ತುಮಕೂರು | ಸ್ಲಂ ನಿವಾಸಿಗಳ ಕುಂದುಕೊರತೆ ಸಭೆ ನಿಗದಿಗೆ ಒತ್ತಾಯ

Date:

ಸ್ಲಂ ನಿವಾಸಿಗಳ ಕುಂದುಕೊರತೆಗಳನ್ನು ಆಲಿಸಿ, ಪರಿಹರಿಸಲು ಸಭೆ ಕರೆಯುವಂತೆ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಹಾಗೂ ನಗರ ನಿವೇಶನ ವಂಚಿತ ಹೋರಾಟ ಸಮಿತಿ ಒತ್ತಾಯಿಸಿವೆ. ಸಂಘಟನೆಗಳ ಮುಖಂಡರು ತುಮಕೂರು ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ ಅಶ್ವಿಜ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಹಕ್ಕೊತ್ತಾಯ ಸ್ವೀಕರಿಸಿ ಮಾತನಾಡಿದ ಅಶ್ವಿಜ ಅವರು, “ಸ್ಲಂ ಜನರ ಹಾಗೂ ನಿವೇಶನ ವಂಚಿತ ಕುಟುಂಬಗಳಿಗೆ ವಸತಿ ಸೌಲಭ್ಯ ಒದಗಿಸಲು ಈಗಾಗಲೇ ಸರ್ಕಾರಿ ಭೂಮಿಯನ್ನು ಗುರುತಿಸಿ ಜಿಲ್ಲಾಧಿಕಾರಿಗಳ ಆದೇಶದಂತೆ ಸ್ಲಂ ಬೋರ್ಡ್‌ಗೆ ಹಸ್ತಾಂತರಿಸಲಾಗಿದೆ. ಕಾಮಗಾರಿ ಪ್ರಗತಿಯಲ್ಲಿದೆ. ವಸತಿ ವಂಚಿತ ನೈಜ ಪಲಾನುಭವಿಗಳ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ನಗರ ಸ್ಲಂ ಜನರ ಕುಂದುಕೊರತೆ ಸಭೆಯನ್ನು ಜುಲೈ ಮೊದಲನೇ ವಾರದಲ್ಲಿ ಆಯೋಜಿಸಲು ಕ್ರಮವಹಿಸುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸ್ಲಂ ಸಮಿತಿಯ ಕಾರ್ಯದರ್ಶಿ ಅರುಣ್ ಪದಾಧಿಕಾರಿಗಳಾದ ತಿರುಮಲಯ್ಯ, ಕೃಷ್ಣಮೂರ್ತಿ, ಕೋಡಿಹಳ್ಳ ಸ್ಲಂ ಶಾಖೆಯ ಗಣೇಶ್, ನಿವೇಶನ ಹೋರಾಟ ಸಮಿತಿ ಮಂಗಳಮ್ಮ, ಪೂರ್ಣಿಮಾ, ನರಸಮ್ಮ, ರತ್ನಮ್ಮ ನಾಗರಾತ್ನಮ್ಮ, ಭಾರತಿ ನಗರ ಶಾಖೆಯ ಗಂಗಮ್ಮ, ಶಾರದಮ್ಮ, ಮುಂತಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...