ತುಮಕೂರು | ರೈತರ ಜಾನುವಾರು ವಾಹನ ತಡೆದ ಬಜರಂಗದಳ ಕಾರ್ಯಕರ್ತರ ವಿರುದ್ಧ ಪ್ರತಿಭಟನೆ

Date:

ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಜೋಡುಗಟ್ಟೆ ಗ್ರಾಮದಲ್ಲಿ ಸೋಮವಾರ ದನಗಳ ಸಂತೆಯಲ್ಲಿ ರೈತರು ಖರೀದಿಸಿದ್ದ ಜಾನುವಾರು ಸಾಗಿಸುತ್ತಿದ್ದ ವಾಹನ ತಡೆದ ಬಜರಂಗದಳ ಕಾರ್ಯಕರ್ತರು, ವಾಹನ ಸಹಿತ ರೈತರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. 

ಶಾಸಕ ಎಂ.ಟಿ.ಕೃಷ್ಣಪ್ಪ ಬಜರಂಗದಳದ ಕಾರ್ಯಕರ್ತರನ್ನು ವಿರೋಧಿಸಿ ಅವರು ಪೊಲೀಸ್‌ ಠಾಣೆ ಎದುರು ರೈತರೊಂದಿಗೆ ಪ್ರತಿಭಟನೆ ನಡೆಸಿದರು. ರೈತರ ಮೇಲೆ ದೌರ್ಜನ್ಯ ನಡೆಸಿದ ಪಿಎಸ್‌ಐ ಹೊನ್ನೇಗೌಡ ಅವರ ವರ್ಗಾವಣೆಗೆ ಪಟ್ಟು ಹಿಡಿದರು. 

ಘಟನೆ ಹಿನ್ನಲೆ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‌ಸಂತೆಯಲ್ಲಿ ಖರೀದಿಸಿದ 15 ಎತ್ತು ಮತ್ತು ಹಸುಗಳನ್ನು ರೈತರು ಬಾಡಿಗೆ ವಾಹನದಲ್ಲಿ ಗ್ರಾಮಗಳಿಗೆ ಸಾಗಿಸುತ್ತಿದ್ದರು. ಮಾಯಸಂದ್ರ ಬಳಿ ವಾಹನ ಅಡ್ಡಗಟ್ಟಿದ ಬಜರಂಗದಳದ ಕಾರ್ಯಕರ್ತರು ಎಂದು ಹೇಳಿಕೊಂಡ 10–12 ಜನರ ಗುಂಪು ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂದು ಆಕ್ಷೇಪ ಎತ್ತಿದರು.

ಫೋನ್‌ ಮಾಡಿ ಪೊಲೀಸರನ್ನು ಸ್ಥಳಕ್ಕೆ ಕರೆಸಿಕೊಂಡ ಬಜರಂಗದಳದ ಕಾರ್ಯಕರ್ತರು ಹಸುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂದು ದೂರಿದರು. ವಾಹನವನ್ನು ತುರುವೇಕೆರೆ ಪಟ್ಟಣದ ಪೊಲೀಸ್‌ ಠಾಣೆಗೆ ಕರೆದೊಯ್ದು, ರೈತರ ವಿರುದ್ಧ ದೂರು ಸಲ್ಲಿಸಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ರೈತರನ್ನು ವಶಕ್ಕೆ ಪಡೆದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಕಾರ್ಮಿಕ ಮಹಿಳೆ ಮೇಲೆ ಹುಲಿ ದಾಳಿ

ವಿಷಯ ತಿಳಿದು ಠಾಣೆಗೆ ಆಗಮಿಸಿದ ಶಾಸಕ ಎಂ ಟಿ ಕೃಷ್ಣಪ್ಪ, ರೈತರು ಮತ್ತು ಜಾನುವಾರುಗಳನ್ನು ಬಿಡುವಂತೆ ಒತ್ತಾಯಿಸಿ ಪೊಲೀಸ್‍ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಬಜರಂಗದಳದ ಕಾರ್ಯಕರ್ತರ ಮಾತು ಕೇಳಿ ರೈತರ ಮೇಲೆ ದೌರ್ಜನ್ಯ ನಡೆಸಿದ ಪಿಎಸ್‌ಐ ಹೊನ್ನೇಗೌಡ ಮತ್ತು ಸಿಬ್ಬಂದಿಯನ್ನು  ವರ್ಗಾವಣೆ ಮಾಡುವಂತೆ ಪಟ್ಟು ಹಿಡಿದರು.

ಹಿರಿಯ ಪೊಲೀಸ್‌ ಅಧಿಕಾರಿಗಳ ಸೂಚನೆ ಬಳಿಕ ರೈತರು ಮತ್ತು ಜಾನುವಾರುಗಳನ್ನು ಬಿಟ್ಟು ಕಳಿಸಲಾಯಿತು. 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...