ತುಮಕೂರು | ಸಿದ್ದರಾಮಯ್ಯ ಸರ್ಕಾರ ಯಾರಿಗೂ ಮೋಸ ಮಾಡುವುದಿಲ್ಲ: ಗೃಹ ಸಚಿವ ಪರಮೇಶ್ವರ್

Date:

ಒಂದೇ ದಿನದಲ್ಲಿ ಎಲ್ಲವನ್ನೂ ಜಾರಿಗೆ ತರಲು ಸಾಧ್ಯವಿಲ್ಲ. 6ನೇ ವೇತನ ಆಯೋಗ ಜಾರಿಗೆ ತಂದಿದ್ದೂ ಕೂಡಾ ನಮ್ಮದೇ ಸರ್ಕಾರ. ಸಿದ್ದರಾಮಯ್ಯ ಸರ್ಕಾರ ಯಾರಿಗೂ ಮೋಸ ಮಾಡುವುದಿಲ್ಲ. ತಾಳ್ಮೆಯಿಂದ ಇರಿ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್ ಮನವಿ ಮಾಡಿದರು.

ತುಮಕೂರು ನಗರದ ಏಂಪ್ರೆಸ್ ಕಾಲೇಜು ಸಭಾಂಗಣದಲ್ಲಿ ವಿಧಾನಪರಿಷತ್ ಸದಸ್ಯ ಡಿ ಟಿ ಶ್ರೀನಿವಾಸ್ ಅಭಿಮಾನಿ ಬಳಗದಿಂದ ಶಿಕ್ಷಕ ವರ್ಗ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಹಮ್ಮಿಕೊಂಡಿದ್ದ ಕೃತಜ್ಞತಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

“ಸರ್ಕಾರದ ಮುಂದಿರುವ 7ನೇ ವೇತನ ಆಯೋಗ ಶಿಫಾರಸ್ಸು ಜಾರಿಗೆ ತರಲು ₹18 ಸಾವಿರ ಕೋಟಿ  ಬೇಕು. ಇದರ ಜತೆಗೆ ಒಪಿಎಸ್ ಜಾರಿಗೆ ತರುವುದಕ್ಕೂ ನೂರಾರು ಕೋಟಿ ರೂ ಹಣ ಬೇಕು. ಕಾಂಗ್ರೆಸ್ ಪಕ್ಷದ ಮೇಲೆ ನೀವಿಟ್ಟಿರುವ ನಂಬಿಕೆಯನ್ನು ಎಂದಿಗೂ ಹುಸಿಗೊಳಿಸುವುದಿಲ್ಲ” ಎಂಬ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರು ಕ್ಷೇತ್ರಗಳ ಶಿಕ್ಷಕರ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. 72 ವರ್ಷಗಳಲ್ಲಿ ಮೊದಲ ಬಾರಿಗೆ ಆಗ್ನೆಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದು ಅತ್ಯಂತ ಸಂತೋಷ ನೀಡಿದೆ. ಈ ಮೌನ ಕ್ರಾಂತಿಗೆ ಸಹಕಾರ ನೀಡಿದ ಶಿಕ್ಷಕರಿಗೆ ಹಾಗೂ ಅದಕ್ಕೆ ಬೆನ್ನೆಲುಬಾಗಿ ನಿಂತ ಡಿ ಟಿ ಶ್ರೀನಿವಾಸ ದಂಪತಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದರು.

“ಪೂ‌ರ್ಣಿಮ ಶ್ರೀನಿವಾಸ್‌ ಅವರ ತಂದೆ ಎ ಕೃಷ್ಣಪ್ಪ ಮತ್ತು ನಾನು ಒಂದೇ ಬಾರಿಗೆ ರಾಜಕಾರಣ ಪ್ರವೇಶಿಸಿದವರು. ಪೂರ್ಣಿಮ ನನಗೂ ಮಗಳಿದ್ದ ಹಾಗೆ. ಎ ಕೃಷ್ಣಪ್ಪ ಅವರ ಕುಟುಂಬದ ಪರವಾಗಿ ನಾನು ಆಗ್ನೇಯ ಶಿಕ್ಷಕರ ಕ್ಷೇತ್ರದ ಎಲ್ಲ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಶಿಕ್ಷಕರು ಬಹಳ ಅಚ್ಚುಕಟ್ಟಾಗಿ, ಯಾರಿಗೂ ಗೊತ್ತಾಗದ ಹಾಗೆ ಶಾಂತಿಯಿಂದ ರಾಜಕಾರಣ ಮಾಡಿದ್ದೀರಿ. ಇದು ಬಹಳ ದೊಡ್ಡ ಬದಲಾವಣೆ” ಎಂದರು.

