ತುಮಕೂರು | ಎಸ್‌ಸಿ, ಎಸ್‌ಟಿ ಕಾಲೋನಿಗಳಿಗೆ ಸರಳ ಖಾತಾ ಆಂದೋಲನ ಸಭೆ : ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಸಭೆ ಬಹಿಷ್ಕಾರ

Date:

 ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35 ವಾರ್ಡ್ ಗಳಲ್ಲಿರುವ ಎಸ್‌ಸಿ, ಎಸ್‌ಟಿ ಸಮುದಾಯಗಳು ವಾಸಿಸುವ ಕಾಲೋನಿಗಳ ನಿವೇಶನ, ಕಟ್ಟಡ, ಆಸ್ತಿ ಸಂಖ್ಯೆ ಕುರಿತು ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆ ನಿರ್ಣಯದಂತೆ ಇಂದು ಮಹಾನಗರ ಪಾಲಿಕೆ ಆಯುಕ್ತರು ದಲಿತ ಸಂಘಟನೆಗಳ ಮತ್ತು ಮುಖಂಡರ ಸಭೆಯನ್ನು ಇಂದು ಪಾಲಿಕೆಯ ಸಭಾಂಗಣದಲ್ಲಿ ಕರೆದಿದ್ದರು, ಸಭೆ  11.45 ಆದರೂ ಪ್ರಾರಂಭವಾಗಲಿಲ್ಲ. ಆಯುಕ್ತರು ಕಾರ್ಯನಿಮಿತ್ತ ಬೆಂಗಳೂರು ಸಭೆಗೆ ತೆರಳಿದ್ದು ಅವರ ಅನುಪಸ್ಥಿತಿಯಲ್ಲಿ ಕಾಟಾಚಾರಕ್ಕೆ ನಗರಪಾಲಿಕೆ ಕಂದಾಯ ಉಪ ಆಯುಕ್ತ ರುದ್ರಮುನಿ, ವಲಯ ಆಯುಕ್ತ ನಾಗಭೂಷಣ್, ಶಿವಾನಂದ್ ಹಾಜರಾಗಿ ಸರಳಖಾತೆ ಮಾಡಲು ತಮ್ಮ ಅಭಿಪ್ರಾಯ ತಿಳಿಸುವಂತೆ ಕೇಳಿದರು, ಸಭೆಗೆ ಯಾವುದೇ ಪೂರ್ವ ತಯಾರಿ ಇಲ್ಲದೆ ಕಾಟಾಚಾರಕ್ಕೆ ಈ ಸಭೆಯನ್ನು ಕರೆದಿರುವುದು ಎಸ್‌ಸಿ, ಎಸ್‌ಟಿ ಸಮುದಾಯವನ್ನು ಅಪಮಾನಿಸಿದಂತೆ ಆಯುಕ್ತರು ಉಪಸ್ಥಿತಿಯಲ್ಲೇ ಕರೆದು 2007ರಲ್ಲಿ ಮತ್ತು 2016-17ರಲ್ಲಿ ಆಗಿರುವ ಕ್ರಿಯಾಯೋಜನೆಯಡಿ ಸರಳಖಾತೆ ಆಂದೋಲನದ ಮಾಹಿತಿ ಮತ್ತು ಇ-ಸ್ವತ್ತು ಮುಂದುವರಿಸುವ ನಿರ್ಣಯದೊಂದಿಗೆ ಬರಬೇಕೆಂದು ಸಂಘಟನೆಗಳ ಮುಖಂಡರು ಪಟ್ಟು ಹಿಡಿದರು, ಉಪಆಯುಕ್ತರ ಬೇಜವಾಬ್ದಾರಿ ಉತ್ತರಕ್ಕೆ ಆಕ್ರೋಶ ವ್ಯಕ್ತಪಡಿಸಿ ಸಭೆಯಿಂದ ಹೊರನಡೆದು ಮಹಾ ನಗರ ಪಾಲಿಕೆ ವಿರುದ್ಧ ಘೋಷಣೆ ಕೂಗಿ ಸಭೆಯನ್ನು ಬಹಿಷ್ಕರಿಸಲಾಯಿತು. 

