ತುಮಕೂರು | ಪಾವಗಡ ರೖತ ಸಂಘದ ತಾಲೂಕು ಅಧ್ಯಕ್ಷರಾಗಿದ್ದ ಪೂಜಾರಪ್ಪ ಅಮಾನತು

Date:

ಕರ್ನಾಟಕ ರಾಜ್ಯ ರೈತ ಸಂಘದ ನೀತಿ, ನಿಯಮಗಳ ವಿರುದ್ದವಾಗಿ ನಡೆದುಕೊಂಡಿರುವ ತುಮಕೂರು ಜಿಲ್ಲೆ ಪಾವಗಡ ತಾಲೂಕು ಅಧ್ಯಕ್ಷರಾಗಿದ್ದ ಪೂಜಾರಪ್ಪ ಅವರನ್ನು ಅಧ್ಯಕ್ಷ ಸ್ಥಾನದಿಂದ ಅಮಾನತ್ತು ಮಾಡಲಾಗಿದೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ತಿಳಿಸಿದರು.

ತುಮಕೂರು ವಿಜ್ಞಾನ ಕೇಂದ್ರದಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಸೋಮವಾರ (ಏ.2) ಮಾತನಾಡಿದ ಅವರು, ರಾಜ್ಯದಲ್ಲಿ 1981-82ರಲ್ಲಿ ಹುಟ್ಟಿದ ಕರ್ನಾಟಕ ರಾಜ್ಯ ರೈತ ಸಂಘ ಹಲವು ಸಿದ್ದಾಂತಗಳೊಂದಿಗೆ ಕಾರ್ಯನಿರ್ವಹಿಸುತ್ತಿದೆ.ರೈತ ಸಂಘದ ಹುಟ್ಟಿಗೆ ಕಾರಣರಾದ ಪ್ರೊ. ಎಂ.ಡಿ. ನಂಜುಂಡಸ್ವಾಮಿ, ಎಂ.ಡಿ. ಸುಂದರೇಶ್ ಸೇರಿದಂತೆ ಹಲವರು ನಮಗೆ ಮಾರ್ಗದರ್ಶನ ಮಾಡಿದ್ದು, ಅದರಂತೆ ನಡೆದುಕೊಳ್ಳುತ್ತಾ ಬಂದಿದ್ದೇವೆ. ಆದರೆ, ಸಂಘದ ನಿಯಮಗಳನ್ನು ಗಾಳಿಗೆ ತೂರಿ, ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಜಿ.ಸಿ. ಶಂಕರಪ್ಪ ಅವರ ವಿರುದ್ದ ಮಾಧ್ಯಮಗೋಷ್ಠಿಯಲ್ಲಿ ಅವಹೇಳನಕಾರಿಯಾಗಿ ನಿಂದಿಸಿರುವುದಲ್ಲದೆ, ಬೆದರಿಕೆ ಹಾಕಿದ್ದಾರೆ ಎಂದರು.

ಪಾವಗಡ ತಾಲೂಕು ಅಧ್ಯಕ್ಷರಾದ ಪೂಜಾರಪ್ಪ ಅವರ ನಡೆ, ಸಂಘವಿರೋಧಿಯಾಗಿದ್ದು, ಅವರ ವಿರುದ್ದ ವಿಚಾರಣೆಗೆ ಸಮಿತಿ ಯೊಂದನ್ನು ನೇಮಕ ಮಾಡಿದ್ದು, ಸಮಿತಿಯ ವರದಿ ಬರುವವರೆಗೂ ಅವರನ್ನು ಪಾವಗಡ ತಾಲೂಕು ಅಧ್ಯಕ್ಷ ಸ್ಥಾನದಿಂದ ಅಮಾನತ್ತು ಮಾಡಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ 10ವರ್ಷಗಳಿಂದ ರೈತ ಸಂಘದ ಪಾವಗಡ ತಾಲೂಕು ಘಟಕ ಕೆಲಸ ಮಾಡುತ್ತಿದ್ದು, ಪೂಜಾರಪ್ಪ ಅವರನ್ನು ಅಧ್ಯಕ್ಷರಾಗಿದ್ದ ನೇಮಕ ಮಾಡಲಾಗಿತ್ತು. ಕಳೆದ ಒಂದು ವರ್ಷದಿಂದ ಅವರ ನಡವಳಿಕೆಗಳಲ್ಲಿ ವ್ಯತ್ಯಾಸ ಕಂಡುಬರುತ್ತಿದ್ದು, ತಮಗೆ ಅಧಿಕಾರ ಇಲ್ಲದಿದ್ದರೂ ಸಂಘದ ಕೆಲ ಪದಾಧಿಕಾರಿಗಳನ್ನು ಜಿಲ್ಲಾ ಸಂಘದ ಗಮನಕ್ಕೆ ತಾರದೆ ವಜಾ ಮಾಡಿ, ತಮಗೆ ಇಷ್ಟ ಬಂದವರನ್ನು ನೇಮಕ ಮಾಡಿಕೊಂಡಿದ್ದಾರೆ. ಅಲ್ಲದೆ, ರೈತ ಸಂಘಟನೆಗಳ ಸಮನ್ವಯ ಸಮಿತಿಗಳ ಅಧ್ಯಕ್ಷನೆಂದು ಸ್ವಯಂ ಘೋಷಿಸಿಕೊಂಡು ರೈತ ಸಂಘದ ಶಾಲು ತೆಗೆದು, ಬೇರೆ ಶಾಲು ಹಾಕಿರುವುದು ಖಂಡನೀಯ ಎಂದು ಎ.ಗೋವಿಂದರಾಜು ತಿಳಿಸಿದರು.

