ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಬಂಧಿಸಿ : ಡಾ.ಹೆಚ್.ವಿ. ರಂಗಸ್ವಾಮಿ

Date:

ತುಮಕೂರು: ಆಗಸ್ಟ್ 08 ರಂದು ಕಲ್ಕತ್ತಾದ ಆರ್.ಜಿ.ಕರ್ ಮೆಡಿಕಲ್ ಕಾಲೇಜಿನ ದ್ವಿತೀಯ ವರ್ಷದ ಸ್ನಾತೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಡಾ.ಮೌಮಿತಾ ದೆಬನಾಥ್ ಮೇಲೆ ನಡೆದಿರುವ ಅತ್ಯಾಚಾರ ಮತ್ತು ಕೊಲೆ ಖಂಡನೀಯ.ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ವಿಷಯವಾಗಿದೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಡಾ.ಹೆಚ್.ವಿ. ರಂಗಸ್ವಾಮಿ ತಿಳಿಸಿದರು.

ತುಮಕೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಇಡೀ ಘಟನೆಯನ್ನು ಅವಲೋಕಿಸಿದಾಗ ಎಲ್ಲಾ ವರ್ಗದ ಮಹಿಳೆಯರಿಗೆ ಸುರಕ್ಷತೆಯ ಕೊರತೆ ಇದೆ ಎಂಬುದು ಸಾಭೀತಾಗುತ್ತದೆ. ಸರಕಾರ ಕೂಡಲೇ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಬಂಧಿಸಿ,ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಇಂತಹ ಘಟನಗಳು ಮರುಕಳುಹಿಸದಂತೆ ಎಚ್ಚರಿಕೆ ವಹಿಸಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದರು.

ವೈದ್ಯಕೀಯ ಶಿಕ್ಷಣ ಪಡೆಯುವುದು ಹುಡುಗಾಟದ ವಿಷಯವಲ್ಲ. ಸಾಕಷ್ಟು ಶ್ರಮವಹಿಸಿ ಈ ವೃತ್ತಿಯನ್ನು ಆರಿಸಿಕೊಂಡು ಬಂದಿರುತ್ತಾರೆ.ಜೀವ ಉಳಿಸುವ ವೈದ್ಯರ ಸ್ಥಿತಿಯೇ ಈಗಾದರೆ,ಜನಸಾಮಾನ್ಯರ ಪಾಡೇನು ಎಂಬ ಪ್ರಶ್ನೆ ಮೂಡುತ್ತದೆ.ಅಲ್ಲದೆ ವೈದ್ಯರ ಮೇಲಿನ ಹಲ್ಲೆ,ದೌರ್ಜನ್ಯ,ದಬ್ಬಾಳಿಕೆ ಹಾಗೂ ತಮ್ಮದಲ್ಲದೆ ತಪ್ಪಿಗೆ ವೈದ್ಯರು ಹಲ್ಲೆಗಳಿಗೆ ಗುರಿಯಾಗುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರಕ್ಕೆ ಬರುವ ಹೆಣ್ಣು ಮಕ್ಕಳ ಸಂಖ್ಯೆ ಸಹ ಕುಸಿದಿದೆ.ಇದು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ.ಹಾಗಾಗಿ ಸರಕಾರ ಕೂಡಲೇ ಸೂಕ್ತ ತನಿಖೆ ನಡೆಸಿ,ತಪಿತಸ್ಥರನ್ನು ಪತ್ತೆ ಹೆಚ್ಚಿ ಉಗ್ರವಾದ ಶಿಕ್ಷೆಗೆ ಗುರಿ ಪಡಿಸಬೇಕು.ಇದಕ್ಕಾಗಿ ಸೂಕ್ತ ಕಾಯ್ದೆಯೊಂದನ್ನು ಜಾರಿಗೆ ತರಬೇಕೆಂಬುದು ನಮ್ಮಗಳ ಆಗ್ರಹವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೈದ್ಯಕೀಯ ಕ್ಷೇತ್ರದ ಮಹಿಳೆಯರು ಸೇರಿದಂತೆ ಎಲ್ಲಾ ಕ್ಷೇತ್ರಗಳ ಮಹಿಳೆಯರ ಸಂರಕ್ಷಣೆಯ ದೃಷ್ಟಿಯಿಂದ ಸರಕಾರ ತಜ್ಞರು ಸಲಹೆ ಪಡೆದು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.ಈ ರೀತಿ ಘಟನೆಗಳು ಮಹಿಳೆಯರು ಮೇಲೆ ನಡೆಯುತ್ತಿರುವ ಅತ್ಯಂತ ದುರದೃಷ್ಟಕರ ಸಂಗತಿಯಾಗಿದೆ. ನಮ್ಮ ಸಮಾಜ ಎತ್ತ ಸಾಗುತ್ತಿದೆ ಎಂಬುದರ ಪ್ರತಿಬಿಂಬವಾಗಿದೆ. ಹಾಗಾಗಿ ಸರಕಾರ ಮತ್ತು ಸಂಸ್ಥೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬುದು ನಮ್ಮಗಳ ಒತ್ತಾಯವಾಗಿದೆ ಎಂದರು.

ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ಬಾ.ಹ.ರಮಾಕುಮಾರಿ ಮಾತನಾಡಿ, ಸಮಾಜದಲ್ಲಿ ಹೆಣ್ಣು ಮಕ್ಕಳ ಸುರಕ್ಷತೆಯ ಬಗ್ಗೆ ಮನ ಪರಿವರ್ತನೆಯಾಗಬೇಕಿದೆ.ಆಗಸ್ಟ್ 08ರ ಘಟನೆ ಲಿಂಗತಾರತಮ್ಮದ ಪ್ರತೀಕವಾಗಿದೆ.ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಗದ ಹೊರತು ಇಂತಹ ಘಟನೆಗಳ ನಿಲ್ಲಲ್ಲು ಸಾಧ್ಯವಿಲ್ಲ. ಹಾಗಾಗಿ ಶಾಲೆಗಳಲ್ಲಿ, ಮನೆಯಲ್ಲಿಯೇ ಹೆಣ್ಣು, ಗಂಡನ್ನು ನೋಡುವ ದೃಷ್ಟಿಕೋನದಲ್ಲಿ ಅಮೂಲಾಗ್ರ ಬದಲಾವಣೆ ಆಗಬೇಕಿದೆ.ಈ ಘಟನೆಯ ವಿರುದ್ದ ಎಲ್ಲರೂ ಹೋರಾಟಕ್ಕೆ ಇಳಿದು ಆಳುವ ಸರಕಾರಗಳಿಗೆ ಪ್ರತಿರೋಧದ ದ್ವನಿ ತಟ್ಟುವಂತೆ ಮಾಡಬೇಕೆಂದರು.

ಸುದ್ದಿಗೋಷ್ಠಿಯ ನಂತರ ನಗರದ ಟೌನ್‌ಹಾಲ್ ವೃತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಡಾ.ಮೌಮಿತಾ ದೆಬನಾಥ್ ಮೇಲಿನ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ, ಆಕೆಯ ಸಾವಿಗೆ ಸಂಪಾತ ಸೂಚಿಸಿ ಮೇಣದ ಬತ್ತಿ ಹಚ್ಚಲಾಯಿತು.

ಐಎಂಎ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಮಹೇಶ್,ಡಾ.ಡಿ.ಹನುಮಕ್ಕ, ಐಎಂಎ ಮಹಿಳಾ ಘಟಕದ ಡಾ.ಅನಿತಾ ಬಿಗೌಡ, ಡಾ.ಶೃತಿ.ಕೆ ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...