ತುಮಕೂರು | ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಸಾಧಕರಿಗೆ ಎಸ್ಐಒ ಗೌರವ

Date:

 “ಪರಿಶ್ರಮಿಸಿದವರಿಗೆ ಫಲವಿಲ್ಲವೆಂದೇ ಇಲ್ಲ” ಎಂಬ ನಂಬಿಕೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದಂತಾಯಿತು. ನಗರದ ದಾನಾ ಪ್ಯಾಲೇಸ್‌ನಲ್ಲಿ ಶನಿವಾರ ನಡೆದ ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಜೇಶನ್‌ (ಎಸ್ಐಒ) ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಮೆರೆದ 150 ಮಂದಿ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಸ್ವೀಕರಿಸಿ, ದೊಡ್ಡ ಕನಸುಗಳತ್ತ ಹೆಜ್ಜೆ ಇಡುವ ಸಂಕಲ್ಪ ವ್ಯಕ್ತಪಡಿಸಿದರು.

ರಾಷ್ಟ್ರಗೀತೆಯಿಂದ ಆರಂಭವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ ತ್ಯಾಗ ಮತ್ತು ಶಿಕ್ಷಕರ ಮಾರ್ಗದರ್ಶನವನ್ನು ಸ್ಮರಿಸಿ ಹಲವರು ಕಣ್ಣೀರಿಟ್ಟರು.

19ನೇ ವಾರ್ಷಿಕ ಶಿಕ್ಷಣ ಪ್ರಶಸ್ತಿ ಸಮಾರಂಭದಲ್ಲಿ, ನಗರ ಹಾಗೂ ಜಿಲ್ಲೆಯ ವಿವಿಧ ಶಾಲೆಗಳು ಮತ್ತು ಕಾಲೇಜುಗಳಿಂದ ಆಯ್ಕೆಯಾದ 150 ಮಂದಿ ಸಾಧಕ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ಅವರ ಸಾಧನೆಗೆ ಪೋಷಕರು, ಶಿಕ್ಷಕರು ಹಾಗೂ ಅತಿಥಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಧನೆಯ ಹಾದಿಯಲ್ಲಿ ಶಿಸ್ತು, ಜ್ಞಾನ ಮತ್ತು ಮೌಲ್ಯಗಳ ಮಹತ್ವವನ್ನು ಅತಿಥಿಗಳು ತಮ್ಮ ಭಾಷಣದಲ್ಲಿ ಹಂಚಿಕೊಂಡರು. ವೇದಿಕೆಯನ್ನು ಹಂಚಿಕೊಂಡ ಎಸ್ಐಒ ರಾಜ್ಯಾಧ್ಯಕ್ಷ ಅದೀ ಅಲ್ ಹಸನ್, ರಾಜ್ಯ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದೀಕ್, ಜಿಐಓ ಪ್ರತಿನಿಧಿ ಜೈನಾಬ್ ಗಝಲಿ, ಜೆಐಎಚ್ ತುಮಕೂರು ಅಧ್ಯಕ್ಷ ಮೌಲಾನ ಅಸ್ರಾರ್ ಅಹಮದ್, ಗ್ಲೋಬಲ್ ಶಾಹಿನ್ ಕಾಲೇಜಿನ ಅಫ್ಜಲ್ ಶರೀಫ್ ಮತ್ತು ಎಸ್ಐಒ ತುಮಕೂರು ಘಟಕದ ಅಧ್ಯಕ್ಷ ಖಲೀಲ್ ಖಾನ್ ಅವರು, “ಜ್ಞಾನವಂತ ಸಮಾಜ ನಿರ್ಮಾಣ” ಎಂಬ ಗುರಿಯನ್ನು ಹೊಂದಿ ಬದುಕಲು ವಿದ್ಯಾರ್ಥಿಗಳನ್ನು ಪ್ರೇರೇಪಿಸಿ, ಮುಂದಿನ ಶಿಕ್ಷಣದಲ್ಲಿ ಉನ್ನತ ಗುರಿಗಳನ್ನು ಹೊಂದಿ ಸಮಾಜಕ್ಕೆ ಮಾದರಿಯಾಗುವಂತೆ ಹಾರೈಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...