ತುಮಕೂರು | ಸಿದ್ದರಾಮಯ್ಯ ಅವರಿಗೆ ರೈಲ್ವೆ ಪ್ರಯಾಣ ದರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ : ವಿ.ಸೋಮಣ್ಣ

Date:

ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಯಿಂದ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಹತ್ತು ಪಟ್ಟು ಹೆಚ್ಚಿಸಿ ಬಡವರು, ಮಧ್ಯಮ ವರ್ಗದ ಬದುಕು ದುಸ್ಥರಗೊಳಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ರೈಲ್ವೆ ಪ್ರಯಾಣ ದರ ಹೆಚ್ಚಳದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕೇಂದ್ರದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಟಾಂಗ್ ನೀಡಿದರು.

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ನಂದಿಹಳ್ಳಿ ಗೇಟ್ ಬಳಿ ಆಯೋಜಿಸಿದ್ದ 36.29 ಕೋಟಿ ರೂಗಳ ಎಲ್ ಸಿ 59 ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು ರೈಲ್ವೆ ಇಲಾಖೆ ಕಳೆದ 11 ವರ್ಷದಿಂದ ಬೆಲೆ ಏರಿಕೆ ಮಾಡರಲಿಲ್ಲ. ಈಗ ಶೇಕಡಾ 1 ರಷ್ಟು ಬೆಲೆಯನ್ನು 500 ಕಿಮೀ ನಂತರದ ದೂರ ಪ್ರಯಾಣಕ್ಕೆ ಹೆಚ್ಚಿಸಿದ್ದೇವೆ ಅಷ್ಟೇ. ಆದರೆ ರಾಜ್ಯ ಸರ್ಕಾರ ಶೇ.40 ರಷ್ಟು ಮೆಟ್ರೋ ಹಾಗೂ ಶೇ.20 ರಷ್ಟು ಸರ್ಕಾರಿ ಬಸ್ಸಿನ ದರ ಹೆಚ್ಚಿಸಿ ಪ್ರಯಾಣಿಕರಿಗೆ ಅನ್ಯಾಯ ಮಾಡಿದ್ದಲ್ಲದೆ ಎಲ್ಲಾ ಇಲಾಖೆಯ ದರವನ್ನು ಹೆಚ್ಚಿಸಿದ್ದೀರಿ ಎಂದು ಗುಡುಗಿದರು.

