ತುಮಕೂರು | ಗ್ಯಾರಂಟಿ ಯೋಜನೆಗೆ ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ಬಳಕೆ ಖಂಡಿಸಿ ಸ್ಲಂ ಜನಾಂದೋಲನ ಪ್ರತಿಭಟನೆ

Date:

ಎಸ್ಎಸಿಸ್‌ಪಿ, ಟಿಎಸ್‌ಪಿಗೆ ಮೀಸಲಿಟ್ಟಿರುವ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿರುವುದನ್ನು ಖಂಡಿಸಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಬಳಿಕ ಅಪರ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಸ್ಲಂ ಜನಾಂದೋಲನ ಸಂಚಾಲಕ ಎ ನರಸಿಂಹಮರ್ತಿ ಮಾತನಾಡಿ, “2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಕ್ಕಾಗಿಯೇ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಘೋಷಣೆ ಮಾಡುವಾಗ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಹಣದಲ್ಲಿ ಗ್ಯಾರಂಟಿಗಳಿಗೆ ಖರ್ಚು ಮಾಡುತ್ತೇವೆಂದು ಘೋಷಣೆ ಮಾಡಿರಲಿಲ್ಲ. ಆದರೆ ಆಡಳಿತಕ್ಕೆ ಬಂದ ಮೇಲೆ ಈ 5 ಗ್ಯಾರಂಟಿಗಳಿಗೆ ಸಾಮಾನ್ಯ ಹಣದಲ್ಲಿ ಖರ್ಚು ಮಾಡದೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ ಹಣದಲ್ಲಿ ಖರ್ಚು ಮಾಡಲಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2017-18 ರಿಂದ ಅನ್ನಭಾಗ್ಯ ಯೋಜನೆಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ ಮೀಸಲಿರಿಸಿದ್ದ ಹಣದಲ್ಲಿ ಹಂಚಿಕೆ ಮಾಡುತ್ತಿದ್ದು, ಆ ವರ್ಷದಿಂದ ಈವರೆಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಬಿಪಿಎಲ್‌ದಾರರ ವಿವರಗಳನ್ನು ನೀಡಿಲ್ಲ. ಈ ಯೋಜನೆಯ ಅರ್ಹತೆಯ ಮಾರ್ಗಸೂಚಿ ಪ್ರಕಾರ ಆದಾಯ ಮೀತಿಯಲ್ಲಿ ಇರುವವರಿಗೆಲ್ಲ ಪಡಿತರ ನೀಡುತ್ತೇವೆಂದು ಘೋಷಣೆ ಮಾಡಿಕೊಳ್ಳಲಾಗಿದೆ. ಜಾತಿ ಆಧಾರಿತವಾಗಿ ಮಾರ್ಗಸೂಚಿಯಲ್ಲಿ ಇರುವುದಿಲ್ಲ. ಗೃಹಲಕ್ಷ್ಮೀ ಯೋಜನೆಯು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅನುಷ್ಠಾನ ಮಾಡುತ್ತಿದ್ದು, ಪಕ್ಕ ಫಲಾನುಭವಿಗಳ ಮಾಹಿತಿ ಸಿಕ್ಕಿಲ್ಲ. ಅಂದಾಜಿನಲ್ಲಿ ಸಿಗುತ್ತಿದೆ. ಶಕ್ತಿ ಯೋಜನೆ ಗೃಹಜ್ಯೋತಿ, ಯುವನಿಧಿ ಈ ಯಾವುದೇ ಯೋಜನೆಗಳಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಸೌಲಭ್ಯ ಪಡೆದಿರುವುದಕ್ಕೆ ಇಲಾಖೆಗಳಲ್ಲಿಯೂ ಮಾಹಿತಿ ಇಲ್ಲ. ಸಮಾಜ ಕಲ್ಯಾಣ ಇಲಾಖೆಯಲ್ಲೂ ದಾಖಲೆಗಳಿಲ್ಲ” ಎಂದು ಹೇಳಿದರು.