ಸದರಿ ವಿಚಾರವಾಗಿ 29-03-2024 ರಂದು ಜಿಲ್ಲಾ ಸಮಿತಿಯ ಮುಂದೆ ಹಾಜರಾಗಿ ವಿವರಣೆ ನೀಡುವಂತೆ ನೋಟಿಸ್ ಜಾರಿ ಮಾಡಲು ಜಿಲ್ಲಾ ಸಮಿತಿ ಮುಂದಾಗಿ ನೋಟಿಸ್ ಜಾರಿ ಮಾಡುವ ಮುಂಚೆಯೇ ಸುದ್ದಿಗೋಷ್ಠಿ ಕರೆದು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ. ಶಂಕರಪ್ಪ ವಿರುದ್ದ ಇಲ್ಲಸಲ್ಲದ ಆರೋಪ ಮಾಡಿ, ಏಕವಚನದಲ್ಲಿ ನಿಂದಿಸಿ, ಬೆದರಿಕೆ ಹಾಕಿದ್ದಲ್ಲದೆ, ಸದರಿ ಸುದ್ದಿಗೋಷ್ಠಿಯ ವಿಡಿಯೋವನ್ನು ರೈತ ಸಂಘದ ಎಲ್ಲಾ ಸಾಮಾಜಿಕ ಜಾಲತಾಣಕ್ಕೆ ಹಾಕಿ ಸಂಘದ ಘನತೆ, ಗೌರವ ಹಾಳು ಮಾಡಲು ಯತ್ನಿಸಿದ ಪೂಜಾರಪ್ಪ ಅವರ ವಿರುದ್ದ ತನಿಖೆ ನಡೆಸಲು ರೈತ ಸಂಘದ ಎಲ್ಲಾ ತಾಲೂಕು ಅಧ್ಯಕ್ಷರುಗಳನ್ನು ಒಳಗೊಂಡ 12 ಜನರ ಶಿಸ್ತು ಸಮಿತಿಯನ್ನು ನೇಮಕ ಮಾಡಿರುವುದಾಗಿ ತಿಳಿಸಿದರು.

ಮುಂದಿನ 15 ದಿನದಲ್ಲಿ ಸಮಿತಿ ವರದಿ ನೀಡಲಿದೆ.ಸದರಿ ವರದಿಯನ್ನು ಜಿಲ್ಲಾ ಸಮಿತಿ ಪರಾಮರ್ಶಿಸಿ, ಅಗತ್ಯ ಕ್ರಮ ಕೈಗೊಳ್ಳಲಿದೆ. ಅಲ್ಲಿಯವರೆಗೆ ಪಾವಗಡ ತಾಲೂಕು ಅಧ್ಯಕ್ಷರಾಗಿದ್ದ ಪೂಜಾರಪ್ಪ ಅವರನ್ನು ತಾಲೂಕು ಅಧ್ಯಕ್ಷ ಸ್ಥಾನದಿಂದ ಅಮಾನತ್ತು ಮಾಡಲು ಇಂದು ನಡೆದ ಜಿಲ್ಲಾ ಕಾರ್ಯಕಾರಿ ಮಂಡಳಿ ಸಭೆ ತೀರ್ಮಾನ ಕೈಗೊಂಡಿದೆ ಎಂದು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಸ್ಪಷ್ಟಪಡಿಸಿದರು.

ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ. ಶಂಕರಪ್ಪ, ಮಹಿಳಾ ಅಧ್ಯಕ್ಷರಾದ ನಾಗರತ್ನಮ್ಮ, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ರವೀಶ್, ದೊಡ್ಡಮಾಳಯ್ಯ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಚಿರತೆ ಚಿಕ್ಕಣ್ಣ, ಅರೇಹಳ್ಳಿ ಮಂಜುನಾಥ್, ಹುಚ್ಚೇಗೌಡ, ಸಿ.ಟಿ.ಕುಮಾರ್, ತಾಲೂಕು ಅಧ್ಯಕ್ಷರುಗಳಾದ ಬಿ.ಕೆ.ಲಕ್ಷ್ಮಣ್‌ ಗೌಡ, ನಾದೂರು ಕೆಂಚಪ್ಪ, ಡಿ.ಆರ್.ರಾಜಶೇಖರ್, ನಾಗರಾಜು, ಚಿಕ್ಕಬೋರೆಗೌಡ, ಟಿ.ಎಂ. ತಿಮ್ಮೇಗೌಡ, ಶ್ರೀನಿವಾಸಗೌಡ, ರಹಮತ್‌ವುಲ್ಲಾ, ರಂಗಹನುಮಯ್ಯ, ಶಬ್ಬೀರ್ ಪಾಷ, ಕೆ.ಎನ್.ವೆಂಕಟೇಗೌಡ, ಸಿ.ಜಿ.ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...