ತುಮಕೂರು | ತ್ರಿಪದಿ ವಚನ ರಚಿಸಿದ ಸರ್ವಜ್ಞ ಜಗತ್ತಿಗೆ ದಾರಿದೀಪ: ಸಿದ್ದೇಶ್ ಎಂ

Date:

ವಿಶ್ವಕ್ಕೆ ದಾರಿ ದೀಪವಾಗಿರುವ ಸರ್ವಜ್ಞರ ತ್ರಿಪದಿ ವಚನಗಳು ಜೀವನದ ಮೌಲ್ಯಗಳನ್ನು ಕಲಿಸುತ್ತವೆ ಎಂದು ತುಮಕೂರು ತಾಲೂಕು ತಹಶೀಲ್ದಾರ್ ಸಿದ್ದೇಶ್ ಎಂ ಹೇಳಿದರು.

ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕುಂಬಾರರ ಸಂಘದಿಂದ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆಯಲ್ಲಿ ಮಾತನಾಡಿದರು.

“ಸರ್ವಜ್ಞರು ತಮ್ಮ ವಚನಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ. ಅವರ ವಚನಗಳಲ್ಲಿ ಗುರು-ಶಿಷ್ಯರು, ಕಾಯಕ ಪರಂಪರೆ, ಜಾತಿ ವ್ಯವಸ್ಥೆ, ಆಹಾರ ಪದ್ಧತಿ, ರಾಜಕೀಯ, ಸಮಾಜದ ಅನಿಷ್ಟ ಪದ್ಧತಿಗಳು ಹೀಗೆ ಎಲ್ಲ ಕ್ಷೇತ್ರಗಳ ಬಗ್ಗೆ ತಿಳುವಳಿಕೆಯ ಸಂದೇಶವನ್ನು ನೀಡಿದ್ದಾರೆ. ಸರ್ವಜ್ಞರ ವಚನಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿದ್ದಲಿಂಗಪ್ಪ ಮಾತನಾಡಿ, “ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸರ್ವಜ್ಞರ ಕೊಡುಗೆ ಅಪಾರ. ಜಾತಿ ಪದ್ಧತಿಯ ಬಗ್ಗೆ ಬಹಳ ಸೂಕ್ಷ್ಮವಾಗಿ ತಿಳಿ ಹೇಳಿದ್ದಾರೆ. ಅವರ ವಚನಗಳ ಸತ್ವ ಮತ್ತು ಅವುಗಳ ಮಹತ್ವವನ್ನು ಎಲ್ಲರಿಗೂ ತಿಳಿಸಬೇಕು” ಎಂದರು.

“ಸದಾ ಮಣ್ಣಿನೊಟ್ಟಿಗೆ ಜೀವನ ಕಳೆಯುವ ನಿಜವಾದ ಮಣ್ಣಿನ ಮಕ್ಕಳಾದ ಕುಂಬಾರ ಸಮುದಾಯದವರು ಆಧುನಿಕತೆಗೆ ತಕ್ಕಂತೆ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಬೇಕು” ಎಂದು ತಿಳಿಸಿದರು.

ಸಾಹಿತಿ ಕೃಷ್ಣತಿಪ್ಪೂರು ಅವರು ಉಪನ್ಯಾಸ ನೀಡಿ ಮಾತನಾಡಿ, “ಸರ್ವಜ್ಞ ಒಬ್ಬ ದಾರ್ಶನಿಕ ಕವಿ. ತನ್ನ ವಚನಗಳ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ತಿದ್ದಿದವರು. ಸರ್ವಜ್ಞ ಅವರನ್ನು ಒಬ್ಬ ಪ್ರವಾದಿ, ಅಲೆಮಾರಿ ಸಂತ ಎಂತಲೂ ಕರೆಯಬಹುದಾಗಿದೆ” ಎಂದರು.

“ಸರ್ವಜ್ಞ ಒಬ್ಬ ಅಪ್ಪಟ ಕನ್ನಡದ ಕವಿ. ತನ್ನ ವಚನಗಳನ್ನು ಎಲ್ಲಿಯೂ ಕೂಡ ಬರವಣಿಗೆಯಲ್ಲಿ ಬರೆದಿಲ್ಲ. ಅವರ 2000 ವಚನಗಳನ್ನು ಸಂಶೋಧಿಸಿ, ಸಂರಕ್ಷಿಸಿದ ಕೀರ್ತಿ ಉತ್ತಂಗಿ ಚನ್ನಪ್ಪ ಅವರಿಗೆ ಸಲ್ಲುತ್ತದೆ. ಅವರು ಈ ವಚನಗಳನ್ನು ಸಂರಕ್ಷಿಸದಿದ್ದರೆ ಜೀವನದ ಮೌಲ್ಯಗಳ ಬಗ್ಗೆ ಅರಿಯಲು ಸಾಧ್ಯವಾಗುತ್ತಿರಲಿಲ್ಲ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಾರ್ವಜನಿಕ ವಲಯದಲ್ಲಿ ʼಸಂವಿಧಾನ ಜಾಥಾʼಕ್ಕೆ ಉತ್ತಮ ಸ್ಪಂದನೆ: ಜಿಲ್ಲಾಧಿಕಾರಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ ಎಂ ರವಿಕುಮಾರ್, ಕುಂಬಾರ ಸಂಘದ ಅಧ್ಯಕ್ಷ ಎನ್ ಶ್ರೀನಿವಾಸ್, ಕುಂಬೇಶ್ವರ ಹಿಂದುಳಿದ ವರ್ಗಗಳ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ರಘುರಾಮಯ್ಯ, ಕುಂಭೇಶ್ವರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ರಾಧ ಅಶ್ವತ್ಥಪ್ಪ, ಎಸ್ ಆರ್ ದೇವಪ್ರಕಾಶ್, ಅಶ್ವತ್ಥಪ್ಪ, ಸುಬ್ಬರಾಯಪ್ಪ, ಕುಂಬಾರ ಸಂಘದ ನಿರ್ದೇಶಕ ಬಿ ಆರ್ ಶಿವಕುಮಾರ್ ಬಂಡಿಹಳ್ಳಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಮುದಾಯದ ಮುಖಂಡರು ಮತ್ತು ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...