ತುಮಕೂರು | ಮುಜರಾಯಿ ದೇವಸ್ಥಾನದ ಜಮೀನು ಉಳಿಸಿ: ಚೌಕೇನಹಳ್ಳಿ ಗ್ರಾಮಸ್ಥರ ಮನವಿ

Date:

ಐತಿಹಾಸಿಕ ದೇವಾಲಯಗಳ ಅಭಿವೃದ್ಧಿಗೆ ಬಳಕೆಯಾಗುತ್ತಿದ್ದ ಕೊಡುಗೆ ಜಮೀನು ಮತ್ತೊಬ್ಬರಿಗೆ ಮಾರಾಟವಾಗುತ್ತಿದೆ. ದೇವಸ್ಥಾನದ ಜಮೀನು ದೇವಾಲಯದ ಆಸ್ತಿಯಾಗಿಯೇ ಉಳಿಯಲಿ ಎಂದು ತುಮಕೂರು ತಹಶೀಲ್ದಾರ್ ಬಿ ಆರತಿ ಅವರಿಗೆ ಗುಬ್ಬಿ ತಾಲೂಕಿನ ಕಸಬಾ ಹೋಬಳಿ ಚೌಕೇನಹಳ್ಳಿ ಗ್ರಾಮಸ್ಥರು ಮನವಿ ಸಲ್ಲಿಸಿದರು.

ಚೌಕೇನಹಳ್ಳಿ ಗ್ರಾಮದ ಇತಿಹಾಸಯುಳ್ಳ ಶ್ರೀ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಸಂಬಂಧಿಸಿದ ಸುಮಾರು ಐದು ಎಕರೆ ಜಮೀನು ಕೊಡುಗೆಯಾಗಿ ಅರ್ಚಕರ ಕುಟುಂಬಕ್ಕೆ ಸೇರಿದೆ. ದೇವಾಲಯದ ಕೈಂಕರ್ಯ ಮಾಡಿಕೊಂಡು ನಿತ್ಯ ಪೂಜೆ, ಜಾತ್ರೆ ಇನ್ನಿತರ ಎಲ್ಲ ಧಾರ್ಮಿಕ ಕಾರ್ಯಕ್ರಮಗಳು ನಡೆಸುವ ಕುಟುಂಬದ ಜೀವನಕ್ಕೆ ಆಧಾರವಾಗಿರುವ ಈ ಜಮೀನಿನ ಪೈಕಿ ಒಂದು ಎಕರೆ ಮಾರಾಟವಾಗಿ ಕಾನೂನು ರೀತ್ಯಾ ದಾಖಲೆ ಸಿದ್ಧವಾಗುವ ವಿಚಾರ ತಿಳಿದುಬಂದಿದೆ. ಇದನ್ನರಿತ ಗ್ರಾಮಸ್ಥರು ದೇವಾಲಯದ ಅಭಿವೃದ್ಧಿಗೆ ಈ ಜಮೀನು ಬಳಕೆಯಾಗಬೇಕು ಅಥವಾ ಅಲ್ಲಿನ ಅರ್ಚಕರ ಜೀವನಕ್ಕೆ ಬಳಕೆಯಾಗಬೇಕು. ಆದರೆ ಮಾರುಕಟ್ಟೆ ಬೆಲೆಗೆ ಲಕ್ಷಾಂತರ ರೂ.ಗಳಿಗೆ ಮಾರಾಟವಾಗುವುದು ಸರಿ ಎನಿಸಲಿಲ್ಲ. ದೇವಾಲಯಕ್ಕೆ ಕೊಡುಗೆ ಜಮೀನು ಉಳಿಸಿ ಎಂದು ತಹಶೀಲ್ದಾರ್ ಬಳಿ ಚರ್ಚಿಸಿದರು.

“ಕಾನೂನು ರೀತ್ಯಾ ಪರಭಾರೆ ಆಗಿದ್ದರೂ ದೇವಾಲಯದ ಅಭಿವೃದ್ಧಿಗೆ ಪೂರಕವಲ್ಲದ ಈ ಘಟನೆ ಇಡೀ ಗ್ರಾಮಕ್ಕೆ ಬೇಸರ ತಂದಿದೆ. ಅರ್ಚಕರ ಜೀವನಕ್ಕೆ ಕೊಡುಗೆ ಜಮೀನು ಉಳಿಸಿಕೊಳ್ಳಬೇಕಿದೆ. ಆದರೆ ಮತ್ತೊಬ್ಬರಿಗೆ ಮಾರಾಟ ಮಾಡುವುದು ಸೂಕ್ತವಲ್ಲ. ಈ ನಿಟ್ಟಿನಲ್ಲಿ ಮುಜರಾಯಿ ಇಲಾಖೆಯ ದೇವಾಲಯ ಅಭಿವೃದ್ಧಿಗೆ ಇರುವ ಕೊಡುಗೆ ಜಮೀನುಗಳನ್ನು ದೇವಾಲಯದ ಆಸ್ತಿ ಎಂದು ಘೋಷಣೆ ಮಾಡಿ ಜಮೀನು ಉಳಿಸಿ ಗ್ರಾಮಗಳ ಪುರಾತನ ದೇವಾಲಯ ಬೆಳೆಸಬೇಕು” ಎಂದು ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾವೇರಿ | ಸ್ಮಶಾನವಿಲ್ಲದೆ ಅರಣ್ಯ, ಕೆರೆ ದಂಡೆ, ಕಾಡಿನ ಬದಿ, ಜಮೀನುಗಳಲ್ಲಿ ಶವ ಸಂಸ್ಕಾರ

“ಜಿಲ್ಲಾಡಳಿತವೂ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರದ ಮೂಲಕ ಮುಜರಾಯಿ ದೇವಾಲಯದ ಕೊಡುಗೆ ಜಮೀನು ದೇವಾಲಯಕ್ಕೆ ಉಳಿಸಬೇಕು” ಎಂದು ಚೌಕೇನಹಳ್ಳಿ ಗ್ರಾಮಸ್ಥರು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...