ಪ್ರತಿ ಆರು ತಿಂಗಳಿಗೊಮ್ಮೆ ಬೆಲೆ ಏರಿಕೆ ಆಗುವ ಅಬಕಾರಿ ಇಲಾಖೆಯೇ ಸರ್ಕಾರಕ್ಕೆ ಆದಾಯದ ಮೂಲವಾಗಿದೆ. ಹಾಲಿನ ದರ ಹೆಚ್ಚಳ, ಸರ್ಕಾರಿ ಸೇವೆ ಶೇಕಡಾ 30 ರಷ್ಟು ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ 4 ಪಟ್ಟು ಹೆಚ್ಚಳ ಹೀಗೆ ಸಾರ್ವಜನಿಕರಿಗೆ ತೊಂದರೆ ಕೊಟ್ಟು ಸಿದ್ದರಾಮಯ್ಯ ರೈಲ್ವೆ ದರದ ಬಗ್ಗೆ ಟ್ವಿಟ್ ಮಾಡುವುದು ಸರಿಯಲ್ಲ. ಪ್ರಧಾನಿ ಮೋದಿ ಅವರ ಆಶಯದಂತೆ ಶೇಕಡಾ ಒಂದರ ದರ ಹೆಚ್ಚಳದ ಹಣ ಹಾಗೂ 2.65 ಲಕ್ಷ ಕೋಟಿ ಬಜೆಟ್ ಹಣ ದೇಶದ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಹಾಗೂ ಅಂಡರ್ ಪಾಸ್, ಮೇಲ್ಸೇತುವೆ ನಿರ್ಮಾಣಕ್ಕೆ ಬಳಸಲಾಗುತ್ತಿದೆ ಎಂದ ಅವರು ದೇಶದ ಪ್ರಮುಖ 136 ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚಾರದಲ್ಲಿದೆ. ಈ ಎಲ್ಲಾ ಮಾಹಿತಿ ಹಿಡಿದು ಮುಖ್ಯಮಂತ್ರಿಗಳು ಕಾಮೆಂಟ್ ಮಾಡಬೇಕಿತ್ತು. ನಮ್ಮ ಇಲಾಖೆಯ ಪುಸ್ತಕ ನಿಮಗೂ ಕಳುಹಿಸುತ್ತೇವೆ. ಓದಿ ತಿಳಿದು ಪ್ರತಿಕ್ರಿಯೆ ನೀಡಿ ಎಂದು ಸವಾಲೆಸೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ಎಂಟು ತಾಲ್ಲೂಕಿನ ಪೈಕಿ ಅತಿ ಹೆಚ್ಚು ರೈಲ್ವೆ ಅನುದಾನ ಪಡೆದ ಗುಬ್ಬಿ ತಾಲ್ಲೂಕಿನಲ್ಲಿ ನಡೆದ ಎಲ್ಲಾ ಸೇತುವೆ ಕಾಮಗಾರಿ ಒಂದೂವರೆ ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಈಗಾಗಲೇ ಕಳ್ಳಿಪಾಳ್ಯ ಅಂಡರ್ ಪಾಸ್ ಸೇತುವೆಗೆ 16 ಕೋಟಿ, ನಂದಿಹಳ್ಳಿ ಗೇಟ್ ಬಳಿ 36 ಕೋಟಿ, ಬೆಣಚಿಗೆರೆ ಗೇಟ್ ಬಳಿ 36 ಕೋಟಿ, ದೊಣ್ಣೆರೆ ಗೇಟ್ ಗೆ 4.5 ಕೋಟಿ, ರಾಂಪುರ ಗೇಟ್ ಬಳಿ 5.2 ಕೋಟಿ ಬಿಡುಗಡೆಯಾಗಿ ಕೆಲಸ ಆರಂಭವಾಗಿದೆ. ತುಮಕೂರು ಹಾಗೂ ತಿಪಟೂರು ತಾಲ್ಲೂಕಿನಲ್ಲಿ 300 ಕೋಟಿಗೂ ಅಧಿಕ ಹಣ ಬಿಡುಗಡೆಯಾಗಿದೆ ಎಂದ ಅವರು ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಕುರಿತ ಈ ತಿಂಗಳ 4 ರ ಸಭೆಗೆ ಭಾಗವಹಿಸಿ ವೈಜ್ಞಾನಿಕ ಯೋಜನೆ ಬಗ್ಗೆ ಮಾತನಾಡುತ್ತೇನೆ. ಅಲ್ಲಿಯ ನಿರ್ಣಯ ಏನೇ ಇರಲಿ ರೈತರ ಜೊತೆ ನಾನು ಇರುತ್ತೇನೆ ಎಂದು ಭರವಸೆ ನೀಡಿದರು.

ವೇದಿಕೆಯಲ್ಲಿ ಮಾಜಿ ಸಂಸದ ಜಿ.ಎಸ್.ಬಸವರಾಜು, ದಕ್ಷಿಣ ನೈರುತ್ಯ ರೈಲ್ವೆ ಇಲಾಖೆಯ ಬಿಆರ್ ಎಂ ಅಶುತೋಷ್ ಸಿಂಗ್, ಬೆಲವತ್ತ ಗ್ರಾಪಂ ಅಧ್ಯಕ್ಷೆ ಲತಾ ದಯಾನಂದ್, ಸದಸ್ಯರಾದ ಎನ್.ಬಿ.ರಾಜಶೇಖರ್, ಆನಂದ್, ಮುಖಂಡರಾದ ಎಸ್.ಡಿ.ದಿಲೀಪ್ ಕುಮಾರ್, ಬಿ.ಎಸ್.ನಾಗರಾಜು, ಕಳ್ಳಿಪಾಳ್ಯ ಲೋಕೇಶ್, ದಿಶಾ ಸಮಿತಿಯ ಸದಸ್ಯರಾದ ವೈ.ಎಚ್.ಹುಚ್ಚಯ್ಯ, ಶಿವಪ್ರಸಾದ್, ಡಾ.ನವ್ಯಾಬಾಬು, ಉಪ ವಿಭಾಗಾಧಿಕಾರಿ ನಹೀದಾ ಜಂಜಂ, ತಹಶೀಲ್ದಾರ್ ಬಿ.ಆರತಿ ಸೇರಿದಂತೆ ರೈಲ್ವೆ ಇಲಾಖೆಯ ಅಧಿಕಾರಿಗಳು ಇದ್ದರು.

ವರದಿ – ಎಸ್. ಕೆ. ರಾಘವೇಂದ್ರ, ಗುಬ್ಬಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...