ತುಮಕೂರು | ಬಡವರ ಅಭ್ಯುದಯ ಸಿದ್ದರಾಮಯ್ಯನವರ ಆಶಯ: ಸಚಿವ ಕೆ ಎನ್ ರಾಜಣ್ಣ

Date:

ಬಡವರ ಅಭ್ಯುದಯ ಆಗಬೇಕೆಂಬುದು ಸಿದ್ದರಾಮಯ್ಯ ಅವರ ಆಶಯ. ಅವರ ಅನ್ನಭಾಗ್ಯ ಯೋಜನೆ ಜನರಿಗೆ ಬದುಕು ನೀಡಿದೆ. ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡುವ ಇಂಥವರು ಅಧಿಕಾರದಲ್ಲಿರಬೇಕು ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಅಭಿಪ್ರಾಯ ಪಟ್ಟರು.

ತುಮಕೂರು ಜಿಲ್ಲೆ ಮಧುಗಿರಿಯ ಕುರುಬರ ಸಮುದಾಯ ಭವನದಲ್ಲಿ ‘ಕನಕ ನೌಕರರ ಸಂಘʼದ ವತಿಯಿಂದ ಭಾನುವಾರ ಏರ್ಪಡಿಸಿಸಿದ್ದ ‘ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ಪ್ರಸ್ತುತದಲ್ಲಿ ಯಾವುದೇ ಭಿಕ್ಷುಕರೂ ಅನ್ನ ಬೇಡುತ್ತಿಲ್ಲ. ಅದಕ್ಕೆ ಕಾರಣ ಅನ್ನಭಾಗ್ಯ. ಬಡವರ ಕಾರ್ಯಕ್ರಮಗಳನ್ನು ತೆಗೆದುಕೊಂಡು ಹೋದರೆ ಸಿದ್ದರಾಮಯ್ಯ ಮೊದಲ ಆದ್ಯತೆ ನೀಡುತ್ತಾರೆ. ಅವರು ಎಂದಿಗೂ ನುಡಿದಂತೆ ನಡೆಯುವವರು. ಅವರು ಸುಳ್ಳು ಹೇಳುವವರಲ್ಲ. ಯಾರ ಬಗ್ಗೆಯೂ ಹೇಳಿಕೆ ಮಾತು ಕೇಳುವವರಲ್ಲ. ಎಲ್ಲರನ್ನೂ ಸಮಾನವಾಗಿ ಕೊಂಡೊಯ್ಯುತ್ತಾರೆ. ಆದ್ದರಿಂದ ನಮಗೆಲ್ಲ ಅವರು ಅಚ್ಚುಮೆಚ್ಚು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೆಣ್ಣು-ಗಂಡು ಇಬ್ಬರಲ್ಲೂ ಸಮಾನವಾದ ಬುದ್ಧಿಶಕ್ತಿ ಇರುತ್ತದೆ. ಸೂಕ್ತ ಪರಿಸರ ಮತ್ತು ಮಾರ್ಗದರ್ಶನ ಇದ್ದಾಗ ಸಾಧನೆ ಮಾಡಲು ಸಾಧ್ಯ. ವಿದ್ಯೆಗೆ ಸರ್ವಸ್ವವನ್ನೂ ಗಳಿಸುವ ಶಕ್ತಿ ಇದೆ. ಯಾವುದೇ ಮಕ್ಕಳಲ್ಲೂ ಕೀಳರಿಮೆಯನ್ನು ಬೆಳೆಸಬಾರದು. ಇಬ್ಬರನ್ನೂ ಸಮಾನವಾಗಿ ಕಾಣುವುದರಿಂದ ಗುರಿ ಸಾಧಿಸಲು ಸಾಧ್ಯವಾಗುತ್ತದೆ” ಎಂದರು.

