ತುಮಕೂರು | ಸಾರ್ವಜನಿಕ ಸಭೆ,ಸಮಾರಂಭಗಳಿಗೆ ಅನುಮತಿ ಇಲ್ಲ : ಮೂರು ಸಾವಿರ ಸ್ವಯಂ ಸೇವಕರ ನೇಮಕಕ್ಕೆ ಕ್ರಮ

Date:

ರಾಷ್ಟ್ರದ ಗಡಿಯಲ್ಲಿ ಭಾರತ-ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸಲು ಜಿಲ್ಲೆಯಲ್ಲಿ 3000 ಸ್ವಯಂ ಸೇವಕರನ್ನು ನೇಮಕ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. 

ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸ್ವಯಂ ಸೇವಕರನ್ನು ನೇಮಕ ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಸ್ವಯಂ ಸೇವಕರ ನೇಮಕಾತಿಗಾಗಿ ಕಮ್ಯಾಂಡೆಂಟ್ ಹೋಮ್‌ಗಾರ್ಡ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು, ನೆಹರು ಯುವ ಕೇಂದ್ರದ ಉಪನಿರ್ದೇಶಕರನ್ನು ನಿಯೋಜಿಸಲಾಗಿದೆ. ಯುದ್ಧಕ್ಕೆ ಸಂಬಂಧಿಸಿದಂತೆ ತುರ್ತು ಸಂದರ್ಭಗಳು ಘೋಷಣೆಯಾದಾಗ ಜನರ ಜೀವ ಹಾಗೂ ಆಸ್ತಿಗಳ ರಕ್ಷಣೆಗಾಗಿ ಸ್ವಯಂ ಸೇವಕರ ನೆರವನ್ನು ಪಡೆಯಲಾಗುವುದು ಎಂದು ತಿಳಿಸಿದರು. 

ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲಿಚ್ಛಿಸುವವರು 18 ವರ್ಷ ವಯೋಮಾನದವರಾಗಿದ್ದು, ದೈಹಿಕವಾಗಿ ಸದೃಢರಾಗಿರಬೇಕು. ಆಸಕ್ತರು ನಿಗಧಿತ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಬಗ್ಗೆ ಈಗಾಗಲೇ ಸ್ಥಳೀಯ ಆಡಳಿತ ವ್ಯಾಪ್ತಿಯಲ್ಲಿ ಪ್ರಚುರ ಪಡಿಸಲಾಗಿದೆ. ಸ್ವಯಂ ಸೇವಕರಾಗಿ ಆಯ್ಕೆಯಾದವರಿಗೆ ಸೂಕ್ತ ತರಬೇತಿ ನೀಡಲಾಗುವುದು ಎಂದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುರ್ತು ಸಂದರ್ಭಗಳನ್ನು ಎದುರಿಸಲು ಹಾಗೂ ಸಾರ್ವಜನಿಕರಿಗೆ ನೆರವು ನೀಡಲು ಈಗಾಗಲೇ ಜಿಲ್ಲೆಯಲ್ಲಿ ಗುರುತಿಸಿರುವ ಸುಮಾರು 20 ಸೂಕ್ಷ್ಮ ಪ್ರದೇಶಗಳಿಗೆ ಬಿಎಸ್‌ಎನ್‌ಎಲ್ ವತಿಯಿಂದ ಹಾಟ್ ಲೈನ್ ಸಂಪರ್ಕ ನೀಡಲಾಗುವುದು. ಇದರಿಂದ ಸ್ಥಳೀಯ ಸಮಸ್ಯೆಗಳನ್ನು ತ್ವರಿತವಾಗಿ ಜಿಲ್ಲಾಡಳಿತಕ್ಕೆ ತಲುಪಿಸಲು ಅನುಕೂಲವಾಗಲಿದೆ. ಅಲ್ಲದೆ, ನಗರ ಸ್ಥಳೀಯ ಸಂಸ್ಥೆ ಹಾಗೂ ತಾಲ್ಲೂಕು ಕಚೇರಿಗಳಲ್ಲಿಯೂ ಸಹಾಯವಾಣಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. 