ಕರ್ನಾಟಕ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳ ಉಪಹಂಚಿಕೆ ಕಾಯಿದೆ 2013ರಲ್ಲಿ ಆಡಳಿತ ವೆಚ್ಚವನ್ನು ಹೊರೆತುಪಡಿಸಿ ಒಟ್ಟು ಅಭಿವೃದ್ಧಿಗೆ ಖರ್ಚು ಮಾಡುವ ಹಣದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಉಪ ಹಂಚಿಕೆಗೆ ಹಣವನ್ನು ಮೀಸಲಿಡುತ್ತಿದ್ದು, ಮೀಸಲಿಟ್ಟ ಉಪಹಂಚಿಕೆ ಹಣದಲ್ಲಿ(ಬಾಡಿಗೆ, ವಿದ್ಯುತ್, ಕುಡಿಯುವ ನೀರು ಇತರೆ ಎಲ್ಲ ರೀತಿಯ ಆಡಳಿತಾತ್ಮಕ ವೆಚ್ಚಗಳಿಗೆ) ಇಲಾಖೆಗಳು ನಿರ್ಮಾಣ ಮಾಡುವ ಹೊಸ ಕಟ್ಟಡಗಳಿಗೆ, ಕಟ್ಟಡ ದುರಸ್ತಿಗಳಿಗೆ, ಶಾಲಾ-ಕಾಲೇಜು ಕಟ್ಟಡಗಳಿಗೆ, ಹಾಸ್ಟೆಲ್ ಕಟ್ಟಡಗಳಿಗೆ ಮತ್ತು ಇವುಗಳ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಉಪ ಹಂಚಿಕೆ ಹಣವನ್ನು ಖರ್ಚು ಮಾಡುತ್ತಿರುವುದು ಖಂಡನೀಯ” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ದಲಿತ ಚಳವಳಿಗೆ 50 ವರ್ಷದ ಸಂಭ್ರಮಕ್ಕೆ ಆಹ್ವಾನ

“ಗ್ಯಾರಂಟಿ ಯೋಜನೆಗಳಿಗೆ ಎಸ್‌ಇಎಸ್‌ಪಿ/ಟಿಎಸ್‌ಪಿ ಹಣವನ್ನು ಬಳಕೆ ಮಾಡುತ್ತಿರುವುದು ಖಂಡಿನೀಯ. ಗ್ಯಾರಂಟಿ ಯೋಜನೆಗಳಿಗೆ ಸಾಮಾನ್ಯ ಹಣದಲ್ಲಿ ಖರ್ಚು ಮಾಡಲು ಸರ್ಕಾರ ಮುಂದಾಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪರಿಶಿಷ್ಟ ಜಾತಿಗೆ ಸಾಮಾಜಿಕ ನ್ಯಾಯ ಖಾತ್ರಿಪಡಿಸಲು ಬದ್ಧತೆ ಪ್ರದರ್ಶಿಸಬೇಕು” ಎಂದು ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯು ಒತ್ತಾಯಿಸಿತು.

ಸ್ಲಂ ಸಮಿತಿಯ ಪದಾಧಿಕಾರಿಗಳಾದ ಅರುಣ್‌, ಕಣ್ಣನ್‌, ಜಾಬೀರ್‌ಖಾನ್‌, ಚಕ್ರಪಾಣಿ, ಮೋಹನ್‌ ಟಿ ಆರ್‌, ಗಣೇಶ, ಮುಬಾರಕ್‌, ಸಾವಿತ್ರಿ ಬಾಫುಲೆ ಮಹಿಳಾ ಘಟಕದ ಅನುಪಮಾ, ಪೂಣಿಮಾ, ಶಾರದಮ್ಮ, ವಸಂತಮ್ಮ, ಗಂಗಾ, ಮಂಗಳಮ್ಮ, ಸುಜಾತ, ತಿಪ್ಪೆಸ್ವಾಮಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...