮಯ್ಯ ಅವರ ಆತ್ಮಕಥನ ‘ಯರೆಬೇವು’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಆತ್ಮಕಥೆಗಳು ಸಮಾಜದ ಏಣಿ ಶ್ರೇಣಿಗಳು, ಅವಮಾನಗಳು, ದುಗುಡ-ದುಮ್ಮಾನಗಳ ಜೊತೆಗೆ ಆ ಕಾಲಘಟ್ಟದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಿನ್ನೆಲೆಗಳ ಕೈಗನ್ನಡಿಯಾಗಿವೆ. ಬಾಳಕಥನ ಎಂಬುದು ರೂಪಕವಿದ್ದಂತೆ. ಪಾರದರ್ಶಕತೆಯಿಂದ ಕೂಡಿದ ಆತ್ಮಕಥೆ ಮಾತ್ರ ಶ್ರೇಷ್ಠವಾದದ್ದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿರಿಯ ಸಾಹಿತಿಗಳಾದ ಪಿ. ಲಂಕೇಶ್, ಗಿರೀಶ್ ಕಾರ್ನಾಡ್, ಶ್ಯಾಮರಾಯರು, ಕುವೆಂಪು, ಶಿವರಾಮ ಕಾರಂತರ ಆತ್ಮಕಥೆಗಳು ನೈಜಭಾವವನ್ನು ಹೊಂದಿವೆ. ಬರೆಹಕ್ಕೆ ವಸ್ತುವಾಗುವಂತೆ ಬದುಕಬೇಕೆಂಬ ಪರಿಕಲ್ಪನೆಯಲ್ಲಿ ಅನೇಕ ಮಹಿಳಾ ಸಾಹಿತಿಗಳ ಉತ್ಕೃಷ್ಟ ಆತ್ಮಕಥಾನಕಗಳು ಕೂಡ ಬಂದಿವೆ. ಸಾಲು ಮರದ ತಿಮ್ಮಕ್ಕ, ಮಾಟಗಾನಹಟ್ಟಿಯ ದಾಸಪ್ಪನಂತಹ ಅದೆಷ್ಟೋ ಅನಾಮಧೇಯ ಆತ್ಮಕಥೆಗಳನ್ನು ನಾವಿಂದು ಕಟ್ಟಬೇಕಿದೆ” ಎಂದರು.

“ನಮ್ಮ ಪುರಾಣಗಳಲ್ಲಿ ಬರುವ ಮಹಿಳಾ ಪಾತ್ರಗಳಾದ ಸೀತೆ, ಉರ್ಮಿಳಾ, ಶಾಂತ, ಅಂಬೆ, ಅಂಬಿಕೆ, ಅಂಬಾಲಿಕೆ, ಕುಂತಿ, ಭಾನುಮತಿಯರು ಆತ್ಮಕಥನವನ್ನು ಒಂದು ವೇಳೆ ಬರೆದಿದ್ದಿದ್ದರೆ ಅವರ ತುಡಿತ-ಮಿಡಿತಗಳು, ಆ ಕಾಲಘಟ್ಟದ ಸತ್ಯ ಕಥೆಗಳನ್ನು ಬಿಚ್ಚಿಡುತ್ತಿದ್ದವು. ಆದ್ದರಿಂದ ವಿದ್ಯಾರ್ಥಿಗಳು ಆತ್ಮಕತೆಗಳಲ್ಲಿನ ಸೂಕ್ಷ್ಮತೆಯನ್ನು ಗ್ರಹಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು” ಎಂದು ಪ್ರೊ. ಎಸ್. ಜಿ. ಸಿದ್ದರಾಮಯ್ಯ ಸಲಹೆ ನೀಡಿದರು.

“ಯರೆಬೇವು ಆತ್ಮಕಥೆಯು ನನ್ನ ಕಾಲಘಟ್ಟದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಹಿನ್ನೆಲೆಯನ್ನು ಕಟ್ಟಿಕೊಡುತ್ತದೆ. ಬಾಲ್ಯದ ಗೆಳೆಯರ ಅನುಭವ, ಗ್ರಾಮೀಣ ಸೊಗಡಿನ ಚಿತ್ರಣಗಳನ್ನು ಕಟ್ಟಿಕೊಡುತ್ತದೆ” ಎಂದು ತಿಳಿಸಿದರು.

ತುಮಕೂರು ವಿವಿಯ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಮಾತನಾಡಿ, “ಪದವಿಯ ಜೊತೆಗೆ ಸಾಹಿತ್ಯ ಜ್ಞಾನವಿದ್ದಾಗ ಸಮಾಜಮುಖಿ ಕಾರ್ಯಗಳಲ್ಲಿ ಆಸಕ್ತಿ ಬೆಳೆಯುತ್ತದೆ. ಉತ್ತಮ ಆಲೋಚನೆಗಳು, ಚಿಂತನೆಗಳು ಸ್ಫುಟಿಸಬೇಕಾದರೆ ಸುತ್ತಲಿನ ಪರಿಸರ ಕೂಡ ಸಹಕರಿಸಬೇಕು” ಎಂದು ಹೇಳಿದರು.

ಡಿವಿಜಿ ಕನ್ನಡ ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ. ನಿತ್ಯಾನಂದ ಬಿ. ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳಿಗೆ ಸಮಾಜದ ಸಮಸ್ಯೆಗಳ ಕುರಿತು ಬರೆಯಬೇಕೆಂಬ ತುಡಿತವಿರುತ್ತದೆ. ಅವರ ಬರೆಹಗಳನ್ನು ಸರಿಯಾದ ಕ್ರಮದಲ್ಲಿ ಸೇರಿಸಿ, ಸಮಗ್ರವಾಗಿಸುವ ಕಲ್ಪನೆಯನ್ನು ಆತ್ಮಕಥೆಗಳು ನೀಡುತ್ತವೆ” ಎಂದರು.

ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್ ಕೆ. ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...