ಮುಂಜಾಗ್ರತಾ ಕ್ರಮವಾಗಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 24×7 ಸಹಾಯವಾಣಿ ಕೇಂದ್ರ ಸ್ಥಾಪಿಸಲು ಸರ್ಕಾರ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸ್ಮಾರ್ಟ್ ಸಿಟಿಯ ಇಂಟಿಗ್ರೇಟೆಡ್ ಕಮ್ಯಾಂಡ್ ಅಂಡ್ ಕಂಟ್ರೋಲ್ ಕೇಂದ್ರದಲ್ಲಿ ಸಹಾಯವಾಣಿ ಸಂಖ್ಯೆ: 0816-2213400ಯನ್ನು ಸ್ಥಾಪಿಸಲಾಗಿದೆ. ಈ ಸಹಾಯವಾಣಿ ಕೇಂದ್ರದಲ್ಲಿ ಕಂದಾಯ, ಪೊಲೀಸ್, ಬೆಸ್ಕಾಂ, ಅಗ್ನಿಶಾಮಕ ಅಧಿಕಾರಿಗಳು ಉಪಸ್ಥಿತರಿದ್ದು, ಸ್ವೀಕೃತ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ ಪರಿಹಾರ ನೀಡಲಿದ್ದಾರೆ. ಯುದ್ಧ ದಾಳಿ ಸಂಭವಿಸಿದಾಗ ಎಚ್ಚರಿಕೆ ಸದ್ದು ನೀಡಲು ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಸೈರನ್ ಅಳವಡಿಸಬೇಕು ಎಂದು ಎಲ್ಲಾ ತಹಶೀಲ್ದಾರರಿಗೆ ಸೂಚನೆ ನೀಡಲಾಗಿದೆ. 

ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ದಾಸ್ತಾನು ಇರುವ ರಾಗಿ, ಗೋಧಿ, ಅಕ್ಕಿ, ಮತ್ತಿತರ ಅಗತ್ಯ ವಸ್ತುಗಳ ಅಭಾವ ಸೃಷ್ಟಿಯಾಗದಂತೆ ಹಾಗೂ ಆಹಾರ ಧಾನ್ಯಗಳು ಕ್ರಮವಾಗಿ ಕಾಳ ಸಂತೆಯಲ್ಲಿ ಮಾರಾಟವಾಗದಂತೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರಲ್ಲದೆ, ಜನರು ಆತಂಕ ಪಡುವ ಸುಳ್ಳು ಸುದ್ದಿಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಬಾರದು. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶಗಳನ್ನು ಹರಿಯಬಿಡುವವರು ಯಾರೇ ಆಗಲಿ ಅವರನ್ನು ಕಾನೂನು ಕ್ರಮಕ್ಕೆ ಗುರಿಪಡಿಸಲಾಗುವುದು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಸಾಮಾಜಿಕ ಜಾಲತಾಣಗಳ ಮೇಲೆ 24×7 ನಿಗಾವಹಿಸಲಿದೆ ಎಂದು ತಿಳಿಸಿದರು. 

ತುರ್ತು ಸೇವೆ ಒದಗಿಸುವ ಪೊಲೀಸ್, ಅಗ್ನಿಶಾಮಕದಳ, ಬೆಸ್ಕಾಂ, ಆರೋಗ್ಯ ಇಲಾಖೆಗಳಲ್ಲಿ ಮಾನವ ಸಂಪನ್ಮೂಲ ಹಾಗೂ ಮೂಲಭೂತ ಸೌಕರ್ಯಗಳನ್ನು ಸಿದ್ಧವಿಟ್ಟುಕೊಳ್ಳಲು ಸರ್ಕಾರ ನಿರ್ದೆಶನ ನೀಡಿರುವ ಹಿನ್ನೆಲೆಯಲ್ಲಿ ರಜೆ ಮೇಲೆ ತೆರಳಿರುವ ತುರ್ತು ಸೇವೆ ನೀಡುವ ಇಲಾಖೆಗಳ ಅಧಿಕಾರಿ, ನೌಕರರ ರಜೆಯನ್ನು ರದ್ದುಪಡಿಸಿ, ಮರಳಿ ಕರ್ತವ್ಯಕ್ಕೆ ಹಾಜರಾಗಲು ಸೂಚನೆ ನೀಡಲಾಗಿದೆ. ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ 9000 ಹಾಸಿಗೆಗಳು ಲಭ್ಯವಿದ್ದು, 12 ಆಕ್ಸಿಜನ್ ಪ್ಲಾಂಟ್, ವೆಂಟಿಲೇಟರ್, ಆಂಬುುಲೆನ್ಸ್ ಗಳು ಸುಸ್ಥಿತಿಯಲ್ಲಿವೆ ಎಂದು ಮಾಹಿತಿ ನೀಡಿದರು. 

