ತುಮಕೂರು | ಸಾಮಾಜಿಕ ಕಾರ್ಯಕರ್ತರಿಗೆ ಮಾಧ್ಯಮದ ನಿರಂತರ ಸಂಪರ್ಕವಿರಬೇಕು : ಸೈಯದ್ ಯೂಸುಫ್ ಉಲ್ಲಾ

Date:

 ಮಾಧ್ಯಮವು ಕೇವಲ ಟಿವಿ ಪರದೆ ಅಥವಾ ಪತ್ರಿಕೆಯ ಪುಟಗಳಷ್ಟೇ ಅಲ್ಲ, ಅದು ಜನಮತವನ್ನು ರೂಪಿಸುವ ಶಕ್ತಿಯಾಗಿದೆ ಎಂದು ಪತ್ರಕರ್ತ ಸೈಯದ್ ಯೂಸುಫ್ ಉಲ್ಲಾ ಅಭಿಪ್ರಾಯಪಟ್ಟರು.

ತುಮಕೂರು ನಗರದ ಬಿಜಿ ಪಾಳ್ಯ ವೃತ್ತದ ಬಳಿ ಇರುವ ಇಸ್ಲಾಮಿಕ್ ಸೆಂಟರ್‌ನಲ್ಲಿ ನಡೆದ “ಮಾಧ್ಯಮ ಮತ್ತು ಸಾಮಾಜಿಕ ಕಾರ್ಯಕರ್ತರ ಜವಾಬ್ದಾರಿ” ವಿಷಯ  ಕುರಿತು ಮಾತನಾಡಿದ ಅವರು,  ಅನೇಕ ಸಾಮಾಜಿಕ ಕಾರ್ಯಕರ್ತರು “ಗೋದಿ ಮೀಡಿಯಾ”, “ಸುಳ್ಳು ಸುದ್ದಿ” ಎಂದು ಮಾಧ್ಯಮವನ್ನು ಟೀಕಿಸುತ್ತಾರೆ ಆದರೆ ತಾವೇ ಮಾಧ್ಯಮದೊಂದಿಗೆ ನಿರಂತರ ಸಂಪರ್ಕ ಬೆಳೆಸುವ ಅಭ್ಯಾಸವಿಲ್ಲ, ದಿನಪತ್ರಿಕೆ ಓದುವುದಿಲ್ಲ, ಟಿವಿ ಸುದ್ದಿಗಳನ್ನು ಗಮನಿಸುವುದಿಲ್ಲ, ಆನ್‌ಲೈನ್‌ನಲ್ಲಿ ವಿಶ್ವಾಸಾರ್ಹ ಮೂಲಗಳನ್ನು ಅನುಸರಿಸುವುದಿಲ್ಲ, ಹೀಗಿರುವಾಗ ಸಮಾಜಕ್ಕೆ ಸರಿಯಾದ ಮಾಹಿತಿ ತಲುಪಿಸುವಲ್ಲಿ ಹೇಗೆ ಯಶಸ್ವಿಯಾಗಬಹುದು?” ಎಂದು ಪ್ರಶ್ನಿಸಿದರು.

ಇದರ ಪರಿಣಾಮ ತಮ್ಮ ಕೆಲಸಕ್ಕೆ ಸಂಬಂಧಿಸಿದ ಸರಿಯಾದ ಮಾಹಿತಿ ಮತ್ತು ಅಂಕಿಅಂಶಗಳ ಕೊರತೆ, ಸಮಾಜದ ಚರ್ಚೆಗಳಲ್ಲಿ ಹಿಂದುಳಿಯುವುದು, ಜನರಿಗೆ ನಿಖರ ಮಾಹಿತಿ ನೀಡುವ ಸಾಮರ್ಥ್ಯ ಕುಸಿಯುವುದು ಕಂಡುಬರುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಧ್ಯಮದ ಬಗ್ಗೆ ಅರಿವು ಕೊರತೆ, ದಿನನಿತ್ಯ ಸುದ್ದಿಗಳನ್ನು ಅನುಸರಿಸುವ ಮನೋಭಾವದ ಅಭಾವ, ಪೂರ್ವಗ್ರಹ ಹಾಗೂ ಕೆಲ ಮಾಧ್ಯಮದ ತಪ್ಪುಗಳಿಂದ ಸಂಪೂರ್ಣ ಮಾಧ್ಯಮವನ್ನೇ ನಿರ್ಲಕ್ಷಿಸುವ ಪ್ರವೃತ್ತಿ ಸರಿಯಲ್ಲ ಎಂದು ಒತ್ತಾಯಿಸಿದರು.

ಮಾಧ್ಯಮವನ್ನು ಸಂಪೂರ್ಣವಾಗಿ ತಿರಸ್ಕರಿಸುವ ಬದಲು ಅದನ್ನು ಸಹಾಯಕ ಸಾಧನವನ್ನಾಗಿ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದ ಯೂಸುಫ್, ಪ್ರತಿದಿನ ಕನಿಷ್ಠ 15–20 ನಿಮಿಷ ದಿನಪತ್ರಿಕೆ ಓದುವುದು, ವಿಭಿನ್ನ ಮೂಲಗಳಿಂದ ಸುದ್ದಿಗಳನ್ನು ಹೋಲಿಸಿ ಓದುವುದು, ಮಾಧ್ಯಮ ಲಿಟರಸಿ ತರಬೇತಿ ಪಡೆದು ಸುಳ್ಳು-ಸತ್ಯ ಬೇರ್ಪಡಿಸುವ ಕೌಶಲ್ಯ ಬೆಳೆಸುವುದು ಮತ್ತು ಮಾಧ್ಯಮದವರೊಂದಿಗೆ ನಿಕಟ ಸಂಬಂಧ ಬೆಳೆಸುವುದು ಸಾಮಾಜಿಕ ಕಾರ್ಯಕರ್ತರಿಗೆ ಅಗತ್ಯವಿದೆ ಎಂದರು.

“ಸಾಮಾಜಿಕ ಕಾರ್ಯಕರ್ತರ ಶಕ್ತಿ ಕೇವಲ ಜನರೊಂದಿಗೆ ಇರುವ ಸಂಪರ್ಕದಲ್ಲೇ ಅಲ್ಲ, ಮಾಹಿತಿಯ ಶುದ್ಧತೆಯಲ್ಲೂ ಇದೆ. ಮಾಧ್ಯಮದ ಸಹಕಾರ ಪಡೆದು, ನಾವು ಎಲ್ಲರೂ ಸೇರಿ ಸುಳ್ಳು ಸುದ್ದಿಗೆ ಕಡಿವಾಣ ಹಾಕಿ, ಸತ್ಯ, ಶಾಂತಿ ಮತ್ತು ನ್ಯಾಯವನ್ನು ಕಾಪಾಡೋಣ” ಎಂದು ಅವರು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಜಮಾತೆ ಇಸ್ಲಾಮಿ ಹಿಂದ್ ಅಧ್ಯಕ್ಷ ಮೌಲಾನ ಅಸ್ರಾರ್ ಅಹಮದ್, ಮಕರಂ ಸೈಯಿದ್ ಸೇರಿದಂತೆ ಸಮಾಜದ ಮುಖಂಡರು ಮತ್ತು ಅನೇಕ ಸಾಮಾಜಿಕ ಕಾರ್ಯಕರ್ತರು ಪಾಲ್ಗೊಂಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...