“1957ರಲ್ಲಿ ಶುಲ್ಕ ಪಾವತಿಸದ ಕಾರಣಕ್ಕೆ ಶಾಲೆಯಲ್ಲಿ ನನ್ನ ಸಹಪಾಠಿಯನ್ನು ಆಚೆಗೆ ಹಾಕಿದ್ದರು. ಅಸಹಾಯಕರಿಗೆ ನೆರವಾಗಬೇಕೆಂದು ಅಂದೇ ತೀರ್ಮಾನ ಮಾಡಿದ್ದೆ. ಇಂದು ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ ಎಂದು ಯಾರೇ ಬಂದರೂ ಫೀಸ್ ಎಷ್ಟೇ ಆಗಿದ್ದರೂ ಕೂಡ ಮೊದಲು ಅವರಿಗೆ ಸ್ಪಂದಿಸುತ್ತೇನೆ. ಮೂರನೇ ತಲೆಮಾರಿಗೆ ಭೂಮಿ ಕಡಿಮೆಯಾಗುತ್ತಾ ಹೋಗುತ್ತದೆ. ಆದ್ದರಿಂದ ವಿದ್ಯೆಯನ್ನು ಹೆಚ್ಚು ಮಾಡಿಕೊಳ್ಳಬೇಕು. ಸಹಕಾರ ಸ್ಮರಣೆ ಇರಬೇಕು” ಎಂದರು.

“ಅಸಹಾಯಕರಿಗೆ ಮತ್ತು ಧ್ವನಿ ಇಲ್ಲದವರ ಪರ ಧ್ವನಿ ಎತ್ತಿದಾಗ ಅದೇ ನಮಗೆ ದೇವರ ಆಶೀರ್ವಾದ. ನಮ್ಮ ನಡವಳಿಕೆಗಳು ದುರ್ಬಲ ವರ್ಗದವರ ಪರವಾಗಿ ಇರಬೇಕು. ಹೆಣ್ಣು ಮಕ್ಕಳಿಗೆ ಅವಕಾಶ ನೀಡಿದಾಗ ಪ್ರತಿಭಾವಂತಿಕೆ ತಿಳಿಯುತ್ತಿದೆ. ವಿದ್ಯೆ ಪಡೆದ ಹೆಣ್ಣು ಮಕ್ಕಳು ಸಮಾಜದ ಆಸ್ತಿ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ತಾಂತ್ರಿಕ ಸಮಸ್ಯೆಗಳಿಂದ ಹೊರಬರದ ಶಾಖೋತ್ಪನ್ನ ಕೇಂದ್ರಗಳು; ವಿದ್ಯುತ್ ಉತ್ಪಾದನೆ ಕುಸಿತ

“ದೊಡ್ಡೇರಿ ಹೋಬಳಿಯಲ್ಲೇ ನಾಲ್ಕೂವರೆ ಸಾವಿರ ಲೀಡ್. ಕುಂಚಿಟಿಗ ಸಮುದಾಯದ ವಿದ್ಯಾವಂತರೂ ನನಗೆ ಬೆಂಬಲ ನೀಡಿದರು. 96 ಸಾವಿರ ಮತಗಳು ಮಧುಗಿರಿ ಇತಿಹಾಸದಲ್ಲಿ ಯಾವ ಅಭ್ಯರ್ಥಿಗಳಿಗೂ ಬಿದ್ದಿಲ್ಲ. ಎಲ್ಲ ಸಮುದಾಯಗಳ ಋಣ ತೀರಿಸುತ್ತೇನೆ” ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

ಈ ವೇಳೆ ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಹಾಗೂ ಕುರುಬ ಸಂಘದ ಮುಖಂಡ ಗೇಟ್ ಶಿವಣ್ಣ, ಸಂಪಾದಕ ಎಸ್ ನಾಗಣ್ಣ, ಕಾಂಗ್ರೆಸ್ ಮುಖಂಡ ತಂಗೋಟಿ ರಾಮಣ್ಣ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...