ಸಭೆ ಬಹಿಷ್ಕರಿಸಿ ಮಾತನಾಡಿದ ಸ್ಲಂ ಜನಾಂದೋಲನ ಸಂಘಟನೆಯ ಸಂಚಾಲಕ ಎ.ನರಸಿಂಹಮೂರ್ತಿ ಮಾತನಾಡಿ  ಇಂದಿನ ಸಭೆಗೆ ಎಲ್ಲಾ ಕೆಲಸಗಳನ್ನು ಬಿಟ್ಟು ಮುಖಂಡರು ಬಂದಿದ್ದೇವೆ 2 ದಶಕಗಳ ನಿರಂತರ ಬೇಡಿಕೆಗೆ ನಗರಪಾಲಿಕೆ ತಾರ್ಕಿಕ ಅಂತ್ಯವನ್ನು ನೀಡುತ್ತಿಲ್ಲ, 35 ವಾರ್ಡ್ಗಳಲ್ಲಿ 28ಕ್ಕೂ ಹೆಚ್ಚು ಎಸ್‌ಸಿ/ಎಸ್‌ಟಿ ಕಾಲೋನಿಗಳಿದ್ದು ಇಲ್ಲಿ ಬಹುತೇಕವಾಗಿ ತಾತ ಮುತ್ತಾತರ ಹೆಸರಿನಲ್ಲಿ ಖಾತೆಯಿದ್ದು ಇವುಗಳನ್ನು ಸ್ಥಳ ಪರಿಶೀಲನೆ ಮಾಡಿ ಪೌತಿ ವಾರಸುದಾರಿಕೆ ಮೇರೆಗೆ ವಿಶೇಷ ಪ್ರಕರಣದಡಿಯಲ್ಲಿ ಆಸ್ತಿ ಸಂಖ್ಯೆ ನೀಡಿರುವ ಸ್ವತ್ತನ್ನು ಇ-ಸ್ವತ್ತಿಗೆ ಪರಿವರ್ತಿಸಿ ಕೊಡಬೇಕು, ಒಟ್ಟಾರೆ ಎಸ್‌ಸಿ/ಎಸ್‌ಟಿಗಳಿಗೆ ಈ ಸಭೆ ಅಪಮಾನಿಸಿದೆ, ಏಕೇಂದರೇ ತುಮಕೂರು ಮಹಾನಗರ ಪಾಲಿಕೆ ನಗರದ ನಾಗರೀಕರಿಗೆ ಸೇವೆ ನೀಡಲು ಇರುವ ಸ್ವಾಯತ್ತ ಸಂಸ್ಥೆ ಈ ನಾಗರೀಕರಲ್ಲಿ ಎಸ್‌ಸಿ/ಎಸ್‌ಟಿಗಳು ನಾಗರೀಕರಲ್ಲವೇ..? ಹಾಗಾಗಿ ಆಯುಕ್ತರು ಈ ಬಗ್ಗೆ 7 ದಿನಗಳಲ್ಲಿ ಸಭೆ ಕರೆದು ಖುದ್ದು ಈ ಸಮಸ್ಯೆಗೆ ಪರಿಹಾರ ಕಂಡುಕೊಡಬೇಕೆಂದು ಆಗ್ರಹಿಸಿದರು. 

ದಲಿತ ಸಂಘಟನೆಯ ಪಿ.ಎನ್ ರಾಮಯ್ಯ ಮಾತನಾಡಿ ದಲಿತರ ಕುಂದು ಕೊರತೆ ಸಭೆ ಕರೆದು ಅಧಿಕಾರಿಗಳು ಯಾರು ಸಭೆಗೆ ಬಂದಿರುವುದಿಲ್ಲ ಇದು ಅಕ್ಷಮ್ಯ, ಇಂತಹ ದಲಿತ ವಿರೋಧಿ ಅಧಿಕಾರಿಗಳ ಮೇಲೆ ಜಿಲ್ಲಾ ಉಸ್ತುವಾರಿ ಸಚಿವರು ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಹೋರಾಟ ರೂಪಿಸಲಾಗುವುದೆಂದು ಆಗ್ರಹಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಛಲವಾದಿ ಮಹಾಸಭಾದ ರಂಗಯ್ಯ ಮತ್ತು ನಾಗೇಶ್ ಮಾತನಾಡಿ ಎಸ್‌ಸಿಪಿ/ಟಿಎಸ್‌ಪಿ ಅನುಧಾನದಲ್ಲಿ ಅನುಮೋದನೆಗೊಂಡಿರುವ ಕಾಮಗಾರಿಗಳನ್ನು ಮಾಡದೇ ನಿರ್ಲಕ್ಷö್ಯವಹಿಸಿದ್ದಾರೆ, ದಲಿತ ಕಾಲೋನಿಗಳಲ್ಲಿ ಹಲವಾರು ಸಮಸ್ಯೆಗಳಿವೆ ಇವುಗಳ ಪರಿಹಾರಕ್ಕೆ ಆಯುಕ್ತರು ಮುಂದಾಗಬೇಕೆAದರು ತಪ್ಪಿದಲ್ಲಿ ಪರಿಶಿಷ್ಟ ಜಾತಿ/ಪಂಗಡ ನಿರ್ಲಕ್ಷö್ಯ ನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗುವುದು ಎಂದರು.

ಮಾಜಿ ನಗರಸಭೆ ಉಪಾಧ್ಯಕ್ಷ ಹನುಮಂತರಾಯಪ್ಪ, ದಲಿತ ಸೇನೆಯ ಗಣೇಶ್, ಚರ್ಮ ಕುಶಲಕರ್ಮಿ ಸಂಘದ ಗೋಪಾಲ್, ಅಂಬೇಡ್ಕರ್ ಸಂಘದ ಮೂರ್ತಿ, ಮಾದಿಗ ದಂಡೋರ ಸಂಘಟನೆಯ ಲಕ್ಷ್ಮೀ ದೇವಮ್ಮ, ತುಮಕೂರು ಸ್ಲಂ ಸಮಿತಿಯ ಅರುಣ್, ಕೃಷ್ಣಮೂರ್ತಿ, ಮನೋಜ್, ಎನ್,ಆರ್ ಕಾಲೋನಿ ಬಾಬು ಜಗಜೀವನ್‌ರಾಂ ಸಂಘದ ಕಿರಣ್, ಒನಕೆ ಓಬ್ಬವ್ವನ ಸಂಘದ ವಿಜಯಲಕ್ಷ್ಮೀ , ಛಲವಾದಿ ಮಹಾಸಭಾದ ಶೇಖರ್, ಹೆಗ್ಗೆರೆ ಕೃಷ್ಣಮೂರ್ತಿ, ವಿ.ನಾಗೇಶ್ ಮುಂತಾದವರು ಭಾಗವಹಿಸಿದ್ದರು.  

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...