ತುಮಕೂರು | ಒಳಮೀಸಲಾತಿ ಸಮೀಕ್ಷೆ ಜಾಗೃತಿಗೆ ಮೇ 1 ರಿಂದ ಜನಾಂದೋಲನ : ಡಾ.ವೈ.ಕೆ.ಬಾಲಕೃಷ್ಣ

Date:

ಒಳಮೀಸಲಾತಿಗೆ ಸಂಬಂಧಿಸಿದಂತೆ ಜಿಲ್ಲೆಯ ಪರಿಶಿಷ್ಟ ಜಾತಿಯ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮೇ 1 ರಿಂದ 7ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಒಳಮೀಲಾತಿ ಹೋರಾಟ ಸಮಿತಿಯಿಂದ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಪ್ರಧಾನ ಸಂಚಾಲಕ ಡಾ.ವೈ.ಕೆ.ಬಾಲಕೃಷ್ಣ ತಿಳಿಸಿದ್ದಾರೆ.

ತುಮಕೂರು ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಒಳಮೀಸಲಾತಿ ಹೋರಾಟ ಸಮಿತಿಯ ತಾಲೂಕು ಅಧ್ಯಕ್ಷರುಗಳ ಸಭೆಯಲ್ಲಿ ಮಾತನಾಡಿದ ಅವರು, ಮೇ 1 ರಂದು ಕೊರಟಗೆರೆಯಿಂದ ಆರಂಭವಾಗುವ 7ನೇ ತಾರೀಖು ಮುಕ್ತಾಯಗೊಳ್ಳಲಿದೆ.ಆಯಾಯ ತಾಲೂಕಿನಲ್ಲಿ ಮಾದಿಗ ಸಮುದಾಯದ ಮುಖಂಡರನ್ನು ಭೇಟಿಯಾಗಿ, ಅವರಿಗೆ ಸಮೀಕ್ಷೆಯ ರೂಪುರೇಷೆ, ಅರ್ಜಿ ಭರ್ತಿ ಮಾಡಬೇಕಾದ ವಿಷಯಗಳು, ಸೇರಿದಂತೆ ಎಲ್ಲವನ್ನು ತಿಳಿಸಿ, ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗೆ ಉಳಿಯದಂತೆ ನೋಡಿಕೊಳ್ಳಬೇಕಿದೆ ಎಂದರು.

ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾ. ನಾಗಮೋಹನ್ ದಾಸ್ ಸಮಿತಿವತಿಯಿಂದ ಸಮೀಕ್ಷೆಗೆ ಸಂಬಂಧಿಸಿದಂತೆ ಪ್ರತಿಯೊಬ್ಬ ಮಾದಿಗ ಸಮುದಾಯದ ಮುಖಂಡರು ಜಾಗೃತರಾಗಿ ಜಾತಿ ಕಲಂನಲ್ಲಿ ಪರಿಶಿಷ್ಟ ಜಾತಿ, ಉಪ ಜಾತಿ ಕಲಂನಲ್ಲಿ ಮಾದಿಗ ಎಂದು ನಮೂದಿಸಬೇಕು,ಗೊಂದಲಕ್ಕೆ ಒಳಗಾಗುವ ಯಾವ ಜಾತಿ ಸೂಚಕ ಪದಗಳನ್ನು ಬಳಸದೆ ಕೇವಲ ಮಾದಿಗ ಎಂದು ಬರಸಬೇಕು.ಜೊತೆಗೆ,ನಿಮ್ಮ ಅಕ್ಕಪಕ್ಕದ ಮನೆಯ, ಅಥವಾ ತೋಟಗಳಲ್ಲಿ, ಊರಿನ ಹೊರಗೆ ಮನೆ ಮಾಡಿಕೊಂಡಿರುವ ಮಾದಿಗ ಸಮುದಾಯ ಜನರನ್ನು ಗುರುತಿಸಿ,ಅವರು ಸಹ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕೆಂದು ಡಾ.ವೈ.ಕೆ.ಬಾಲಕೃಷ್ಣಪ್ಪ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ತುಮಕೂರು ನಗರಕ್ಕೆ ಸಂಬಂಧಿಸಿದಂತೆ ಅಧಿಕಾರಿ, ನೌಕರರು, ಮುಖಂಡರುಗಳ ಸಭೆ ನಡೆಸಲಾಗಿದೆ.ಸಮೀಕ್ಷೆ ನಡೆಸಲು ಮನೆಗಳ ಬಳಿ ಬಂದಾಗ, ಗೊಂದಲಕ್ಕೆ ಒಳಗಾಗದೆ ವಿವರಗಳನ್ನು ನಮೂದಿಸಬೇಕು,ಮಾದಿಗ ಸಮುದಾಯ ಮೀಸಲಾತಿಯಲ್ಲಿ ನ್ಯಾಯಯುತ ಪಾಲು ಪಡೆಯಲು ಇರುವ ಏಕೈಕ ಅವಕಾಶ.ಹಾಗಾಗಿ ರಾಜಕೀಯ ವೈಮನಸ್ಸುಗಳನ್ನು ಬದಿಗೊತ್ತಿ ಎಲ್ಲರೂ ಇದರಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕಾಗಿದೆ.ಇದು ನಾವು ಮುಂದಿನ ಪೀಳಿಗೆಗೆ ನೀಡುತ್ತಿರುವ ಬಳುವಳಿ ಎಂದು ಎಲ್ಲಾ ಮಾದಿಗ ಸಮುದಾಯದ ಮುಖಂಡರು ತಿಳಿದು ಪಾಲ್ಗೊಳ್ಳುವಂತೆ ಡಾ.ವೈ.ಕೆ.ಬಾಲಕೃಷ್ಣ ಸಲಹೆ ನೀಡಿದರು.

ಸಭೆಯಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ,ಮುಖಂಡರಾದ ಬೆಳಗುಂಬ ವೆಂಕಟೇಶ್,ಶ್ರೀನಿವಾಸ್ ಆಯನಹಳ್ಳಿ, ಹೆತ್ತೇನಹಳ್ಳಿ ಮಂಜು, ರಮೇಶ್, ಮಳೆಕೋಟೆ ಹನುಮಂತರಾಯಪ್ಪ, ಪಿ.ಎನ್.ರಾಮಯ್ಯ, ಗೂಳರಿವೆ ನಾಗರಾಜು, ನರಸಿಂಹಯ್ಯ, ನರಸೀಯಪ್ಪ,ಜಯಮೂರ್ತಿ, ಡಾ.ಬಸವರಾಜು,ಶಿವನಂಜಪ್ಪ,ಡಾ.ಮುಕುಂದ ಎಲ್, ಗಂಗಾಧರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...