“ತುಮಕೂರು ಜಿಲ್ಲೆಯಲ್ಲಿಯೇ 5300ಕ್ಕೂ ಹೆಚ್ಚು ಮತಗಳು ಡಿ ಟಿ ಶ್ರೀನಿವಾಸ ಅವರಿಗೆ ಬಂದಿವೆ. ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಯಾಗಿದೆ. ಇದರಿಂದ ಇಡೀ ವಿಶ್ವದ ಗಮನ ಸೆಳೆದಿದೆ. ಸ್ವಾತಂತ್ರ ಬಂದಾಗ ಶೇ.12ರಷ್ಟಿದ್ದ ಸಾಕ್ಷರರ ಸಂಖ್ಯೆ ಇಂದು 82ಕ್ಕೆ ಮುಟ್ಟಿದೆ. ಇದೊಂದು ದೊಡ್ಡ ಸಾಧನೆ. ಯಾರು ಏನೇ ಹೇಳಿಕೊಳ್ಳಲಿ, ಇದು ಕಾಂಗ್ರೆಸ್ ಪಕ್ಷದ ದೊಡ್ಡ ಕೊಡುಗೆ. ಜನರನ್ನು ಪ್ರಜ್ಞಾವಂತರನ್ನಾಗಿ ಮಾಡಿದೆ. ಪ್ರಶ್ನಿಸುವಂತಹ ಧೈರ್ಯವನ್ನು ತಂದುಕೊಟ್ಟಿದೆ. ಇದಕ್ಕೆ ಶಿಕ್ಷಣ ಕ್ಷೇತ್ರದಲ್ಲಿ ತಂದಿರುವ ಹಲವಾರು ಬದಲಾವಣೆಗಳೇ ಕಾರಣ” ಎಂದರು.

ವಿಧಾನಪರಿಷತ್ ಸದಸ್ಯ ಡಿ ಟಿ ಶ್ರೀನಿವಾಸ್ ಮಾತನಾಡಿ, “ಅನುದಾನಿತ ಶಾಲೆಗಳ ಒಕ್ಕೂಟ ಹಾಗೂ ಎಲ್ಲ ಶಿಕ್ಷಕರು ನನ್ನ ಗೆಲುವಿಗೆ ಸಂಪೂರ್ಣ ಸಹಕಾರ ನೀಡಿದೆ. ಅವರ ನಂಬಿಕೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತೇನೆ. ಬದಲಾವಣೆ ತರಬೇಕೆಂದು ಆಂತರ್ಯದಲ್ಲಿ ನಡೆದ ಕೆಲಸ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಸಹಕಾರಿಯಾಯಿತು. ನಮ್ಮದೇ ಸರ್ಕಾರವಿದೆ. ಇವರನ್ನು ಗೆಲ್ಲಿಸಿಕೊಂಡರೆ ಅನುಕೂಲವಾಗಲಿದೆ ಎಂಬ ನಿಮ್ಮ ವಿಶ್ವಾಸವನ್ನು ಹುಸಿಗೊಳಿ‌ಸುವುದಿಲ್ಲ” ಎಂದರು.

“ಓಟ್ ಫಾರ್ ಒಪಿಎಸ್ ಹೆಚ್ಚು ಸಹಕಾರ ನೀಡಿದೆ. ವೇತನ ತಾರತಮ್ಯ ನಿವಾರಣೆ, ಒಪಿಎಸ್ ಜಾರಿ, ಅನುದಾನಿತ ಶಾಲೆಗಳ ಸಿಬ್ಬಂದಿ ನೇಮಕ ಸೇರಿದಂತೆ ಮತ್ತಿತರರ ಬೇಡಿಕೆಗಳ ಕುರಿತು ಸರ್ಕಾರಕ್ಕೆ ಒತ್ತಡ ನೀಡುವ ಸಂಬಂಧ ಕ್ರಮ ವಹಿಸುತ್ತೇನೆ” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಚಳವಳಿಗಳಿಂದ ಮಾತ್ರ ಸರ್ಕಾರದ ಧೋರಣೆ ಬದಲಿಸಲು ಸಾಧ್ಯ: ಹಸಿರುಸೇನೆ ರಾಜ್ಯಾಧ್ಯಕ್ಷ ಬಸವರಾಜಪ್ಪ

ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಪೂರ್ಣೀಮ ಶ್ರೀನಿವಾಸ್, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮುರುಳೀಧರ ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ, ಷಣ್ಮುಗಪ್ಪ, ಎನ್ ಗೋವಿಂದರಾಜು, ಡಾ.ರಫೀಕ್ ಅಹಮದ್, ಇಕ್ಬಾಲ್ ಅಹಮದ್, ಸುಲ್ತಾನ್‌ಮೊಹಮದ್, ಬಿಇಒ ಡಾ.ಸೂರ್ಯಕಲಾ, ಕೆ ಎಸ್ ಕಿರಣಕುಮಾರ್, ಚಿಕ್ಕಣ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...