ತುಮಕೂರು | ಸ್ಲಂ ಹಬ್ಬ ಶ್ರಮಿಕ ಸಂಸ್ಕೃತಿಯ ಹಬ್ಬವಾಗಿದೆ : ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

Date:

ಶ್ರಮಿಕ ಸಮುದಾಯಗಳ ದುಡಿಮೆಗೆ ಸಲ್ಲಿಸುವ ಗೌರವವಾಗಿದೆ. ಇದು ಮಿನಿ ದಸರೆಯ ತರವೇ ಆಯೋಜನೆ ಮಾಡಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ತಿಳಿಸಿದರು

 ತುಮಕೂರಿನ ನಗರ ಕೇಂದ್ರ ಗ್ರಂಥಾಲಯದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಸ್ಲಂ ಸಮಿತಿಯಿಂದ ಆಯೋಜಿಸಿದ ಸ್ಲಂ ಹಬ್ಬ, ಸಮಾವೇಶ ಮತ್ತು ಪ್ರತಿಭಾಪುಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಜಿಲ್ಲಾಡಳಿತದ ಪರವಾಗಿ ತುಮಕೂರು ಸ್ಲಂ ಸಮಿತಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ. ತಳಸಮುದಾಯಗಳ ಕಲಾಪ್ರಕಾರಗಳು ವೇದಿಕೆಯಲ್ಲಿ ಅನಾವರಣವಾಗುತ್ತಿರುವುದು ಸಂತಸದ ಸಂಗತಿಯಾಗಿದ್ದು, ಇದು ನನಗೆ ಹೆಮ್ಮೆಯನ್ನು ತಂದಿದೆ. ಹೆಚ್ಚಾಗಿ ನಮ್ಮ ಮಕ್ಕಳು ಶಿಕ್ಷಣದಲ್ಲಿ ಉನ್ನತ ಮಟ್ಟದ ಸಾಧನೆಗಳನ್ನು ಮಾಡಿ ಪುರಸ್ಕಾರಕ್ಕೆ ಒಳಗಾಗಿರುವುದು ಹೆಮ್ಮೆಪಡುವಂತದ್ದು. ಯಾವುದೇ ಸೌಲಭ್ಯಗಳಿಲ್ಲದೆ ಕನಿಷ್ಟ ವಾತವರಣದಲ್ಲಿ ಈ ಸಾಧನೆ ಮಾಡಿರುವ ನಿಮಗೆ ಮತ್ತು ಪೋಷಕರಿಗೆ ಅಭಿನಂದನೆಗಳು ಎಂದರು.

1001489329

 ನಮ್ಮ ಜಿಲ್ಲೆಯಲ್ಲಿ ನಿರುದ್ಯೋಗಕ್ಕಿಂತ ಕೌಶಲ್ಯಕ್ಕೆ ತಕ್ಕಂತೆ ಉದ್ಯೋಗ ದೊರಯದಿರುವುದು ಸಮಸ್ಯೆಯಾಗಿದೆ. ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ್‌ ಅವರು ಸದಾ ನಮ್ಮನ್ನು ಎಚ್ಚರಿಸುತ್ತ ಅವಕಾಶ ಇದ್ದಾಗ ಶೋಷಿತ ಸಮುದಾಯಗಳ ಪರವಾಗಿ ಕೆಲಸ ಮಾಡಿ ಎಂಬ ಸ್ಪೂರ್ತಿಯಿಂದ ಇಂದು ಸ್ಲಂ ಜನರ ವಿಷಯವಾಗಲಿ, ರೈತರ ವಿಷಯವಾಗಲಿ ಜನ ಸಾಮಾನ್ಯರ ಸಮಸ್ಯೆಗಳನ್ನು ಪರಿಹರಿಸುತ್ತಿದ್ದು ಇಡೀ ರಾಜ್ಯಕ್ಕೆ ಮಾದರಿಯಾಗಿ ಕಂದಾಯ ಗ್ರಾಮಗಳ ಜನರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕುಪತ್ರವನ್ನು ದೊರೆಯುವಂತೆ ಮಾಡಲಾಗಿದೆ ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಸ್ಲಂ ನಿವಾಸಿಗಳಿಗೆ ನಗರ ಶಾಸಕರ ಸಹಕಾರದೊಂದಿಗೆ ಹೊನ್ನೆಹಳ್ಳಿಯಲ್ಲಿ 200 ವಸತಿ ಸಮುಚ್ಛಯಗಳನ್ನು ನಿರ್ಮಿಸುತ್ತಿದ್ದು, ವಿಶೇಷ ವರ್ಗದ ಮಹಿಳೆಯರಿಗೆ ಆಯ್ಕೆ ಮಾಡಲು ಕ್ರಮವಹಿಸಲಾಗಿದೆ. ಇದೇ ರೀತಿ ಮರಳೇನಹಳ್ಳಿ ಮತ್ತು ಸತ್ಯಮಂಗಳದಲ್ಲಿ 4 ಎಕರೆ ಭೂಮಿಯನ್ನು ನಿವೇಶನ ರಹಿತರಿಗೆ ಮೀಸಲಿಡಲಾಗಿದೆ. ಕಳೆದ 1 ವರ್ಷದಿಂದ ತುಮಕೂರು ಜಿಲ್ಲಾಡಳಿತದಿಂದ ಹಲವು ವಸತಿ ಕಾಮಗಾರಿಗಳನ್ನು ಕೈಗೊಂಡಿದ್ದು ತ್ವರಿತವಾಗಿ ಫಲಾನುಭವಿಗಳ ಕೈಸೇರಲಿವೆ. ಈಗಾಗಲೇ ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯ ಒತ್ತಾಸೆಯಂತೆ ದೇವರಾಜು ಅರಸು ಬಡಾವಣೆ ನಿವಾಸಿಗಳಿಗೆ ಜಿಲ್ಲಾಡಳಿತದಿಂದ 600 ಮನೆ ಹಂಚುಕಾತಿ ಪತ್ರಗಳನ್ನು ಮಾನ್ಯ ಉಸ್ತುವಾರಿ ಸಚಿವರ ಮೂಲಕ ಹಂಚಿಕೆ ಮಾಡಲಾಗಿದೆ. ಮಂಡಳಿಯಿಂದ 182 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದ್ದು, ಶಿರಾದಲ್ಲಿ 1008 ಮನೆಗಳನ್ನು ಹಂಚಿಕೆ ಮಾಡುವ ಹಂತದಲ್ಲಿದೆ. ಚಿಕ್ಕನಾಯಕನಹಳ್ಳಿಯಲ್ಲಿ 800 ಮತ್ತು ತುಮಕೂರಿನಲ್ಲಿ 850 ಮನೆಗಳು ಪ್ರಧಾನಮಂತ್ರಿ ಯೋಜನೆಯಲ್ಲಿ ನಿರ್ಮಾಣವಾಗುತ್ತಿದೆ. ಜಿಲ್ಲಾಡಳಿತದಿಂದ ಇದುವರೆಗೂ 5 ಸಾವಿರ ಆಟೋ ಚಾಲಕರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಿಸಿದ್ದು, ಮುಂದಿನ ದಿನಗಳಲ್ಲಿ ಸ್ಲಂ ಸಮಿತಿಯ ಜೊತೆ ಕೊಳಗೇರಿಯಲ್ಲಿರುವ ಮನೆಗೆಲಸ ಕಾರ್ಮಿಕರು ಮತ್ತು ಇತರೆ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಿಸುವ ಕಾರ್ಯಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

