ತುಮಕೂರು | ನೈಜ ಹೋರಾಟಗಾರರ ವೇದಿಕೆ ದೂರು; 5 ದಶಕಗಳ ಬಳಿಕ ಗಂಗಸಂದ್ರಕ್ಕೆ ಬಂತು ಕುಡಿಯುವ ನೀರು

Date:

ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ 11ನೇ ವಾರ್ಡ್ ಕೆರೆ ಅಂಚಿನಲ್ಲಿ ವಾಸಿಸುತ್ತಿರುವ ನಿರ್ಗತಿಕ ಕುಟುಂಬಗಳು ವಾಸಿಸುವ ಸ್ಥಳದಲ್ಲಿ ತುಮಕೂರು ಮಹಾನಗರ ಪಾಲಿಕೆ ನೀರಿನ ಟ್ಯಾಂಕ್ ಅಳವಡಿಸಲು ಕ್ರಮ ವಹಿಸಿ ನೀರಿನ ಬವಣೆಯನ್ನು ನೀಗಿಸಿದೆ.

ನೈಜ ಹೋರಾಟಗಾರರ ವೇದಿಕೆಯ ಸದಸ್ಯರು ಮಾನವ ಹಕ್ಕುಗಳ ಆಯೋಗಕ್ಕೆ ಈ ಬಗ್ಗೆ ಫೆಬ್ರವರಿ 11ರಂದು ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ಮಾನವ ಹಕ್ಕುಗಳ ಸದಸ್ಯ ಕಾರ್ಯದರ್ಶಿ ಶ್ಯಾಮ್ ಭಟ್ಟ ಅವರು ಸ್ಥಳಕ್ಕೆ ಆಗಮಿಸಿ ಕೂಡಲೇ ಕುಡಿಯುವ ನೀರಿನ ಸೌಲಭ್ಯ ಒದಗಿಸುವಂತೆ ತುಮಕೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದರು. ಇದರ ಪರಿಣಾಮವಾಗಿ ಐದು ದಶಕಗಳಿಂದ ನೀರಿನ ಸೌಲಭ್ಯ ಇಲ್ಲದೆ ಬಳಲುತ್ತಿರುವ ನಿರ್ಗತಿಕ ಏಳು ಕುಟುಂಬಗಳಿಗೆ ಈಗ ಕುಡಿಯುವ ನೀರಿನ ಸೌಲಭ್ಯ ದೊರಕಿದೆ.

ಮೂಲಸೌಕರ್ಯ ಮರೀಚಿಕೆ 3

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮಗೆ ನೀರಿಲ್ಲದೆ ಸ್ನಾನ ಮಾಡಿ ಅದೆಷ್ಟೋ ದಿನಗಳಾಗಿದ್ದವು. ಇಂದು ಮನಸಾರೆ ನಾವು ನಮ್ಮ ಮಕ್ಕಳು ಸ್ನಾನ ಮಾಡುತ್ತೇವೆ” ಎನ್ನುತ್ತಾರೆ ಇಲ್ಲಿನ ಸ್ಥಳೀಯರು. ನೀರು ಬಂದ ಸಂಭ್ರಮವನ್ನುಅಲ್ಲಿನ ಮಹಿಳೆಯರು ಸಂತಸ ಹಂಚಿಕೊಂಡಿದ್ದಾರೆ.

ಮೂಲಸೌಕರ್ಯ ಮರೀಚಿಕೆ 1 1

ನೈಜ ಹೋರಾಟಗಾರ ವೇದಿಕೆಯ ಹಂದ್ರಾಳ್ ನಾಗಭೂಷಣ್ ಮಾತನಾಡಿ, “ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಶುದ್ಧ ಕುಡಿಯುವ ನೀರನ್ನು ಸರ್ಕಾರ ಈವರೆಗೂ ಒದಗಿಸದೇ ಇರುವುದು ದುರಾದೃಷ್ಟಕರ. ಈ ಬಗ್ಗೆ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ನಂತರ ನಗರಸಭೆ ಎಚ್ಚೆತ್ತುಕೊಂಡಿರುವುದು ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಮರೀಚಿಕೆಯಾದ ಮೂಲಸೌಕರ್ಯ, ಚುನಾವಣೆ ಬಂದಾಗ ನೆನಪಾಗುವ ವಾರ್ಡ್‌

“ವಸತಿ ರಹಿತ ಏಳು ಕುಟುಂಬಗಳಿಗೆ ತಕ್ಷಣ ನಿವೇಶನ ನೀಡಿ ಮನೆ ನಿರ್ಮಿಸಿ ಕೊಡಬೇಕು” ಎಂದು ಹಿರಿಯ ಸಾಮಾಜಿಕ ಹೋರಾಟಗಾರ ಎಚ್ ಎಂ ವೆಂಕಟೇಶ್ ಒತ್ತಾಯಿಸಿದರು.

“ಈ ಕುಟುಂಬಗಳಿಗೆ ಕುಡಿಯುವ ನೀರು ಒದಗಿಸಲು ಹೋರಾಟ ಮಾಡಬೇಕಾಗಿ ಬಂದಿದ್ದು ದುರಾದೃಷ್ಟಕರ. ದನಿ ಇಲ್ಲದವರ ದನಿಯಾಗಿ ನೈಜ ಹೋರಾಟಗಾರರ ವೇದಿಕೆಯು ರಾಜ್ಯದಲ್ಲಿ ಕೆಲಸ ಮಾಡುತ್ತಿದೆ” ಎಂದು ಎಚ್ ರಾಜು ಮತ್ತು ಕುಣಿಗಲ್ ನರಸಿಂಹಮೂರ್ತಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...