ತುಮಕೂರು | ಒಳಮೀಸಲಾತಿ : ಒಲವು-ನಿಲುವು ಕೃತಿ ಲೋಕಾರ್ಪಣೆ

Date:

ತುಮಕೂರು ನಗರದ ರವೀಂದ್ರ ಕಲಾ ನಿಕೇತನ ಸಭಾಂಗಣದಲ್ಲಿ ಭಾನುವಾರ ಪ್ರೊ. ಎಲ್. ಮಣಿಗಯ್ಯ ಅವರ ಒಳಮೀಸಲಾತಿ ಒಲವು, ನಿಲುವು ಕೃತಿಯನ್ನು ಬೆಂಗಳೂರು ವಿಶ್ವವಿದ್ಯಾನಿಲಯದ ಬಾಬು ಜಗಜೀವನರಾಮ್ ಅಧ್ಯಾಯನ ಕೇಂದ್ರದ ನಿರ್ದೇಶಕ ಪ್ರೊ. ಬಿ. ಗಂಗಾಧರ ಬಿಡುಗಡೆ ಮಾಡಿದರು.

ಯಾವುದೇ ಪೂರ್ವಗ್ರಹವಿಲ್ಲದೆ ಒಳಮೀಸಲಾತಿ ಒಲವು, ನಿಲುವು ಕೃತಿಯನ್ನು  ರಚಿಸಿರುವ ಮಣಿಗಯ್ಯ ಅವರು ವೈಜ್ಞಾನಿಕವಾಗಿ ದಲಿತರನ್ನು ವರ್ಗಿಕರಣ ಮಾಡುವ ಮೂಲಕ ವಸ್ತಾವದ ಸಂಗತಿ ಆಧಾರಿಸಿ ರಚಿತವಾಗಿರುವ ಈ ಕೃತಿಯಿಂದ ಓದುಗರಿಗೆ ದಲಿತರು ಹೇಗಿರಬೇಕು ಎಂಬ ಪ್ರಶ್ನೆ ಮೂಡಿಸುತ್ತದೆ. ಉದ್ದೇಶಪೂರ್ವಕವಾಗಿ ಕೆಲವರು ಒಳಮೀಸಲಾತಿ ವಿರೋಧಿಸುವ ಮೂಲಕ ಸಾಮಾಜಿಕವಾಗಿ ಬಿಡುಗಡೆ ಪಡೆಯಬೇಕಿದ್ದ ಸಮುದಾಗಳನ್ನು ಅಂಚಿಗೆ ತಳ್ಳುತ್ತಿದ್ದಾರೆ ಎಂದು ಪ್ರೊ. ಬಿ. ಗಂಗಾಧರ ಹೇಳಿದರು.

ತಮಕೂರು ವಿವಿ ವಿಜ್ಙಾನ ಕಾಲೇಜಿನ ಸಹಾಯಕ ಪ್ರಧ್ಯಾಪಕ ಡಾ. ನಾಗಭೂಷಣ್ ಬಗ್ಗನಡು ಮಾತನಾಡಿ ಒಳಮೀಸಲಾತಿ ಒಲವು ನಿಲುವು ಕೃತಿಯನ್ನು ಲೇಖಕರು ಸಮುದಾಯದ ಅಂತರ ಕಾಯ್ದುಕೊಂಡು ಬಲು ಎಚ್ಚರದಿಂದ ಕೃತಿ ರಚಿಸಿದ್ದಾರೆ. ಒಳಮೀಸಲಾತಿ, ಜಾತಿಶ್ರೇಣಿಕರಣ, ಸಾಮಾಜಿಕ ಆಯಾಮಗಳನ್ನು ಒಳಗೊಂಡಂತೆ ಸಸಮಕಾಲೀನ ರಾಜಕಾರಣದ ಬಗ್ಗೆಯೂ ಕೃತಿಯಲ್ಲಿ ಅವಲೋಕಿಸಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಂತಕ ದೊರೆರಾಜ್ ಮಾತನಾಡಿ ಶೋಷಿತ ಸಮುದಾಯಗಳ ಒಟ್ಟುಗೂಡಿಸಿದಾಗ ಮಾತ್ರ ಶೋಷಣೆಗಳಿಂದ ಹೊರಬರಲು ಸಾಧ್ಯ. ಒಳಮೀಸಲಾತಿ ಒಪ್ಪಿಕಕೊಂಡು ಛಿದ್ರಿಕರಣದಿಂದ ಏಕೀಕರಣದಕಡೆ  ಹೋಗಬೇಕು. ದ್ವೇಷ, ಅಸೂಯೆ ಮೀರಿ ಬುದ್ಧ ಚಿಂತನೆ ಬೆಳಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಪ್ರೊ. ಮ.ಲ.ನ ಮೂರ್ತಿ, ಲೇಖಕ ತುಂಬಾಡಿ ರಾಮಯ್ಯ, ಡಿಎಸ್ ಎಸ್ ಮುಖಂಡ ವೀರುಪಾಕ್ಷ ಡ್ಯಾಗೇರಹಳ್ಳಿ, ಓ. ನಾಗರಾಜ್, ಪ್ರೊ. ಮಣಿಗಯ್ಯ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...