1001489327

 ನಮ್ಮಲ್ಲಿ ಕೀಳಿರಿಮೆ ಬಿಟ್ಟು ಗಾಂಧಿ ಅವರ ಮಾತಿನಂತೆ “ಕೆಲಸ ಆಗಬೇಕೆಂಬ ಧೃಡವಾದ ಆತ್ಮವಿಶ್ವ ನಮ್ಮಲ್ಲಿದ್ದರೆ ಮೊದಲು ಸಾಧ್ಯವಾಗದಿದ್ದರು ಮುಂದೆ ಎಲ್ಲವು ಕೈಗೂಡುತ್ತದೆ”. ಹಾಗೆಯೇ ನಾವು ಸಾಧಿಸುವ ಛಲ ಮತ್ತು ಧೃಡವಾದ ಆತ್ಮವಿಶ್ವಾವಿದ್ದರೆ ನಮ್ಮ ಸಾಧನೆ ಪಲಿಸುತ್ತದೆ, ನಮ್ಮ ಮಕ್ಕಳ ಮುಂದಿನ ಭವಿಷ್ಯ ಹಸನಾಗಿರಲಿ ಎಂದು ಆಶಿಸುತ್ತೇನೆಂದರು.

ಪ್ರಾಸ್ತಾವಿಕವಾಗಿ ಸ್ಲಂ ಜನಾಂದೋಲನ ಕರ್ನಾಟಕದ ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ ಮಾತನಾಡಿದರು. 

ಅಧ್ಯಕ್ಷತೆಯನ್ನು ಹಿರಿಯ ಚಿಂತಕರಾದ ಕೆ.ದೊರೆರಾಜ್‌ ವಹಿಸಿದ್ದರು. ಸಾಹಿತಿಗಳಾದ ಡಾ.ದು.ಸರಸ್ವತಿ ಆಶಯ ನುಡಿಗಳನ್ನಾಡಿದರು, ಬೆಂಗಳೂರು ವಿಶ್ವವಿದ್ಯಾಲಯದ ಡಾ. ಡಾಮಿನಿಕ್‌ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದರು.

 ಮಾಜಿ ನಗರ ಪಾಲಿಕೆ ಸದಸ್ಯರಾದ ಲಕ್ಷ್ಮೀನರಸಿಂಹರಾಜು, ದಾವಣಗೆರೆ ಜಿಲ್ಲಾ ಸಮಿತಿಯ ಎಸ್.ಎಲ್‌ ಆನಂದಪ್ಪ, ಸಾವಿತ್ರಿಬಾಯಿಪುಲೆ ಮಹಿಳಾ ಸಂಘಟನೆಯ ಚಂದ್ರಮ್ಮ, ತುಮಕೂರು ಸ್ಲಂ ಸಮಿತಿಯ ದೀಪಿಕಾ, ಚಿತ್ರದುರ್ಗ ಜಿಲ್ಲಾ ಸಮಿತಿಯ ರಾಜಣ್ಣ ಅಥಿತಿಗಳಾಗಿ ಭಾಗವಹಿಸಿದ್ದರು.

 ಕಾರ್ಯಕ್ರಮದ ನಿರೂಪಣೆಯನ್ನು ತಿರುಮಲಯ್ಯ, ಸ್ವಾಗತವನ್ನು ಅರುಣ್‌, ವಂದನಾರ್ಪಣೆಯನ್ನು ಅನುಪಮ ನೇರವೇರಿಸಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...