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಮಾತನಾಡಿ, ಯುದ್ಧದ ಸಂದರ್ಭದಲ್ಲಿ ಸಾರ್ವಜನಿಕ ಸಭೆ, ಸಮಾರಂಭಗಳಿಗೆ ಅನುಮತಿ ನೀಡಲಾಗುವುದಿಲ್ಲ. ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಮದುವೆ, ಮತ್ತಿತರ ಶುಭ ಸಮಾರಂಭಗಳಿಗೆ ಕಡಿಮೆ ಜನರು ಮಾತ್ರ ಸೇರಲು ಅವಕಾಶ ನೀಡಲಾಗುವುದು ಎಂದು ಹೇಳಿದರಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಯಬಿಡುವವರನ್ನು ಕಾನೂನು ಕ್ರಮಕೈಗೊಳ್ಳಲಾಗುವುದು. ಯಾವುದೇ ತಪ್ಪು ಸಂದೇಶಗಳು ವಾಟ್ಸ್ಪ್ ಮೂಲಕ ಹಂಚಿಕೊಂಡರೆ ಸದರಿ ಗ್ರೂಪ್ ಅಡ್ಮಿನ್ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. 

 ಹೆಚ್ಚಿನ ಜನ ಸೇರುವ ಶಾಪಿಂಗ್ ಮಾಲ್, ಬಸ್ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಶ್ವಾನದಳ, ಪೊಲೀಸ್ ಸಿಬ್ಬಂದಿಗಳಿಂದ ತಪಾಸಣೆ ನಡೆಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿಯೂ ಎಚ್ಚರಿಕೆ ವಹಿಸಲಾಗಿದೆ. ಜಿಲ್ಲೆಯಲ್ಲಿ 250 ನಾಕಾಬಂದಿ ಬಿಂದುಗಳನ್ನು ಗುರುತಿಸಲಾಗಿದೆ. ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡು ಬಂದರೆ ಅದನ್ನು ಮುಟ್ಟದೆ ಸಹಾಯ ವಾಣಿ ಸಂಖ್ಯೆ: 112ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಹೇಳಿದರು.  

ಸರ್ಕಾರದಿಂದ ಮಾರ್ಗಸೂಚಿಗಳು ಬಂದ ಕೂಡಲೇ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಮಾಕ್‌ಡ್ರಿಲ್(ಅಣಕು ಪ್ರದರ್ಶನ) ಮಾಡಲಾಗುವುದು. ಉದ್ವಿಗ್ನ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಜಿಲ್ಲೆಯಲ್ಲಿ ಕೋಮು ಭಾವನೆಯನ್ನು ಕೆರಳಿಸುವ ಗಲಭೆಗಳಿಗೆ ಅವಕಾಶ ನೀಡಬಾರದು. ಯಾವುದೇ ಪ್ರತಿಭಟನೆಗಳಿಗೂ ಅನುಮತಿ ನೀಡಲಾಗುವುದಿಲ್ಲ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ಸಂದೇಶ ಬಂದರೆ ಪ್ರತಿಯೊಬ್ಬರೂ ಅನುಸರಿಸಬೇಕು. ತಪ್ಪಿದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಸ್ಪಷ್ಟಪಡಿಸಿದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...